ಜನ ಮನದ ನಾಡಿ ಮಿಡಿತ

Advertisement

ಕಟೀಲು ನಂದಿನಿ ಬ್ರಾಹ್ಮಣ ಸಭಾ ವಾರ್ಷಿಕೋತ್ಸವ; ಬ್ರಾಹ್ಮಣ ಸಮುದಾಯದ ಅಭಿವೃದ್ಧಿ ರಕ್ಷಣೆ ಅಗತ್ಯ

ಕಟೀಲು : ಬ್ರಾಹ್ಮಣ ಸಮುದಾಯದ ಅಭಿವೃದ್ಧಿ, ರಕ್ಷಣೆಯ ಅಗತ್ಯವಿದೆ ಎಂದು ವಿದ್ವಾಂಸ ಡಾ. ಶಿಕಾರಿಪುರ ಕೃಷ್ಣಮೂರ್ತಿ ಹೇಳಿದರು.
ಅವರು ಭಾನುವಾರ ಕಟೀಲು ಸಾನ್ನಿದ್ಯ ಸಭಾಭವದಲ್ಲಿ ನಡೆದ ನಂದಿನಿ ಬ್ರಾಹ್ಮಣ ಸಭಾದ ವಾರ್ಷಿಕೋತ್ಸವದಲ್ಲಿ ಉಪನ್ಯಾಸ ನೀಡಿದರು. ಧ್ಯಾನ ಸಿದ್ದಿಗಳಿಂದ, ತತ್ವ ವಿಚಾರಗಳ ಅಧ್ಯಯನ ಚಿಂತನೆಗಳಿಂದ ಸಂಘಟನೆಯಿಂದ ಬ್ರಾಹ್ಮಣ್ಯವನ್ನು ಉಳಿಸಿಕೊಳ್ಳಬೇಕು ಎಂದು ಅವರು ಹೇಳಿದರು.
ಕಟೀಲು ದೇಗುಲದ ಅರ್ಚಕ ವೆಂಕಟರಮಣ ಆಸ್ರಣ್ಣ ಮಾತನಾಡಿ, ಸಾಧ್ಯವಾದಷ್ಟು ಗಾಯತ್ರೀ ಮಂತ್ರ ವಿಷ್ಣುಸಹಸ್ರನಾಮ ಸಹಿತ ಜಪ ಅನುಷ್ಟಾನುಗಳಿಂದ ಬ್ರಾಹ್ಮಣ್ಯವನ್ನು ಉಳಿಸಿಕೊಳ್ಳಬೇಕು. ಮಹಿಳೆಯರೂ ಮಕ್ಕಳೂ ಲಕ್ಷ್ಮೀ ಸೋಬಾನೆ ದೇವತಾ ಶ್ಲೋಕಗಳ ಮೂಲಕ ಆಧ್ಯಾತ್ಮ ಚಿಂತನೆ ಬೆಳೆಸಿಕೊಳ್ಳಬೇಕು ಎಂದರು.
ಮುಂಬೈನ ಉದ್ಯಮಿ ಜೆ.ಸಿ.ಕುಮಾರ್ , ನಂದಿನಿ ಬ್ರಾಹ್ಮಣ ಸಭಾದ ಅಧ್ಯಕ್ಷ ಡಾ. ಪದ್ಮನಾಭ ಭಟ್, ರಾಮಗೋಪಾಲ್. ಜ್ಯೋತಿ ಉಡುಪ, ಶ್ರೀಷ ಆಚಾರ್ಯ ಮತ್ತಿತರರಿದ್ದರು. ಖ್ಯಾತ ವೈದ್ಯ ಡಾ.ಭಾಸ್ಕರನಂದ ಕುಮಾರ್ ಅವರನ್ನು ಸನ್ಮಾನಿಸಲಾಯಿತು.


ನರಹರಿ ರಾವ್, ಮಚ್ಚಾರು ರಾಘವ ರಾವ್, ಜೆ.ಸಿ.ಕುಮಾರ್ ದಂಪತಿಗಳನ್ನು ಗೌರವಿಸಲಾಯಿತು. ಮಂಗಳೂರು ವಿವಿಯಿಂದ ಡಾಕ್ಟರೇಟ್ ಪದವಿ ಪಡೆದ ಡಾ. ಕಾವ್ಯಶ್ರೀ ಯರವನ್ನು ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು. ವಿವಿಧ ಸ್ಪರ್ಧಾ ವಿಜೇತರಿಗೆ ಬಹುಮಾನ ನೀಡಲಾಯಿತು.
ಕೊಡೆತ್ತೂರು ವೇದವ್ಯಾಸ ಉಡುಪ ಸ್ವಾಗತಿಸಿದರು. ಕಾರ್ಯದರ್ಶಿ ದೇವೀಪ್ರಕಾಶ ರಾವ್ ವಂದಿಸಿದರು. ಗುರುಪ್ರಸಾದ್ ಭಟ್ ನಿರೂಪಿಸಿದರು. ಸಂಘದ ಸದಸ್ಯರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

Leave a Reply

Your email address will not be published. Required fields are marked *

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

ಬಂಟ್ವಾಳ: ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯ ಮನೆಯಲ್ಲಿ ನಡೆದ ಕಳವು ಪ್ರಕರಣದ ಆರೋಪಿಗಳು ಸರೆ..!

ಬೆಂಗಳೂರು: ಮುಖ್ಯಮಂತ್ರಿ ಡಿ. ಕೆ. ಶಿಯವರ ಅವರ ಮುಖ್ಯ ಸಲಹೆಗಾರರನ್ನಾಗಿ ಸುನಿಲ್ ಕಾನುಗೋಲು ನೇಮಕ…!

ಮಂಗಳೂರು: ಕಲ್ಲುಗುಡ್ಡೆ ನಿವಾಸಿ ಅರ್. ಪೈನ್ ಮೆಹತಾಬ್ (18) ನಾಪತ್ತೆ..!

ಮಂಗಳೂರು: ವಿಶ್ವ ಸೈಕಲ್ ದಿನಾಚರಣೆ-2026ರ ಅಂಗವಾಗಿ ‘ಸಂಡೇಸ್ ಆನ್ ಸೈಕಲ್’ ಸೈಕಲ್ ಜಾಥಾ ಆಯೋಜನೆ..!

ಮಂಗಳೂರು: ಅಂತರರಾಷ್ಟ್ರೀಯ ಬುಕರ್ ಪ್ರಶಸ್ತಿ ಪುರಸ್ಕೃತ ದೀಪಾ ಭಸ್ತಿ ಅವರ ವಿಶೇಷ ಉಪನ್ಯಾಸ ಕಾರ್ಯಕ್ರಮ..!

error: Content is protected !!