ಪರಕೀಯರ ಸ್ವಾಧೀನದಿಂದ ಮುಕ್ತವಾದ ಬಳಿಕ ನಮ್ಮ ಭಾರತ ಸ್ವಾತಂತ್ರೋತ್ಸವವನ್ನುಅತ್ಯಂತ ನಿಷ್ಠೆಯಿಂದ ಆಚರಿಸುತ್ತೇವೆ.
ಸ್ವಾತಂತ್ರೋತ್ಸವವನ್ನು ಇನ್ನೂ ಅರ್ಥಪೂರ್ಣ ವಾಗಿಸುವ ನಿಟ್ಟಿನಲ್ಲಿ ಮೂರು ದಿನಗಳ ಕಾಲ ಮನೆ ಮನೆಯಲ್ಲಿ ತ್ರಿವರ್ಣ ಧ್ವಜ ಹಾರಿಸುವಂತೆ ಪ್ರಧಾನಿ ನರೇಂದ್ರ ಮೋದಿ ಕಳೆದ ವರ್ಷ ಕರೆ ನೀಡಿದ್ರು.
ಇದಕ್ಕೆ ಇಡೀ ದೇಶವೇ ಸ್ಪಂದಿಸಿತ್ತು. ಅದನ್ನೇ ಪ್ರೇರಣೆಯಾಗಿ ಸ್ವೀಕರಿಸಿದ ಮಂಗಳೂರಿನ ಸಮುದಾಯವೊಂದು ತಮ್ಮ ದೇವಸ್ಥಾನ ಆವರಣದಲ್ಲಿ ಕಳೆದ ಆ. 15 ರಿಂದ ನಾಡಿದ್ದು ಆ. 15ರ ವರೆಗೆ ಪ್ರತೀ ದಿನ ಧ್ವಜಾರೋಹಣ ನೆರವೇರಿಸುವ ಮೂಲಕ ಅಮೃತ ಮಹೋತ್ಸವವನ್ನು ವಿಭಿನ್ನವಾಗಿ ಆಚರಿಸುತ್ತಿದೆ.
ಹೌದು, ಉರ್ವಸ್ಟೋರ್ ಬಳಿಯ ಅಶೋಕ ನಗರದ ದೇವಾಂಗ ಸಮುದಾಯಕ್ಕೆ ಸೇರಿದ ಶ್ರೀ ಭಗವತೀ ದೇವಸ್ಥಾನ ಮತ್ತು ಕುಕ್ಕಾಡಿ ಶ್ರೀ ಅರಸು ಮುಂಡತ್ತಾಯ ಧೃವಸ್ಥಾನದ ಆವರಣದಲ್ಲಿ 1 ವರ್ಷದಿಂದ ಧ್ವಜಾರೋಹಣ ಮಾಡುತ್ತಿದ್ದಾರೆ.
ಶರಣಪ್ಪ ಎಂಬವರು ಈ ಕಾಯಕವನ್ನು ಮಾಡುತ್ತಿದ್ದು, ಅವರ ನಿಷ್ಠೆ , ದೇಶ ಪ್ರೇಮ ಎಲ್ಲರಿಗೂ ಮಾದರಿಯಾಂತಾಗಿದೆ.
ಕ್ಷೇತ್ರದ ಆವರಣದಲ್ಲಿ ಧ್ವಜಾ ರೋಹಣದ ಯೋಜನೆ ಆ ಕ್ಷಣಕ್ಕೆ ಬಂದ ಯೋಚನೆಯಾಗಿದ್ದು, ಅನುಷ್ಠಾನಗೊಳಿಸುವಲ್ಲಿ ಒಳ್ಳೆಯ ವ್ಯಕ್ತಿಯೊಬ್ಬರು ಸಿಕ್ಕ ಕಾರಣ ವರ್ಷ ಕಾಲ ನಿರ್ವಿಘ್ನವಾಗಿ ನೆರವೇರಿತು, ಮುಂದಕ್ಕೆ ರಾಷ್ಟ್ರ ಪ್ರೇಮ ಉದ್ದೀಪನಗೊಳಿಸುವ ಇನ್ನೊಂದು ಉತ್ತಮ ಕಾರ್ಯಕ್ರಮವನ್ನು ಆಯೋಜಿಸುವ ಚಿಂತನೆ ಇದೆ ಎಂಬುವುದು ಸ್ಥಿತಿ ಮರ್ಮೂರು, ಕ್ಷೇತ್ರದ ಆಡಳಿತ ಮೊಕೇಸ್ತರರ ಮಾತು.
ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲನೋರ್ವ ಕಾಣೆಯಾದ ಘಟನೆ ನಡೆದಿದ್ದು, ನೇತ್ರಾವತಿ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ.…
ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ವ್ಯಕ್ತಿಯೋರ್ವರು ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಾಗಿದೆ. ಬೊಳ್ಳಾರಿ ನಿವಾಸಿ ಚೆನ್ನಕೇಶವ ಕಾಣೆಯಾದವರಾಗಿದ್ದು, ದೂರುದಾರರ ಪ್ರಕಾರ,…
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ತಮ್ಮ ಕಚೇರಿಯಲ್ಲಿ ಬಂಟ್ವಾಳ ಪುರಸಭೆಯ ಸಮಗ್ರ ಕುಡಿಯುವ ನೀರಿನ ಯೋಜನೆಯ 2ನೇ…
ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯತಿಗೆ ಎಮ್.ಎಲ್.ಸಿ ಕಿಶೋರ್ ಕುಮಾರ್ ಪುತ್ತೂರು ಭೇಟಿ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ…
ಐವರು ಸ್ನೇಹಿತರು ಪ್ರಯಾಣಿಸುತ್ತಿದ್ದ ಕಾರೊಂದು ನಿಯಂತ್ರಣ ಕಳೆದುಕೊಂಡು ಮೇಲ್ಸೇತುವೆಯ ರಸ್ತೆ ವಿಭಾಜಕಕ್ಕೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಚಾಲಕ ಆಸ್ಪತ್ರೆಯಲ್ಲಿ…
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…