ಜನ ಮನದ ನಾಡಿ ಮಿಡಿತ

Advertisement

ಮುಲ್ಕಿ: ಮುಲ್ಕಿ ಸುಂದರಾಮ ಶೆಟ್ಟಿ ಪ್ರಶಸ್ತಿ ಪ್ರಧಾನ, ಸಾಧಕರಿಗೆ ಸನ್ಮಾನ ಹಾಗೂ ಆಟಿದ ತಮ್ಮನದ ಕಾರ್ಯಕ್ರಮ

ಮುಲ್ಕಿ: ಬಂಟರ ಸಂಘದ 2023-24 ನೇ ಸಾಲಿನ ವಿದ್ಯಾರ್ಥಿ ವೇತನ, ಪ್ರತಿಭಾ ಪುರಸ್ಕಾರ, ಮುಲ್ಕಿ ಸುಂದರಾಮ ಶೆಟ್ಟಿ ಪ್ರಶಸ್ತಿ ಪ್ರಧಾನ, ಸಾಧಕರಿಗೆ ಸನ್ಮಾನ ಹಾಗೂ ಆಟಿದ ತಮ್ಮನದ ಕಾರ್ಯಕ್ರಮ ಕಾರ್ನಾಡ್ ಮುಲ್ಕಿ ಬಂಟರ ಭವನದಲ್ಲಿ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮುಲ್ಕಿ ಸಂಘದ ಅಧ್ಯಕ್ಷ ಕೆ. ಪುರುಷೋತ್ತಮ ಶೆಟ್ಟಿ ವಹಿಸಿದ್ದರು.
ಕಾರ್ಯಕ್ರಮವನ್ನು ಜಾಗತಿಕ ಬಂಟರ ಸಂಘದ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿ ಸಂಘ ಸಂಸ್ಥೆಗಳು ಸಮಾಜದಲ್ಲಿ ಕಟ್ಟ ಕಡೆಯ ವ್ಯಕ್ತಿಗೆ ಸವಲತ್ತುಗಳನ್ನು ಒದಗಿಸಲು ಶ್ರಮಿಸಬೇಕು. ಇದಕ್ಕೆ ಮುಲ್ಕಿ ಬಂಟರ ಸಂಘ ಮಾದರಿ ಎಂದರು.


ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಮುಂಬಯಿ ವಿ. ಕೆ.ಸಮೂಹ ಸಂಸ್ಥೆಯ ಅಧ್ಯಕ್ಷ ಕೆ.ಎಂ.ಶೆಟ್ಟಿ ಮಧ್ಯಗುತ್ತು ಬೆಂಗಳೂರು ಬಂಟರ ಸಮೂಹದ ವಿದ್ಯಾನಿಧಿ ಕಮಿಟಿಯ ಸದಾನಂದ ಸುಲಾಯ, ಮುಲ್ಕಿ ಸುಂದರಾಮ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ನ ಟ್ರಸ್ಟಿ ಸುಕುಮಾರ್ ಶೆಟ್ಟಿ ಕಕ್ವಗುತ್ತು, ಕರ್ನೀರೆ ವಿಶ್ವನಾಥ ಶೆಟ್ಟಿ, ಖ್ಯಾತ ಸಂಗೀತ ನಿರ್ದೇಶಕ ಗುರುಕಿರಣ್, ಬಪ್ಪನಾಡು ದೇವಸ್ಥಾನದ ಆಡಳಿತ ಮೊಕ್ತೇಸರ ಮನೋಹರ ಶೆಟ್ಟಿ, ಮುಲ್ಕಿ ಬಂಟರ ಸಂಘದ ಗೌರವಾಧ್ಯಕ್ಷ ಸಂತೋಷ್ ಕುಮಾರ್ ಹೆಗ್ಡೆ, ಉಪಾಧ್ಯಕ್ಷ ರಾಜೇಶ್ ಕುಮಾರ್ ಶೆಟ್ಟಿ, ಕಾರ್ಯದರ್ಶಿ ಗಂಗಾಧರ ವಿ.ಶೆಟ್ಟಿ, ಜೊತೆ ಕಾರ್ಯದರ್ಶಿ ಸಾಯಿನಾಥ ಶೆಟ್ಟಿ, ಕೋಶಾಧಿಕಾರಿ ಅಶೋಕ್ ಕುಮಾರ್ ಶೆಟ್ಟಿ, ಯುವ ವಿಭಾಗದ ದಾಮೋದರ ಶೆಟ್ಟಿ, ಮಹಿಳಾ ವಿಭಾಗದ ಚಂದ್ರಕಲಾ ಎಸ್ ಶೆಟ್ಟಿ, ಪ್ರಚಾರ ವಿಭಾಗದ ನಿಶಾಂತ್ ಶೆಟ್ಟಿ ಕಿಲೆಂಜೂರು, ಶರತ್ ಶೆಟ್ಟಿ ಸಂಕಲಕರಿಯ,ಶ್ರೀಶ ಐಕಳ ಮತ್ತಿತರರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಮುಲ್ಕಿ ಸುಂದರರಾಮ ಶೆಟ್ಟಿ ಪ್ರಶಸ್ತಿ ಯನ್ನು ಮಂಗಳೂರಿನ ಶ್ರೀ ದೇವಿ ಎಜುಕೇಷನ್ ಟ್ರಸ್ಟ್ ನ ಆಡಳಿತ ನಿರ್ದೇಶಕ ಎ ಸದಾನಂದ ಶೆಟ್ಟಿಯವರಿಗೆ ನೀಡಿ ಗೌರವಿಸಲಾಯಿತು. ಹಾಗೂ ಸಾಧಕರ ನೆಲೆಯಲ್ಲಿ ಕರುಣಾಕರ ಶೆಟ್ಟಿ ಉಳೆಪಾಡಿ, ಮುಗೇರಬೆಟ್ಟು(ಕೃಷಿ ಕ್ಷೇತ್ರ), ಸಾಯಿನಾಥ ಶೆಟ್ಟಿ (ಶಿಕ್ಷಣ ಕ್ಷೇತ್ರ), ಹರಿಪ್ರಸಾದ್ ಶೆಟ್ಟಿ (ಪಿ ಎಚ್ ಡಿ ಪ್ರಾಣಿಶಾಸ್ತ್ರ ವಿಭಾಗ), ನಿಹಾರಿಕಾ ಶೆಟ್ಟಿ ಮಾನಂಪಾಡಿ (ಕ್ರೀಡಾ ಕ್ಷೇತ್ರ) ರವರನ್ನು ಗೌರವಿಸಲಾಯಿತು. ಬಳಿಕ ಡಾ.ಸಾಯಿ ಗೀತಾ ಹೆಗ್ಡೆ ರವರಿಂದ ಆಟಿದ ತಮ್ಮನ ಹಾಗೂ ಸಾಧಕ ವಿದ್ಯಾರ್ಥಿಗಳಿಗೆ ಗೌರವ ವಿದ್ಯಾರ್ಥಿವೇತನ ಕಾರ್ಯಕ್ರಮ ನಡೆಯಿತು.

Leave a Reply

Your email address will not be published. Required fields are marked *

ಬಂಟ್ವಾಳ: ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲಕ ಕಾಣೆ..!

ಬಂಟ್ವಾಳ: ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ಚೆನ್ನಕೇಶವ ನಾಪತ್ತೆ

ಬಂಟ್ವಾಳ: ಕಾಮಗಾರಿಯ ಪ್ರಗತಿಯ ಕುರಿತು ಪುರಸಭಾ ಜನಪ್ರತಿನಿಧಿಗಳ ಸಭೆ….!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯಿತಿಗೆ ಕಿಶೋರ್ ಕುಮಾರ್ ಭೇಟಿ…!

ಬಂಟ್ವಾಳ: ಕಾರು ಮೇಲ್ಸೇತುವೆಗೆ ಡಿ*ಕ್ಕಿ; ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಚಾಲಕ…!

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

error: Content is protected !!