ಕಟೀಲು : ಬ್ರಾಹ್ಮಣ ಸಮುದಾಯದ ಅಭಿವೃದ್ಧಿ, ರಕ್ಷಣೆಯ ಅಗತ್ಯವಿದೆ ಎಂದು ವಿದ್ವಾಂಸ ಡಾ. ಶಿಕಾರಿಪುರ ಕೃಷ್ಣಮೂರ್ತಿ ಹೇಳಿದರು.
ಅವರು ಭಾನುವಾರ ಕಟೀಲು ಸಾನ್ನಿದ್ಯ ಸಭಾಭವದಲ್ಲಿ ನಡೆದ ನಂದಿನಿ ಬ್ರಾಹ್ಮಣ ಸಭಾದ ವಾರ್ಷಿಕೋತ್ಸವದಲ್ಲಿ ಉಪನ್ಯಾಸ ನೀಡಿದರು. ಧ್ಯಾನ ಸಿದ್ದಿಗಳಿಂದ, ತತ್ವ ವಿಚಾರಗಳ ಅಧ್ಯಯನ ಚಿಂತನೆಗಳಿಂದ ಸಂಘಟನೆಯಿಂದ ಬ್ರಾಹ್ಮಣ್ಯವನ್ನು ಉಳಿಸಿಕೊಳ್ಳಬೇಕು ಎಂದು ಅವರು ಹೇಳಿದರು.
ಕಟೀಲು ದೇಗುಲದ ಅರ್ಚಕ ವೆಂಕಟರಮಣ ಆಸ್ರಣ್ಣ ಮಾತನಾಡಿ, ಸಾಧ್ಯವಾದಷ್ಟು ಗಾಯತ್ರೀ ಮಂತ್ರ ವಿಷ್ಣುಸಹಸ್ರನಾಮ ಸಹಿತ ಜಪ ಅನುಷ್ಟಾನುಗಳಿಂದ ಬ್ರಾಹ್ಮಣ್ಯವನ್ನು ಉಳಿಸಿಕೊಳ್ಳಬೇಕು. ಮಹಿಳೆಯರೂ ಮಕ್ಕಳೂ ಲಕ್ಷ್ಮೀ ಸೋಬಾನೆ ದೇವತಾ ಶ್ಲೋಕಗಳ ಮೂಲಕ ಆಧ್ಯಾತ್ಮ ಚಿಂತನೆ ಬೆಳೆಸಿಕೊಳ್ಳಬೇಕು ಎಂದರು.
ಮುಂಬೈನ ಉದ್ಯಮಿ ಜೆ.ಸಿ.ಕುಮಾರ್ , ನಂದಿನಿ ಬ್ರಾಹ್ಮಣ ಸಭಾದ ಅಧ್ಯಕ್ಷ ಡಾ. ಪದ್ಮನಾಭ ಭಟ್, ರಾಮಗೋಪಾಲ್. ಜ್ಯೋತಿ ಉಡುಪ, ಶ್ರೀಷ ಆಚಾರ್ಯ ಮತ್ತಿತರರಿದ್ದರು. ಖ್ಯಾತ ವೈದ್ಯ ಡಾ.ಭಾಸ್ಕರನಂದ ಕುಮಾರ್ ಅವರನ್ನು ಸನ್ಮಾನಿಸಲಾಯಿತು.
ನರಹರಿ ರಾವ್, ಮಚ್ಚಾರು ರಾಘವ ರಾವ್, ಜೆ.ಸಿ.ಕುಮಾರ್ ದಂಪತಿಗಳನ್ನು ಗೌರವಿಸಲಾಯಿತು. ಮಂಗಳೂರು ವಿವಿಯಿಂದ ಡಾಕ್ಟರೇಟ್ ಪದವಿ ಪಡೆದ ಡಾ. ಕಾವ್ಯಶ್ರೀ ಯರವನ್ನು ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು. ವಿವಿಧ ಸ್ಪರ್ಧಾ ವಿಜೇತರಿಗೆ ಬಹುಮಾನ ನೀಡಲಾಯಿತು.
ಕೊಡೆತ್ತೂರು ವೇದವ್ಯಾಸ ಉಡುಪ ಸ್ವಾಗತಿಸಿದರು. ಕಾರ್ಯದರ್ಶಿ ದೇವೀಪ್ರಕಾಶ ರಾವ್ ವಂದಿಸಿದರು. ಗುರುಪ್ರಸಾದ್ ಭಟ್ ನಿರೂಪಿಸಿದರು. ಸಂಘದ ಸದಸ್ಯರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿ ದೇವಿ ಮೂಕಾಂಬಿಕಾ…
ಮಳೆಗಾಲ ಆರಂಭವಾಗುತ್ತಿದ್ದಂತೆ ಸೇತುವೆಯೊಂದು ಕುಸಿದು ಬಿದ್ದ ಪರಿಣಾಮ ಹಲವು ಗ್ರಾಮಗಳ ಸಂಪರ್ಕದ ಕೊಂಡಿ ಕಳಚಿ ಬಿದ್ದು, ಜನರು ದ್ವೀಪದಂತೆ, ಹಳ್ಳಿಯೊಳಗೆ…
ಜ್ವರದಿಂದ ಬಳಲುತ್ತಿದ್ದ ಬಾಲಕಿಯೊರ್ವಳು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ಬಂಟ್ವಾಳ ತಾಲೂಕಿನ ಅಲ್ಲಿಪಾದೆ ಎಂಬಲ್ಲಿ ನಡೆದಿದೆ. ಅಲ್ಲಿಪಾದೆ ಅನೇಜ…
ಬಿಸಿರೋಡಿನ ಪ್ರಸಿದ್ದ ಕ್ಯಾಂಟೀನ್ ಒಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಸ್ವಲ್ಪದರಲ್ಲಿ ದೊಡ್ಡ ದುರಂತವೊಂದು ತಪ್ಪಿದೆ. ಬಿಸಿರೋಡಿನ ಮಿನಿ ವಿಧಾನ ಸೌಧದ…
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…