ಜನ ಮನದ ನಾಡಿ ಮಿಡಿತ

Advertisement

ಕಟೀಲು ನಂದಿನಿ ಬ್ರಾಹ್ಮಣ ಸಭಾ ವಾರ್ಷಿಕೋತ್ಸವ; ಬ್ರಾಹ್ಮಣ ಸಮುದಾಯದ ಅಭಿವೃದ್ಧಿ ರಕ್ಷಣೆ ಅಗತ್ಯ

ಕಟೀಲು : ಬ್ರಾಹ್ಮಣ ಸಮುದಾಯದ ಅಭಿವೃದ್ಧಿ, ರಕ್ಷಣೆಯ ಅಗತ್ಯವಿದೆ ಎಂದು ವಿದ್ವಾಂಸ ಡಾ. ಶಿಕಾರಿಪುರ ಕೃಷ್ಣಮೂರ್ತಿ ಹೇಳಿದರು.
ಅವರು ಭಾನುವಾರ ಕಟೀಲು ಸಾನ್ನಿದ್ಯ ಸಭಾಭವದಲ್ಲಿ ನಡೆದ ನಂದಿನಿ ಬ್ರಾಹ್ಮಣ ಸಭಾದ ವಾರ್ಷಿಕೋತ್ಸವದಲ್ಲಿ ಉಪನ್ಯಾಸ ನೀಡಿದರು. ಧ್ಯಾನ ಸಿದ್ದಿಗಳಿಂದ, ತತ್ವ ವಿಚಾರಗಳ ಅಧ್ಯಯನ ಚಿಂತನೆಗಳಿಂದ ಸಂಘಟನೆಯಿಂದ ಬ್ರಾಹ್ಮಣ್ಯವನ್ನು ಉಳಿಸಿಕೊಳ್ಳಬೇಕು ಎಂದು ಅವರು ಹೇಳಿದರು.
ಕಟೀಲು ದೇಗುಲದ ಅರ್ಚಕ ವೆಂಕಟರಮಣ ಆಸ್ರಣ್ಣ ಮಾತನಾಡಿ, ಸಾಧ್ಯವಾದಷ್ಟು ಗಾಯತ್ರೀ ಮಂತ್ರ ವಿಷ್ಣುಸಹಸ್ರನಾಮ ಸಹಿತ ಜಪ ಅನುಷ್ಟಾನುಗಳಿಂದ ಬ್ರಾಹ್ಮಣ್ಯವನ್ನು ಉಳಿಸಿಕೊಳ್ಳಬೇಕು. ಮಹಿಳೆಯರೂ ಮಕ್ಕಳೂ ಲಕ್ಷ್ಮೀ ಸೋಬಾನೆ ದೇವತಾ ಶ್ಲೋಕಗಳ ಮೂಲಕ ಆಧ್ಯಾತ್ಮ ಚಿಂತನೆ ಬೆಳೆಸಿಕೊಳ್ಳಬೇಕು ಎಂದರು.
ಮುಂಬೈನ ಉದ್ಯಮಿ ಜೆ.ಸಿ.ಕುಮಾರ್ , ನಂದಿನಿ ಬ್ರಾಹ್ಮಣ ಸಭಾದ ಅಧ್ಯಕ್ಷ ಡಾ. ಪದ್ಮನಾಭ ಭಟ್, ರಾಮಗೋಪಾಲ್. ಜ್ಯೋತಿ ಉಡುಪ, ಶ್ರೀಷ ಆಚಾರ್ಯ ಮತ್ತಿತರರಿದ್ದರು. ಖ್ಯಾತ ವೈದ್ಯ ಡಾ.ಭಾಸ್ಕರನಂದ ಕುಮಾರ್ ಅವರನ್ನು ಸನ್ಮಾನಿಸಲಾಯಿತು.


ನರಹರಿ ರಾವ್, ಮಚ್ಚಾರು ರಾಘವ ರಾವ್, ಜೆ.ಸಿ.ಕುಮಾರ್ ದಂಪತಿಗಳನ್ನು ಗೌರವಿಸಲಾಯಿತು. ಮಂಗಳೂರು ವಿವಿಯಿಂದ ಡಾಕ್ಟರೇಟ್ ಪದವಿ ಪಡೆದ ಡಾ. ಕಾವ್ಯಶ್ರೀ ಯರವನ್ನು ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು. ವಿವಿಧ ಸ್ಪರ್ಧಾ ವಿಜೇತರಿಗೆ ಬಹುಮಾನ ನೀಡಲಾಯಿತು.
ಕೊಡೆತ್ತೂರು ವೇದವ್ಯಾಸ ಉಡುಪ ಸ್ವಾಗತಿಸಿದರು. ಕಾರ್ಯದರ್ಶಿ ದೇವೀಪ್ರಕಾಶ ರಾವ್ ವಂದಿಸಿದರು. ಗುರುಪ್ರಸಾದ್ ಭಟ್ ನಿರೂಪಿಸಿದರು. ಸಂಘದ ಸದಸ್ಯರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

Leave a Reply

Your email address will not be published. Required fields are marked *

ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾದ ಡಾ. ಮಮತಾ ಪಿ. ಶೆಟ್ಟಿ..!

ಮಂಗಳೂರು: ಮಾಧ್ಯಮ ಮಿತ್ರ ನಾಗರಾಜ್ ಅನಾರೋಗ್ಯದಿಂದ ನಿಧನ

ಆಂಬ್ಯುಲೆನ್ಸ್ ವಾಹನವೊಂದಕ್ಕೆ ಸೈಡ್ ಬಿಡದ ಸ್ಕೂಟರ್ ಸವಾರನ ಬಂಧನ

ಮಂಗಳೂರು: ಝಕರಿಯಾ ಜೋಕಟ್ಟೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ

ಮಂಗಳೂರು: ಸೇತುವೆ ಬಳಿ ನಾಪತ್ತೆಯಾದ ಆಟೋ ಚಾಲಕನ ಶವ ಪತ್ತೆ….!

ಮಂಗಳೂರು: ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ದಂಪತಿಯ ಬಂಧನ..!

ಕಡಬ: ಮದುವೆಯ ವಾಹನ ಪಲ್ಟಿ; 20ಕ್ಕೂ ಅಧಿಕ ಮಂದಿಗೆ ಗಾಯ..!

ಹುಣಸೂರು: ಜಮೀನಿನಲ್ಲಿ ಬಿದ್ದಿದ್ದ ಕರೆಂಟ್ ತಂತಿ ಸ್ಪರ್ಶ, ತಾಯಿ- ಮಗ ಬಲಿ…!

ಬಂಟ್ವಾಳ: ಬಿ.ಸಿ.ರೋಡ್ ನಲ್ಲಿರುವ ಮೆಸ್ಕಾಂ ಭವನದಲ್ಲಿ ಜನಸಂಪರ್ಕ ಸಭೆ..!

error: Content is protected !!