ವರ್ಕಾಡಿ : ಕೇರಳ ಮಾಜಿ ಮುಖ್ಯಮಂತ್ರಿ ದಿ| ಉಮ್ಮನ್ ಚಾಂಡಿ ಇವರಿಗೆ ಕಾಸರಗೋಡು ಜಿಲ್ಲಾ ಕೊಂಕಣಿ ಕ್ರೈಸ್ತರ ಪರವಾಗಿ ಶ್ರದ್ಧಾಂಜಲಿ ಕಾರ್ಯಕ್ರಮವು ವರ್ಕಾಡಿಯಲ್ಲಿ ನಡೆಯಿತು.
ಕಥೊಲಿಕ್ ಸಭಾ ಕಾಸರಗೋಡು ವಲಯ ಸಮಿತಿ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಸರಗೋಡು ವಲಯ ಕಥೊಲಿಕ್ ಸಭಾ ಅಧ್ಯಕ್ಷರಾದ ರಾಜು ಜೋನ್ ಡಿ ಸೊಜಾ ವಹಿಸಿದ್ದರು.
ಜಿಲ್ಲೆಯ ಕೊಂಕಣಿ ಕ್ರೈಸ್ತ ಸಮುದಾಯದ ಸರ್ವ ರಾಜಕೀಯ ಪಕ್ಷಗಳ ಮತ್ತು ಧಾರ್ಮಿಕ ಹಾಗೂ ಸಾಮಾಜಿಕ ಮುಖಂಡರು ಬಾಗವಹಿಸಿದ ಈ ಕಾರ್ಯಕ್ರಮದಲ್ಲಿ ವರ್ಕಾಡಿ ಇಗರ್ಜಿ ಧರ್ಮ ಗುರುಗಳಾದ ವಂ.ಬೇಸಿಲ್ ವಾಸ್ ರವರು ಮುಖ್ಯ ಅಥಿತಿಯಾಗಿದ್ದರು.
ಮಂಜೇಶ್ವರ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಜೀನ್ ಲವಿನಾ ಮೊಂತೆರೊ, ಕುಂಬ್ಡಾಜೆ ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ಎಲಿಜಬೆತ್ ಕ್ರಾಸ್ತಾ, ನ್ಯಾಯವಾದಿ ಎಂ. ಎಸ್.ಥೋಮಸ್, ಡಿ ಸೋಜಾ, ಅಖಿಲ ಭಾರತ ಜನಾದಿಪತ್ಯ ಮಹಿಲಾ ಅಸೋಸಿಯೇಷನ್ ನ ಮಂಜೇಶ್ವರ ಏರಿಯ ಅಧ್ಯಕ್ಷೆ ಶ್ರೀಮತಿ ಐರಿನ್ ಜೊಸ್ಪಿನ್ , ಕುಂಬಳೆ ಬ್ಲಾಕ್ ಕಾಂಗ್ರೆಸ್ ಸೆಕ್ರೆಟರಿ ವಿಲ್ಫ್ರೆಡ್ ಡಿಸೊಜಾ, ಮುಂತಾದ ಗಣ್ಯರು ಉಮ್ಮನ್ ಚಾಂಡಿ ಯವರಿಗೆ ಶ್ರದ್ಧಾಂಜಲಿ ಅರ್ಪಿಸಿ ಮಾತನಾಡಿದರು.
ಕಥೊಲಿಕ್ ಸಭಾ ಕೇಂದ್ರೀಯ ಕೋಶಾಧಿಕಾರಿ ಫ್ರಾನ್ಸಿಸ್ ಮೊಂತೇರೊ, ಮಾಜಿ ಅಧ್ಯಕ್ಷರಾದ ರಾಜು ಸ್ಟೀಫನ್ ಕುಂಬ್ಳಾ, ವಿಲ್ ಫ್ರೆಡ್ ಮನೋಹರ್ ಬೆಳಾ, ಕಾರ್ಯದರ್ಶಿ ಜೊಸ್ಸಿ ಬೆಳಾ, ವರ್ಕಾಡಿ ಘಟಕ ಅಧ್ದ್ಯಕ್ಷ ಯೇಸುಪ್ರಸಾದ್ ಮುಂತಾದ ಗಣ್ಯರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಬಿಸಿಯೂಟದ ಸಿಬ್ಬಂದಿಯೊಬ್ಬರ ಕೈ ವಿದ್ಯುತ್ ಚಾಲಿತ ತುರಿಮಣೆಯಲ್ಲಿ ಸಿಲುಕಿಕೊಂಡ ಸಂದರ್ಭದಲ್ಲಿ ಸಮಯಪ್ರಜ್ಞೆ ಮೆರೆದ ನರಿಕೊಂಬು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ…
ನಗರದ ಕೆಪಿಟಿ ಸಿಗ್ನಲ್ ಸಮೀಪ ರಸ್ತೆಯ ಮಧ್ಯಭಾಗದಲ್ಲೇ ಭಾರೀ ಗುಂಡಿಯೊಂದು ನಿರ್ಮಾಣವಾಗಿದ್ದು, ವಾಹನ ಸವಾರರಿಗೆ ಅಪಾಯ ಎದುರಾಗಿದೆ. ಈ ಮಾರ್ಗದಲ್ಲಿ…
ಆಟಿ ಅಮಾವಾಸ್ಯೆಯ ಪವಿತ್ರ ದಿನದಂದು ಬಂಟ್ವಾಳ ತಾಲೂಕಿನ ಐತಿಹಾಸಿಕ ಹಾಗೂ ಪೌರಾಣಿಕ ಪ್ರಸಿದ್ಧಿಯ ನರಹರಿ ಪರ್ವತ ಶ್ರೀ ಸದಾಶಿವ ದೇವಸ್ಥಾನದಲ್ಲಿ…
ತುಳುಕೂಟ ಬಂಟ್ವಾಳ ಹಾಗೂ ಶ್ರೀ ರಕ್ತೇಶ್ವರಿ ದೇವಿ ದೇವಸ್ಥಾನ, ಬಿ.ಸಿ.ರೋಡು ಇದರ ಆಡಳಿತ ಮಂಡಳಿಯ ಆಶ್ರಯದಲ್ಲಿ ವರ್ಷಂಪ್ರತಿ ನಡೆಯುವ ಆಟಿ…
ಲೋಕಾಯುಕ್ತದಲ್ಲಿ ದಾಖಲಾಗಿರುವ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಮೇಲಾಧಿಕಾರಿಗಳ ನಿರ್ದೇಶನದ ಮೇರೆಗೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ತಾಲೂಕು ಕಚೇರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು…
ಆಟಿ ಅಮಾವಾಸ್ಯೆಯ ಪ್ರಯುಕ್ತ ತಾಲೂಕಿನ ಪ್ರಸಿದ್ಧ ಕಾರಿಂಜ ಶ್ರೀ ಕಾರಿಂಜೇಶ್ವರ ದೇವಸ್ಥಾನದಲ್ಲಿ ಬುಧವಾರ ಶ್ರದ್ಧಾಭಕ್ತಿ ಹಾಗೂ ಸಂಭ್ರಮದಿಂದ ವಿವಿಧ ಧಾರ್ಮಿಕ…