ಕರಾವಳಿ

ಪುತ್ತೂರಿನ ವಿದ್ಯಾರಶ್ಮಿ ಶಿಕ್ಷಣ ಸಂಸ್ಥೆಗಳ 12ನೇ ವರ್ಷದ ಸ್ಥಾಪಕರ ದಿನಾಚರಣೆ ಅಂಗವಾಗಿ ಅಗಸ್ಟ್ 14 ರಂದು “ಶೀಂಟೂರು ಸ್ಕೃತಿ – 2023” ಕಾರ್ಯಕ್ರಮ ಆಯೋಜನೆ

ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ 12ನೇ ವರ್ಷದ ಸ್ಥಾಪಕರ ದಿನಾಚರಣೆ ‘ಶೀಂಟೂರು ಸ್ಮೃತಿ-2023” ಕಾರ್ಯಕ್ರಮವು ಇದೇ ಬರುವ ಅಗಸ್ಟ್ 14 ರಂದು ವಿದ್ಯಾರಶ್ಮಿ ವಿದ್ಯಾಲಯದ ವಿದ್ಯಾಚೇತನ ಸಭಾಂಗಣದಲ್ಲಿ ನಡೆಯಲಿದೆ ಎಂದು ವಿದ್ಯಾರಶ್ಮಿ ವಿದ್ಯಾಲಯದ ಸಂಚಾಲಕ ಸವಣೂರು ಸೀತಾರಾಮ ರೈ ಹೇಳಿದ್ದಾರೆ.


ಇವರು ಸುದ್ದಿಗೋಷ್ಠಿ ನಡೆಸಿ ಮಾತಾನಾಡಿ, ಸೇನಾನಿ, ಶಿಕ್ಷಕರೂ ಆಗಿದ್ದ ದಿ.ಶೀಂಟೂರು ಆದರ್ಶ ಕೃಷಿಕರೂ ಆಗಿದ್ದರು. ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳು ಎಂಬುವುದು ಅವರು ಕಂಡಿದ್ದ ಕನಸ್ಸಾಗಿತ್ತು. ಈ ನಿಟ್ಟಿನಲ್ಲಿ ಅವರ ಸ್ಮೃತಿಯನ್ನು ಪ್ರತೀ ವರ್ಷ ಆಚರಣೆ ಮಾಡಲಾಗುತ್ತಿದೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ವಹಿಸಲಿದ್ದು, ಭಾರತೀಯ ನೌಕಾದಳದ ನಿವೃತ್ತ ಸೇನಾಧಿಕಾರಿ ವಿಕ್ರಂ ದತ್ತಾ ಅವರನ್ನು ಮುಂಬಯಿ ಹೇರಂಭ ಇಂಡಸ್ಟ್ರೀಸ್ ಅಧ್ಯಕ್ಷ ಕನ್ಯಾನ ಸದಾಶಿವ ಶೆಟ್ಟಿ ಸನ್ಮಾನಿಸಲಿದ್ದಾರೆ.


ಮಂಗಳೂರು ಕಾಲೇಜ್ ಆಫ್ ಫಿಷರೀಸ್ ನ ನಿವೃತ್ತ ಡೈರೆಕ್ಟರ್ ಆಫ್ ಇನ್‌ಸ್ಟ್ರಕ್ಷನ್ ಪ್ರೊ.ಡಾ.ಡಿ.ಎಸ್.ಶೇಷಪ್ಪ ಶೀಂಟೂರು ಸ್ಮರಣೆ ಮಾಡಲಿದ್ದು, ಮುಖ್ಯ ಅತಿಥಿಗಳಾಗಿ ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಗುಜರಾತ್ ಗ್ರೀನ್ ಹೀರೋ ಆಪ್ ಇಂಡಿಯಾದ ಸಹಸಂಸ್ಥಾಪಕ ಡಾ.ಆರ್.ಕೆ.ನಾಯರ್, ದುಬೈ ಉದ್ಯಮಿ ಅಶ್ರಫ್ ಶಾ ಮಾಂತೂರು ದುಬೈ , ಸವಣೂರು ಎಸ್ ಎನ್ ಆರ್ ರೂರಲ್ ಎಜ್ಯುಕೇಶನ್ ಟ್ರಸ್ಟ್ ವಿಶ್ವಸ್ಥ ಎನ್.ಸುಂದರ ರೈ ಸವಣೂರು, ಸವಣೂರು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ ಅಶ್ವಿನ್ ಎಲ್. ಶೆಟ್ಟಿ ಪಾಲ್ಗೊಳ್ಳಲಿದ್ದಾರೆ.
ಇನ್ನೂ ಸ್ಮೃತಿ ಕಾರ್ಯಕ್ರಮದ ಅಂಗವಾಗಿ ವಿದ್ಯಾರಶ್ಮಿ ವಿದ್ಯಾಲಯದ ಆರ್ಥಿಕವಾಗಿ ಹಿಂದುಳಿದ ಕುಟುಂಬದ ಪ್ರತಿಭಾನ್ವಿತ 10 ವಿದ್ಯಾರ್ಥಿಗಳಿಗೆ ತಲಾ 5 ಸಾವಿರ ರೂ. ಶೀಂಟೂರು ಶಿಷ್ಯ ವೇತನ ವಿತರಿಸಲಾಗುವುದು ಎಂದು ಹೇಳಿದರು.

ಇನ್ನೂ ಸುದ್ದಿಗೋಷ್ಠಿಯಲ್ಲಿ ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ ಅಶ್ವಿನ್ ಎಲ್. ಶೆಟ್ಟಿ, ಸವಣೂರು ಎಸ್ ಎನ್ ಆರ್ ರೂರಲ್ ಎಜ್ಯುಕೇಶನ್ ಟ್ರಸ್ಟ್ ಟ್ರಸ್ಟಿ ಎನ್.ಸುಂದರ ರೈ, ವಿದ್ಯಾರಶ್ಮಿ ವಿದ್ಯಾಲಯದ ಪ್ರಾಂಶುಪಾಲ ಸೀತಾರಾಮ ಕೇವಳ, ಸವರ್ಣೂ ಪ್ರಥಮದರ್ಜೆ ಕಾಲೇಜು ಉಪಪ್ರಾಂಶುಪಾಲ ಎಂ.ಶೇಷಗಿರಿ ಉಪಸ್ಥಿತರಿದ್ದರು.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…

2 days ago

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…

2 days ago

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…

4 days ago

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

  ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…

4 days ago

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…

4 days ago

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…

5 days ago