ಜನ ಮನದ ನಾಡಿ ಮಿಡಿತ

Advertisement

ಕಟೀಲು ನಂದಿನಿ ಬ್ರಾಹ್ಮಣ ಸಭಾ ವಾರ್ಷಿಕೋತ್ಸವ; ಬ್ರಾಹ್ಮಣ ಸಮುದಾಯದ ಅಭಿವೃದ್ಧಿ ರಕ್ಷಣೆ ಅಗತ್ಯ

ಕಟೀಲು : ಬ್ರಾಹ್ಮಣ ಸಮುದಾಯದ ಅಭಿವೃದ್ಧಿ, ರಕ್ಷಣೆಯ ಅಗತ್ಯವಿದೆ ಎಂದು ವಿದ್ವಾಂಸ ಡಾ. ಶಿಕಾರಿಪುರ ಕೃಷ್ಣಮೂರ್ತಿ ಹೇಳಿದರು.
ಅವರು ಭಾನುವಾರ ಕಟೀಲು ಸಾನ್ನಿದ್ಯ ಸಭಾಭವದಲ್ಲಿ ನಡೆದ ನಂದಿನಿ ಬ್ರಾಹ್ಮಣ ಸಭಾದ ವಾರ್ಷಿಕೋತ್ಸವದಲ್ಲಿ ಉಪನ್ಯಾಸ ನೀಡಿದರು. ಧ್ಯಾನ ಸಿದ್ದಿಗಳಿಂದ, ತತ್ವ ವಿಚಾರಗಳ ಅಧ್ಯಯನ ಚಿಂತನೆಗಳಿಂದ ಸಂಘಟನೆಯಿಂದ ಬ್ರಾಹ್ಮಣ್ಯವನ್ನು ಉಳಿಸಿಕೊಳ್ಳಬೇಕು ಎಂದು ಅವರು ಹೇಳಿದರು.
ಕಟೀಲು ದೇಗುಲದ ಅರ್ಚಕ ವೆಂಕಟರಮಣ ಆಸ್ರಣ್ಣ ಮಾತನಾಡಿ, ಸಾಧ್ಯವಾದಷ್ಟು ಗಾಯತ್ರೀ ಮಂತ್ರ ವಿಷ್ಣುಸಹಸ್ರನಾಮ ಸಹಿತ ಜಪ ಅನುಷ್ಟಾನುಗಳಿಂದ ಬ್ರಾಹ್ಮಣ್ಯವನ್ನು ಉಳಿಸಿಕೊಳ್ಳಬೇಕು. ಮಹಿಳೆಯರೂ ಮಕ್ಕಳೂ ಲಕ್ಷ್ಮೀ ಸೋಬಾನೆ ದೇವತಾ ಶ್ಲೋಕಗಳ ಮೂಲಕ ಆಧ್ಯಾತ್ಮ ಚಿಂತನೆ ಬೆಳೆಸಿಕೊಳ್ಳಬೇಕು ಎಂದರು.
ಮುಂಬೈನ ಉದ್ಯಮಿ ಜೆ.ಸಿ.ಕುಮಾರ್ , ನಂದಿನಿ ಬ್ರಾಹ್ಮಣ ಸಭಾದ ಅಧ್ಯಕ್ಷ ಡಾ. ಪದ್ಮನಾಭ ಭಟ್, ರಾಮಗೋಪಾಲ್. ಜ್ಯೋತಿ ಉಡುಪ, ಶ್ರೀಷ ಆಚಾರ್ಯ ಮತ್ತಿತರರಿದ್ದರು. ಖ್ಯಾತ ವೈದ್ಯ ಡಾ.ಭಾಸ್ಕರನಂದ ಕುಮಾರ್ ಅವರನ್ನು ಸನ್ಮಾನಿಸಲಾಯಿತು.


ನರಹರಿ ರಾವ್, ಮಚ್ಚಾರು ರಾಘವ ರಾವ್, ಜೆ.ಸಿ.ಕುಮಾರ್ ದಂಪತಿಗಳನ್ನು ಗೌರವಿಸಲಾಯಿತು. ಮಂಗಳೂರು ವಿವಿಯಿಂದ ಡಾಕ್ಟರೇಟ್ ಪದವಿ ಪಡೆದ ಡಾ. ಕಾವ್ಯಶ್ರೀ ಯರವನ್ನು ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು. ವಿವಿಧ ಸ್ಪರ್ಧಾ ವಿಜೇತರಿಗೆ ಬಹುಮಾನ ನೀಡಲಾಯಿತು.
ಕೊಡೆತ್ತೂರು ವೇದವ್ಯಾಸ ಉಡುಪ ಸ್ವಾಗತಿಸಿದರು. ಕಾರ್ಯದರ್ಶಿ ದೇವೀಪ್ರಕಾಶ ರಾವ್ ವಂದಿಸಿದರು. ಗುರುಪ್ರಸಾದ್ ಭಟ್ ನಿರೂಪಿಸಿದರು. ಸಂಘದ ಸದಸ್ಯರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

Leave a Reply

Your email address will not be published. Required fields are marked *

ಬಂಟ್ವಾಳ: ಬಿಸಿಯೂಟ ಸಿಬ್ಬಂದಿಯ ಕೈ ತುರಿಮಣೆಯಲ್ಲಿ ಸಿಲುಕಿ ಅವಘಡ; ಸಮಯಪ್ರಜ್ಞೆ ಮೆರೆದ 5ನೇ ತರಗತಿ ಬಾಲಕ

ಮಂಗಳೂರು: ಕೆಪಿಟಿ ಸಿಗ್ನಲ್ ಬಳಿ ಭಾರೀ ಗುಂಡಿ; ಅಪಾಯದಂಚಿನಲ್ಲಿ ವಾಹನ ಸವಾರರು

ಬಂಟ್ವಾಳ: ನರಹರಿ ಪರ್ವತ ಶ್ರೀ ಸದಾಶಿವ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ ವಿಶೇಷ ತೀರ್ಥಸ್ನಾನ

ಬಂಟ್ವಾಳ: ಬಿ.ಸಿ.ರೋಡಿನಲ್ಲಿ ಸಾರ್ವಜನಿಕ ಪಾಲೆದ ಕೆತ್ತೆ ಕಷಾಯ ವಿತರಣೆ

ಬಂಟ್ವಾಳ: ದಕ್ಷಿಣ ಕನ್ನಡದ ತಾಲೂಕು ಕಚೇರಿಗಳಲ್ಲಿ ಲೋಕಾಯುಕ್ತ ಅಧಿಕಾರಿಗಳ ಪರಿಶೀಲನೆ

ಬಂಟ್ವಾಳ: ಕಾರಿಂಜ ಶ್ರೀ ಕಾರಿಂಜೇಶ್ವರ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ ಸಂಭ್ರಮ

ಮೂಡಬಿದ್ರೆ: ಮಿಜಾರ್‌ನಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಸುಟ್ಟ ಗಾಯ…!

ಮಂಗಳೂರು: ತಂಗಿಯ ಸಾವಿನ ಬೆನ್ನಲ್ಲೇ ಸಹೋದರನೂ ಶವವಾಗಿ ಪತ್ತೆ; ಮಂಗಳೂರಿನ ಲಾಡ್ಜ್‌ನಲ್ಲಿ ದುರಂತ

ಕೊಲಂಬಿಯಾ: ಕೊಲಂಬಿಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ; 111 ಮಂದಿ ಸಾವು

error: Content is protected !!