ಕಟೀಲು : ಬ್ರಾಹ್ಮಣ ಸಮುದಾಯದ ಅಭಿವೃದ್ಧಿ, ರಕ್ಷಣೆಯ ಅಗತ್ಯವಿದೆ ಎಂದು ವಿದ್ವಾಂಸ ಡಾ. ಶಿಕಾರಿಪುರ ಕೃಷ್ಣಮೂರ್ತಿ ಹೇಳಿದರು.
ಅವರು ಭಾನುವಾರ ಕಟೀಲು ಸಾನ್ನಿದ್ಯ ಸಭಾಭವದಲ್ಲಿ ನಡೆದ ನಂದಿನಿ ಬ್ರಾಹ್ಮಣ ಸಭಾದ ವಾರ್ಷಿಕೋತ್ಸವದಲ್ಲಿ ಉಪನ್ಯಾಸ ನೀಡಿದರು. ಧ್ಯಾನ ಸಿದ್ದಿಗಳಿಂದ, ತತ್ವ ವಿಚಾರಗಳ ಅಧ್ಯಯನ ಚಿಂತನೆಗಳಿಂದ ಸಂಘಟನೆಯಿಂದ ಬ್ರಾಹ್ಮಣ್ಯವನ್ನು ಉಳಿಸಿಕೊಳ್ಳಬೇಕು ಎಂದು ಅವರು ಹೇಳಿದರು.
ಕಟೀಲು ದೇಗುಲದ ಅರ್ಚಕ ವೆಂಕಟರಮಣ ಆಸ್ರಣ್ಣ ಮಾತನಾಡಿ, ಸಾಧ್ಯವಾದಷ್ಟು ಗಾಯತ್ರೀ ಮಂತ್ರ ವಿಷ್ಣುಸಹಸ್ರನಾಮ ಸಹಿತ ಜಪ ಅನುಷ್ಟಾನುಗಳಿಂದ ಬ್ರಾಹ್ಮಣ್ಯವನ್ನು ಉಳಿಸಿಕೊಳ್ಳಬೇಕು. ಮಹಿಳೆಯರೂ ಮಕ್ಕಳೂ ಲಕ್ಷ್ಮೀ ಸೋಬಾನೆ ದೇವತಾ ಶ್ಲೋಕಗಳ ಮೂಲಕ ಆಧ್ಯಾತ್ಮ ಚಿಂತನೆ ಬೆಳೆಸಿಕೊಳ್ಳಬೇಕು ಎಂದರು.
ಮುಂಬೈನ ಉದ್ಯಮಿ ಜೆ.ಸಿ.ಕುಮಾರ್ , ನಂದಿನಿ ಬ್ರಾಹ್ಮಣ ಸಭಾದ ಅಧ್ಯಕ್ಷ ಡಾ. ಪದ್ಮನಾಭ ಭಟ್, ರಾಮಗೋಪಾಲ್. ಜ್ಯೋತಿ ಉಡುಪ, ಶ್ರೀಷ ಆಚಾರ್ಯ ಮತ್ತಿತರರಿದ್ದರು. ಖ್ಯಾತ ವೈದ್ಯ ಡಾ.ಭಾಸ್ಕರನಂದ ಕುಮಾರ್ ಅವರನ್ನು ಸನ್ಮಾನಿಸಲಾಯಿತು.
ನರಹರಿ ರಾವ್, ಮಚ್ಚಾರು ರಾಘವ ರಾವ್, ಜೆ.ಸಿ.ಕುಮಾರ್ ದಂಪತಿಗಳನ್ನು ಗೌರವಿಸಲಾಯಿತು. ಮಂಗಳೂರು ವಿವಿಯಿಂದ ಡಾಕ್ಟರೇಟ್ ಪದವಿ ಪಡೆದ ಡಾ. ಕಾವ್ಯಶ್ರೀ ಯರವನ್ನು ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು. ವಿವಿಧ ಸ್ಪರ್ಧಾ ವಿಜೇತರಿಗೆ ಬಹುಮಾನ ನೀಡಲಾಯಿತು.
ಕೊಡೆತ್ತೂರು ವೇದವ್ಯಾಸ ಉಡುಪ ಸ್ವಾಗತಿಸಿದರು. ಕಾರ್ಯದರ್ಶಿ ದೇವೀಪ್ರಕಾಶ ರಾವ್ ವಂದಿಸಿದರು. ಗುರುಪ್ರಸಾದ್ ಭಟ್ ನಿರೂಪಿಸಿದರು. ಸಂಘದ ಸದಸ್ಯರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…