ಪರಕೀಯರ ಸ್ವಾಧೀನದಿಂದ ಮುಕ್ತವಾದ ಬಳಿಕ ನಮ್ಮ ಭಾರತ ಸ್ವಾತಂತ್ರೋತ್ಸವವನ್ನುಅತ್ಯಂತ ನಿಷ್ಠೆಯಿಂದ ಆಚರಿಸುತ್ತೇವೆ.
ಸ್ವಾತಂತ್ರೋತ್ಸವವನ್ನು ಇನ್ನೂ ಅರ್ಥಪೂರ್ಣ ವಾಗಿಸುವ ನಿಟ್ಟಿನಲ್ಲಿ ಮೂರು ದಿನಗಳ ಕಾಲ ಮನೆ ಮನೆಯಲ್ಲಿ ತ್ರಿವರ್ಣ ಧ್ವಜ ಹಾರಿಸುವಂತೆ ಪ್ರಧಾನಿ ನರೇಂದ್ರ ಮೋದಿ ಕಳೆದ ವರ್ಷ ಕರೆ ನೀಡಿದ್ರು.
ಇದಕ್ಕೆ ಇಡೀ ದೇಶವೇ ಸ್ಪಂದಿಸಿತ್ತು. ಅದನ್ನೇ ಪ್ರೇರಣೆಯಾಗಿ ಸ್ವೀಕರಿಸಿದ ಮಂಗಳೂರಿನ ಸಮುದಾಯವೊಂದು ತಮ್ಮ ದೇವಸ್ಥಾನ ಆವರಣದಲ್ಲಿ ಕಳೆದ ಆ. 15 ರಿಂದ ನಾಡಿದ್ದು ಆ. 15ರ ವರೆಗೆ ಪ್ರತೀ ದಿನ ಧ್ವಜಾರೋಹಣ ನೆರವೇರಿಸುವ ಮೂಲಕ ಅಮೃತ ಮಹೋತ್ಸವವನ್ನು ವಿಭಿನ್ನವಾಗಿ ಆಚರಿಸುತ್ತಿದೆ.
ಹೌದು, ಉರ್ವಸ್ಟೋರ್ ಬಳಿಯ ಅಶೋಕ ನಗರದ ದೇವಾಂಗ ಸಮುದಾಯಕ್ಕೆ ಸೇರಿದ ಶ್ರೀ ಭಗವತೀ ದೇವಸ್ಥಾನ ಮತ್ತು ಕುಕ್ಕಾಡಿ ಶ್ರೀ ಅರಸು ಮುಂಡತ್ತಾಯ ಧೃವಸ್ಥಾನದ ಆವರಣದಲ್ಲಿ 1 ವರ್ಷದಿಂದ ಧ್ವಜಾರೋಹಣ ಮಾಡುತ್ತಿದ್ದಾರೆ.
ಶರಣಪ್ಪ ಎಂಬವರು ಈ ಕಾಯಕವನ್ನು ಮಾಡುತ್ತಿದ್ದು, ಅವರ ನಿಷ್ಠೆ , ದೇಶ ಪ್ರೇಮ ಎಲ್ಲರಿಗೂ ಮಾದರಿಯಾಂತಾಗಿದೆ.
ಕ್ಷೇತ್ರದ ಆವರಣದಲ್ಲಿ ಧ್ವಜಾ ರೋಹಣದ ಯೋಜನೆ ಆ ಕ್ಷಣಕ್ಕೆ ಬಂದ ಯೋಚನೆಯಾಗಿದ್ದು, ಅನುಷ್ಠಾನಗೊಳಿಸುವಲ್ಲಿ ಒಳ್ಳೆಯ ವ್ಯಕ್ತಿಯೊಬ್ಬರು ಸಿಕ್ಕ ಕಾರಣ ವರ್ಷ ಕಾಲ ನಿರ್ವಿಘ್ನವಾಗಿ ನೆರವೇರಿತು, ಮುಂದಕ್ಕೆ ರಾಷ್ಟ್ರ ಪ್ರೇಮ ಉದ್ದೀಪನಗೊಳಿಸುವ ಇನ್ನೊಂದು ಉತ್ತಮ ಕಾರ್ಯಕ್ರಮವನ್ನು ಆಯೋಜಿಸುವ ಚಿಂತನೆ ಇದೆ ಎಂಬುವುದು ಸ್ಥಿತಿ ಮರ್ಮೂರು, ಕ್ಷೇತ್ರದ ಆಡಳಿತ ಮೊಕೇಸ್ತರರ ಮಾತು.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ್ಯರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್ನಲ್ಲಿ ಖಾಸಗಿ ಬಸ್ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…