ಕಟೀಲು : ಬ್ರಾಹ್ಮಣ ಸಮುದಾಯದ ಅಭಿವೃದ್ಧಿ, ರಕ್ಷಣೆಯ ಅಗತ್ಯವಿದೆ ಎಂದು ವಿದ್ವಾಂಸ ಡಾ. ಶಿಕಾರಿಪುರ ಕೃಷ್ಣಮೂರ್ತಿ ಹೇಳಿದರು.
ಅವರು ಭಾನುವಾರ ಕಟೀಲು ಸಾನ್ನಿದ್ಯ ಸಭಾಭವದಲ್ಲಿ ನಡೆದ ನಂದಿನಿ ಬ್ರಾಹ್ಮಣ ಸಭಾದ ವಾರ್ಷಿಕೋತ್ಸವದಲ್ಲಿ ಉಪನ್ಯಾಸ ನೀಡಿದರು. ಧ್ಯಾನ ಸಿದ್ದಿಗಳಿಂದ, ತತ್ವ ವಿಚಾರಗಳ ಅಧ್ಯಯನ ಚಿಂತನೆಗಳಿಂದ ಸಂಘಟನೆಯಿಂದ ಬ್ರಾಹ್ಮಣ್ಯವನ್ನು ಉಳಿಸಿಕೊಳ್ಳಬೇಕು ಎಂದು ಅವರು ಹೇಳಿದರು.
ಕಟೀಲು ದೇಗುಲದ ಅರ್ಚಕ ವೆಂಕಟರಮಣ ಆಸ್ರಣ್ಣ ಮಾತನಾಡಿ, ಸಾಧ್ಯವಾದಷ್ಟು ಗಾಯತ್ರೀ ಮಂತ್ರ ವಿಷ್ಣುಸಹಸ್ರನಾಮ ಸಹಿತ ಜಪ ಅನುಷ್ಟಾನುಗಳಿಂದ ಬ್ರಾಹ್ಮಣ್ಯವನ್ನು ಉಳಿಸಿಕೊಳ್ಳಬೇಕು. ಮಹಿಳೆಯರೂ ಮಕ್ಕಳೂ ಲಕ್ಷ್ಮೀ ಸೋಬಾನೆ ದೇವತಾ ಶ್ಲೋಕಗಳ ಮೂಲಕ ಆಧ್ಯಾತ್ಮ ಚಿಂತನೆ ಬೆಳೆಸಿಕೊಳ್ಳಬೇಕು ಎಂದರು.
ಮುಂಬೈನ ಉದ್ಯಮಿ ಜೆ.ಸಿ.ಕುಮಾರ್ , ನಂದಿನಿ ಬ್ರಾಹ್ಮಣ ಸಭಾದ ಅಧ್ಯಕ್ಷ ಡಾ. ಪದ್ಮನಾಭ ಭಟ್, ರಾಮಗೋಪಾಲ್. ಜ್ಯೋತಿ ಉಡುಪ, ಶ್ರೀಷ ಆಚಾರ್ಯ ಮತ್ತಿತರರಿದ್ದರು. ಖ್ಯಾತ ವೈದ್ಯ ಡಾ.ಭಾಸ್ಕರನಂದ ಕುಮಾರ್ ಅವರನ್ನು ಸನ್ಮಾನಿಸಲಾಯಿತು.
ನರಹರಿ ರಾವ್, ಮಚ್ಚಾರು ರಾಘವ ರಾವ್, ಜೆ.ಸಿ.ಕುಮಾರ್ ದಂಪತಿಗಳನ್ನು ಗೌರವಿಸಲಾಯಿತು. ಮಂಗಳೂರು ವಿವಿಯಿಂದ ಡಾಕ್ಟರೇಟ್ ಪದವಿ ಪಡೆದ ಡಾ. ಕಾವ್ಯಶ್ರೀ ಯರವನ್ನು ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು. ವಿವಿಧ ಸ್ಪರ್ಧಾ ವಿಜೇತರಿಗೆ ಬಹುಮಾನ ನೀಡಲಾಯಿತು.
ಕೊಡೆತ್ತೂರು ವೇದವ್ಯಾಸ ಉಡುಪ ಸ್ವಾಗತಿಸಿದರು. ಕಾರ್ಯದರ್ಶಿ ದೇವೀಪ್ರಕಾಶ ರಾವ್ ವಂದಿಸಿದರು. ಗುರುಪ್ರಸಾದ್ ಭಟ್ ನಿರೂಪಿಸಿದರು. ಸಂಘದ ಸದಸ್ಯರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.
ಬಿಸಿಯೂಟದ ಸಿಬ್ಬಂದಿಯೊಬ್ಬರ ಕೈ ವಿದ್ಯುತ್ ಚಾಲಿತ ತುರಿಮಣೆಯಲ್ಲಿ ಸಿಲುಕಿಕೊಂಡ ಸಂದರ್ಭದಲ್ಲಿ ಸಮಯಪ್ರಜ್ಞೆ ಮೆರೆದ ನರಿಕೊಂಬು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ…
ನಗರದ ಕೆಪಿಟಿ ಸಿಗ್ನಲ್ ಸಮೀಪ ರಸ್ತೆಯ ಮಧ್ಯಭಾಗದಲ್ಲೇ ಭಾರೀ ಗುಂಡಿಯೊಂದು ನಿರ್ಮಾಣವಾಗಿದ್ದು, ವಾಹನ ಸವಾರರಿಗೆ ಅಪಾಯ ಎದುರಾಗಿದೆ. ಈ ಮಾರ್ಗದಲ್ಲಿ…
ಆಟಿ ಅಮಾವಾಸ್ಯೆಯ ಪವಿತ್ರ ದಿನದಂದು ಬಂಟ್ವಾಳ ತಾಲೂಕಿನ ಐತಿಹಾಸಿಕ ಹಾಗೂ ಪೌರಾಣಿಕ ಪ್ರಸಿದ್ಧಿಯ ನರಹರಿ ಪರ್ವತ ಶ್ರೀ ಸದಾಶಿವ ದೇವಸ್ಥಾನದಲ್ಲಿ…
ತುಳುಕೂಟ ಬಂಟ್ವಾಳ ಹಾಗೂ ಶ್ರೀ ರಕ್ತೇಶ್ವರಿ ದೇವಿ ದೇವಸ್ಥಾನ, ಬಿ.ಸಿ.ರೋಡು ಇದರ ಆಡಳಿತ ಮಂಡಳಿಯ ಆಶ್ರಯದಲ್ಲಿ ವರ್ಷಂಪ್ರತಿ ನಡೆಯುವ ಆಟಿ…
ಲೋಕಾಯುಕ್ತದಲ್ಲಿ ದಾಖಲಾಗಿರುವ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಮೇಲಾಧಿಕಾರಿಗಳ ನಿರ್ದೇಶನದ ಮೇರೆಗೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ತಾಲೂಕು ಕಚೇರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು…
ಆಟಿ ಅಮಾವಾಸ್ಯೆಯ ಪ್ರಯುಕ್ತ ತಾಲೂಕಿನ ಪ್ರಸಿದ್ಧ ಕಾರಿಂಜ ಶ್ರೀ ಕಾರಿಂಜೇಶ್ವರ ದೇವಸ್ಥಾನದಲ್ಲಿ ಬುಧವಾರ ಶ್ರದ್ಧಾಭಕ್ತಿ ಹಾಗೂ ಸಂಭ್ರಮದಿಂದ ವಿವಿಧ ಧಾರ್ಮಿಕ…