ದೇಶದ ವಿವಿಧ ಭಾಗಗಳಲ್ಲಿ ಹಲವು ‘ನಕಲಿ’ ವಿಶ್ವವಿದ್ಯಾಲಯಗಳು ಕಾರ್ಯಚರಿಸುತ್ತಿದೆ ಎಂಬುವುದನ್ನು ವಿಶ್ವವಿದ್ಯಾಲಯ ಧನಸಹಾಯ ಆಯೋಗ ಅಥವಾ ಯೂನಿವರ್ಸಿಟಿ ಗ್ರಾಂಟ್ ಕಮಿಷನ್ ಗುರುಸಿದೆ.
‘ನಕಲಿ’ ವಿಶ್ವವಿದ್ಯಾಲಯಗಳಿಗೆ ಯಾವುದೇ ಪದವಿ ನೀಡಲು ಅಧಿಕಾರವಿರುವುದಿಲ್ಲ, ಒಂದು ವೇಳೆ ನಕಲಿ ವಿಶ್ವವಿದ್ಯಾಲಯಗಳಲ್ಲಿ ವಿದ್ಯಾರ್ಥಿಗಳು ಕಲಿಯುತ್ತಿದ್ದರೆ ಅವರಿಗೆ ದೊರಕುವ ಪ್ರಮಾಣ ಪತ್ರಗಳಿಗೆ ಯಾವುದೇ ವ್ಯಾಲ್ಯೂ ಇರುವುದಿಲ್ಲ. ಜೊತೆಗೆ ಯಾವುದೇ ಉದ್ಯೋಗ ಅಥವಾ ತತ್ಸಮಾನ ಸಂಬ0ಧಗಳಿಗೆ ಅರ್ಹವಾಗಿರುವುದಿಲ್ಲ ಎಂದು ಆಯೋಗ ಹೇಳಿದೆ.
ಇತ್ತೀಚೆಗೆ ಯೂನಿವರ್ಸಿಟಿ ಗ್ರಾಂಟ್ ಕಮಿಷನ್ ಗುರುತಿಸಿರುವ ಹಲವು ನಕಲಿ ವಿಶ್ವವಿದ್ಯಾಲಯಗಳು ದೇಶದ ಹಲವು ರಾಜ್ಯಗಳಲ್ಲಿ ಕಾರ್ಯಾಚರಿಸುತ್ತಿದ್ದು, ಯೂನಿವರ್ಸಿಟಿ ಗ್ರಾಂಟ್ ಕಮಿಷನ್ ಕಾಯ್ದೆಯ ನಿಬಂಧನೆಗಳಿಗೆ ವಿರುದ್ಧವಾಗಿ ಪದವಿಗಳನ್ನ ನೀಡುವ ಹಲವಾರು ವಿಶ್ವವಿದ್ಯಾಲಯಗಳನ್ನ ಆಯೋಗವು ಗುರುತಿಸಿದೆ.
ಅಂತಹ ವಿಶ್ವವಿದ್ಯಾಲಯಗಳಿಂದ ಪದವಿಗಳನ್ನ ಉನ್ನತ ಶಿಕ್ಷಣ ಮತ್ತು ಉದ್ಯೋಗ ಉದ್ದೇಶಗಳಿಗಾಗಿ ಗುರುತಿಸಲಾಗುವುದಿಲ್ಲ ಅಥವಾ ಮಾನ್ಯವಾಗುವುದಿಲ್ಲ ಎಂದು ಯುಜಿಸಿಯಿಂದ ಮಾಹಿತಿ ಲಭ್ಯವಾಗಿದೆ.
ಯುಜಿಸಿ ಅಧಿಕೃತ ನೋಟಿಸ್ನಲ್ಲಿ, “ರಾಜ್ಯ ಕಾಯ್ದೆ ಅಥವಾ ಕೇಂದ್ರ ಕಾಯ್ದೆ ಅಥವಾ ಪ್ರಾಂತೀಯ ಕಾಯ್ದೆಯಡಿ ಸ್ಥಾಪಿಸಲಾದ ವಿಶ್ವವಿದ್ಯಾಲಯಗಳು / ಸಂಸ್ಥೆಗಳು ಅಥವಾ ಯುಜಿಸಿ ಕಾಯ್ದೆ, 1956 ರ ಪ್ರಕಾರ ಪದವಿಗಳನ್ನು ನೀಡಲು ಅಥವಾ ಅಧಿಕಾರ ಹೊಂದಿರುವ ಸಂಸ್ಥೆಗಳಿ0ದ ಮಾತ್ರ ಪದವಿಯನ್ನು ನೀಡಬಹುದು ಎಂದು ವಿದ್ಯಾರ್ಥಿಗಳ, ಪೋಷಕರ ಮತ್ತು ಸಾರ್ವಜನಿಕರ ಗಮನಕ್ಕೆ ತರಲಾಗಿದೆ”
ಆದಾಗ್ಯೂ, ಯುಜಿಸಿ ಕಾಯ್ದೆಯ ನಿಬಂಧನೆಗಳಿಗೆ ವಿರುದ್ಧವಾಗಿ ಹಲವಾರು ಸಂಸ್ಥೆಗಳು ಪದವಿಗಳನ್ನು ನೀಡುತ್ತಿರುವುದು ಯುಜಿಸಿಯ ಗಮನಕ್ಕೆ ಬಂದಿದ್ದು, ಅಂತಹ ವಿಶ್ವವಿದ್ಯಾಲಯಗಳು ನೀಡುವ ಪದವಿಗಳನ್ನು ಉನ್ನತ ಶಿಕ್ಷಣ ಮತ್ತು ಉದ್ಯೋಗ ಉದ್ದೇಶಗಳಿಗಾಗಿ ಗುರುತಿಸಲಾಗುವುದಿಲ್ಲ ಅಥವಾ ಮಾನ್ಯವಾಗುವುದಿಲ್ಲ ಎಂದು ನೋಟಿಸ್’ನಲ್ಲಿ ತಿಳಿಸಿದೆ.
ಇಂತಹ ನಕಲಿ ವಿಶ್ವವಿದ್ಯಾನಿಲಯಗಳ ಹೆಸರುಗಳನ್ನು ಶೀಘ್ರದಲ್ಲಿ ಬಹಿರಂಗಪಡಿಸಲಾಗುವುದು ಎಂದು ಯುಜಿಸಿ ತಿಳಿಸಿದೆ.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ್ಯರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್ನಲ್ಲಿ ಖಾಸಗಿ ಬಸ್ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…