ವರ್ಕಾಡಿ : ಕೇರಳ ಮಾಜಿ ಮುಖ್ಯಮಂತ್ರಿ ದಿ| ಉಮ್ಮನ್ ಚಾಂಡಿ ಇವರಿಗೆ ಕಾಸರಗೋಡು ಜಿಲ್ಲಾ ಕೊಂಕಣಿ ಕ್ರೈಸ್ತರ ಪರವಾಗಿ ಶ್ರದ್ಧಾಂಜಲಿ ಕಾರ್ಯಕ್ರಮವು ವರ್ಕಾಡಿಯಲ್ಲಿ ನಡೆಯಿತು.
ಕಥೊಲಿಕ್ ಸಭಾ ಕಾಸರಗೋಡು ವಲಯ ಸಮಿತಿ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಸರಗೋಡು ವಲಯ ಕಥೊಲಿಕ್ ಸಭಾ ಅಧ್ಯಕ್ಷರಾದ ರಾಜು ಜೋನ್ ಡಿ ಸೊಜಾ ವಹಿಸಿದ್ದರು.
ಜಿಲ್ಲೆಯ ಕೊಂಕಣಿ ಕ್ರೈಸ್ತ ಸಮುದಾಯದ ಸರ್ವ ರಾಜಕೀಯ ಪಕ್ಷಗಳ ಮತ್ತು ಧಾರ್ಮಿಕ ಹಾಗೂ ಸಾಮಾಜಿಕ ಮುಖಂಡರು ಬಾಗವಹಿಸಿದ ಈ ಕಾರ್ಯಕ್ರಮದಲ್ಲಿ ವರ್ಕಾಡಿ ಇಗರ್ಜಿ ಧರ್ಮ ಗುರುಗಳಾದ ವಂ.ಬೇಸಿಲ್ ವಾಸ್ ರವರು ಮುಖ್ಯ ಅಥಿತಿಯಾಗಿದ್ದರು.
ಮಂಜೇಶ್ವರ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಜೀನ್ ಲವಿನಾ ಮೊಂತೆರೊ, ಕುಂಬ್ಡಾಜೆ ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ಎಲಿಜಬೆತ್ ಕ್ರಾಸ್ತಾ, ನ್ಯಾಯವಾದಿ ಎಂ. ಎಸ್.ಥೋಮಸ್, ಡಿ ಸೋಜಾ, ಅಖಿಲ ಭಾರತ ಜನಾದಿಪತ್ಯ ಮಹಿಲಾ ಅಸೋಸಿಯೇಷನ್ ನ ಮಂಜೇಶ್ವರ ಏರಿಯ ಅಧ್ಯಕ್ಷೆ ಶ್ರೀಮತಿ ಐರಿನ್ ಜೊಸ್ಪಿನ್ , ಕುಂಬಳೆ ಬ್ಲಾಕ್ ಕಾಂಗ್ರೆಸ್ ಸೆಕ್ರೆಟರಿ ವಿಲ್ಫ್ರೆಡ್ ಡಿಸೊಜಾ, ಮುಂತಾದ ಗಣ್ಯರು ಉಮ್ಮನ್ ಚಾಂಡಿ ಯವರಿಗೆ ಶ್ರದ್ಧಾಂಜಲಿ ಅರ್ಪಿಸಿ ಮಾತನಾಡಿದರು.
ಕಥೊಲಿಕ್ ಸಭಾ ಕೇಂದ್ರೀಯ ಕೋಶಾಧಿಕಾರಿ ಫ್ರಾನ್ಸಿಸ್ ಮೊಂತೇರೊ, ಮಾಜಿ ಅಧ್ಯಕ್ಷರಾದ ರಾಜು ಸ್ಟೀಫನ್ ಕುಂಬ್ಳಾ, ವಿಲ್ ಫ್ರೆಡ್ ಮನೋಹರ್ ಬೆಳಾ, ಕಾರ್ಯದರ್ಶಿ ಜೊಸ್ಸಿ ಬೆಳಾ, ವರ್ಕಾಡಿ ಘಟಕ ಅಧ್ದ್ಯಕ್ಷ ಯೇಸುಪ್ರಸಾದ್ ಮುಂತಾದ ಗಣ್ಯರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…