ಜನ ಮನದ ನಾಡಿ ಮಿಡಿತ

Advertisement

ಕಾಸರಗೋಡು ಜಿಲ್ಲಾ ಕೊಂಕಣಿ ಕ್ರೈಸ್ತ ಸಭಾದಿಂದ ಉಮ್ಮಾನ್ ಚಾಂಡಿಗೆ ಶ್ರದ್ಧಾಂಜಲಿ

ವರ್ಕಾಡಿ : ಕೇರಳ ಮಾಜಿ ಮುಖ್ಯಮಂತ್ರಿ ದಿ| ಉಮ್ಮನ್ ಚಾಂಡಿ ಇವರಿಗೆ ಕಾಸರಗೋಡು ಜಿಲ್ಲಾ ಕೊಂಕಣಿ ಕ್ರೈಸ್ತರ ಪರವಾಗಿ ಶ್ರದ್ಧಾಂಜಲಿ ಕಾರ್ಯಕ್ರಮವು ವರ್ಕಾಡಿಯಲ್ಲಿ ನಡೆಯಿತು.
ಕಥೊಲಿಕ್ ಸಭಾ ಕಾಸರಗೋಡು ವಲಯ ಸಮಿತಿ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಸರಗೋಡು ವಲಯ ಕಥೊಲಿಕ್ ಸಭಾ ಅಧ್ಯಕ್ಷರಾದ ರಾಜು ಜೋನ್ ಡಿ ಸೊಜಾ ವಹಿಸಿದ್ದರು.
ಜಿಲ್ಲೆಯ ಕೊಂಕಣಿ ಕ್ರೈಸ್ತ ಸಮುದಾಯದ ಸರ್ವ ರಾಜಕೀಯ ಪಕ್ಷಗಳ ಮತ್ತು ಧಾರ್ಮಿಕ ಹಾಗೂ ಸಾಮಾಜಿಕ ಮುಖಂಡರು ಬಾಗವಹಿಸಿದ ಈ ಕಾರ್ಯಕ್ರಮದಲ್ಲಿ ವರ್ಕಾಡಿ ಇಗರ್ಜಿ ಧರ್ಮ ಗುರುಗಳಾದ ವಂ.ಬೇಸಿಲ್ ವಾಸ್ ರವರು ಮುಖ್ಯ ಅಥಿತಿಯಾಗಿದ್ದರು.


ಮಂಜೇಶ್ವರ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಜೀನ್ ಲವಿನಾ ಮೊಂತೆರೊ, ಕುಂಬ್ಡಾಜೆ ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ಎಲಿಜಬೆತ್ ಕ್ರಾಸ್ತಾ, ನ್ಯಾಯವಾದಿ ಎಂ. ಎಸ್.ಥೋಮಸ್, ಡಿ ಸೋಜಾ, ಅಖಿಲ ಭಾರತ ಜನಾದಿಪತ್ಯ ಮಹಿಲಾ ಅಸೋಸಿಯೇಷನ್ ನ ಮಂಜೇಶ್ವರ ಏರಿಯ ಅಧ್ಯಕ್ಷೆ ಶ್ರೀಮತಿ ಐರಿನ್ ಜೊಸ್ಪಿನ್ , ಕುಂಬಳೆ ಬ್ಲಾಕ್ ಕಾಂಗ್ರೆಸ್‌ ಸೆಕ್ರೆಟರಿ ವಿಲ್ಫ್ರೆಡ್ ಡಿಸೊಜಾ, ಮುಂತಾದ ಗಣ್ಯರು ಉಮ್ಮನ್ ಚಾಂಡಿ ಯವರಿಗೆ ಶ್ರದ್ಧಾಂಜಲಿ ಅರ್ಪಿಸಿ ಮಾತನಾಡಿದರು.


ಕಥೊಲಿಕ್ ಸಭಾ ಕೇಂದ್ರೀಯ ಕೋಶಾಧಿಕಾರಿ ಫ್ರಾನ್ಸಿಸ್ ಮೊಂತೇರೊ, ಮಾಜಿ ಅಧ್ಯಕ್ಷರಾದ ರಾಜು ಸ್ಟೀಫನ್ ಕುಂಬ್ಳಾ, ವಿಲ್ ಫ್ರೆಡ್ ಮನೋಹರ್ ಬೆಳಾ, ಕಾರ್ಯದರ್ಶಿ ಜೊಸ್ಸಿ ಬೆಳಾ, ವರ್ಕಾಡಿ ಘಟಕ ಅಧ್ದ್ಯಕ್ಷ ಯೇಸುಪ್ರಸಾದ್ ಮುಂತಾದ ಗಣ್ಯರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

ಬಂಟ್ವಾಳ: ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯ ಮನೆಯಲ್ಲಿ ನಡೆದ ಕಳವು ಪ್ರಕರಣದ ಆರೋಪಿಗಳು ಸರೆ..!

ಬೆಂಗಳೂರು: ಮುಖ್ಯಮಂತ್ರಿ ಡಿ. ಕೆ. ಶಿಯವರ ಅವರ ಮುಖ್ಯ ಸಲಹೆಗಾರರನ್ನಾಗಿ ಸುನಿಲ್ ಕಾನುಗೋಲು ನೇಮಕ…!

ಮಂಗಳೂರು: ಕಲ್ಲುಗುಡ್ಡೆ ನಿವಾಸಿ ಅರ್. ಪೈನ್ ಮೆಹತಾಬ್ (18) ನಾಪತ್ತೆ..!

error: Content is protected !!