ಪರಕೀಯರ ಸ್ವಾಧೀನದಿಂದ ಮುಕ್ತವಾದ ಬಳಿಕ ನಮ್ಮ ಭಾರತ ಸ್ವಾತಂತ್ರೋತ್ಸವವನ್ನುಅತ್ಯಂತ ನಿಷ್ಠೆಯಿಂದ ಆಚರಿಸುತ್ತೇವೆ.
ಸ್ವಾತಂತ್ರೋತ್ಸವವನ್ನು ಇನ್ನೂ ಅರ್ಥಪೂರ್ಣ ವಾಗಿಸುವ ನಿಟ್ಟಿನಲ್ಲಿ ಮೂರು ದಿನಗಳ ಕಾಲ ಮನೆ ಮನೆಯಲ್ಲಿ ತ್ರಿವರ್ಣ ಧ್ವಜ ಹಾರಿಸುವಂತೆ ಪ್ರಧಾನಿ ನರೇಂದ್ರ ಮೋದಿ ಕಳೆದ ವರ್ಷ ಕರೆ ನೀಡಿದ್ರು.
ಇದಕ್ಕೆ ಇಡೀ ದೇಶವೇ ಸ್ಪಂದಿಸಿತ್ತು. ಅದನ್ನೇ ಪ್ರೇರಣೆಯಾಗಿ ಸ್ವೀಕರಿಸಿದ ಮಂಗಳೂರಿನ ಸಮುದಾಯವೊಂದು ತಮ್ಮ ದೇವಸ್ಥಾನ ಆವರಣದಲ್ಲಿ ಕಳೆದ ಆ. 15 ರಿಂದ ನಾಡಿದ್ದು ಆ. 15ರ ವರೆಗೆ ಪ್ರತೀ ದಿನ ಧ್ವಜಾರೋಹಣ ನೆರವೇರಿಸುವ ಮೂಲಕ ಅಮೃತ ಮಹೋತ್ಸವವನ್ನು ವಿಭಿನ್ನವಾಗಿ ಆಚರಿಸುತ್ತಿದೆ.
ಹೌದು, ಉರ್ವಸ್ಟೋರ್ ಬಳಿಯ ಅಶೋಕ ನಗರದ ದೇವಾಂಗ ಸಮುದಾಯಕ್ಕೆ ಸೇರಿದ ಶ್ರೀ ಭಗವತೀ ದೇವಸ್ಥಾನ ಮತ್ತು ಕುಕ್ಕಾಡಿ ಶ್ರೀ ಅರಸು ಮುಂಡತ್ತಾಯ ಧೃವಸ್ಥಾನದ ಆವರಣದಲ್ಲಿ 1 ವರ್ಷದಿಂದ ಧ್ವಜಾರೋಹಣ ಮಾಡುತ್ತಿದ್ದಾರೆ.
ಶರಣಪ್ಪ ಎಂಬವರು ಈ ಕಾಯಕವನ್ನು ಮಾಡುತ್ತಿದ್ದು, ಅವರ ನಿಷ್ಠೆ , ದೇಶ ಪ್ರೇಮ ಎಲ್ಲರಿಗೂ ಮಾದರಿಯಾಂತಾಗಿದೆ.
ಕ್ಷೇತ್ರದ ಆವರಣದಲ್ಲಿ ಧ್ವಜಾ ರೋಹಣದ ಯೋಜನೆ ಆ ಕ್ಷಣಕ್ಕೆ ಬಂದ ಯೋಚನೆಯಾಗಿದ್ದು, ಅನುಷ್ಠಾನಗೊಳಿಸುವಲ್ಲಿ ಒಳ್ಳೆಯ ವ್ಯಕ್ತಿಯೊಬ್ಬರು ಸಿಕ್ಕ ಕಾರಣ ವರ್ಷ ಕಾಲ ನಿರ್ವಿಘ್ನವಾಗಿ ನೆರವೇರಿತು, ಮುಂದಕ್ಕೆ ರಾಷ್ಟ್ರ ಪ್ರೇಮ ಉದ್ದೀಪನಗೊಳಿಸುವ ಇನ್ನೊಂದು ಉತ್ತಮ ಕಾರ್ಯಕ್ರಮವನ್ನು ಆಯೋಜಿಸುವ ಚಿಂತನೆ ಇದೆ ಎಂಬುವುದು ಸ್ಥಿತಿ ಮರ್ಮೂರು, ಕ್ಷೇತ್ರದ ಆಡಳಿತ ಮೊಕೇಸ್ತರರ ಮಾತು.
ಬಿಸಿಯೂಟದ ಸಿಬ್ಬಂದಿಯೊಬ್ಬರ ಕೈ ವಿದ್ಯುತ್ ಚಾಲಿತ ತುರಿಮಣೆಯಲ್ಲಿ ಸಿಲುಕಿಕೊಂಡ ಸಂದರ್ಭದಲ್ಲಿ ಸಮಯಪ್ರಜ್ಞೆ ಮೆರೆದ ನರಿಕೊಂಬು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ…
ನಗರದ ಕೆಪಿಟಿ ಸಿಗ್ನಲ್ ಸಮೀಪ ರಸ್ತೆಯ ಮಧ್ಯಭಾಗದಲ್ಲೇ ಭಾರೀ ಗುಂಡಿಯೊಂದು ನಿರ್ಮಾಣವಾಗಿದ್ದು, ವಾಹನ ಸವಾರರಿಗೆ ಅಪಾಯ ಎದುರಾಗಿದೆ. ಈ ಮಾರ್ಗದಲ್ಲಿ…
ಆಟಿ ಅಮಾವಾಸ್ಯೆಯ ಪವಿತ್ರ ದಿನದಂದು ಬಂಟ್ವಾಳ ತಾಲೂಕಿನ ಐತಿಹಾಸಿಕ ಹಾಗೂ ಪೌರಾಣಿಕ ಪ್ರಸಿದ್ಧಿಯ ನರಹರಿ ಪರ್ವತ ಶ್ರೀ ಸದಾಶಿವ ದೇವಸ್ಥಾನದಲ್ಲಿ…
ತುಳುಕೂಟ ಬಂಟ್ವಾಳ ಹಾಗೂ ಶ್ರೀ ರಕ್ತೇಶ್ವರಿ ದೇವಿ ದೇವಸ್ಥಾನ, ಬಿ.ಸಿ.ರೋಡು ಇದರ ಆಡಳಿತ ಮಂಡಳಿಯ ಆಶ್ರಯದಲ್ಲಿ ವರ್ಷಂಪ್ರತಿ ನಡೆಯುವ ಆಟಿ…
ಲೋಕಾಯುಕ್ತದಲ್ಲಿ ದಾಖಲಾಗಿರುವ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಮೇಲಾಧಿಕಾರಿಗಳ ನಿರ್ದೇಶನದ ಮೇರೆಗೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ತಾಲೂಕು ಕಚೇರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು…
ಆಟಿ ಅಮಾವಾಸ್ಯೆಯ ಪ್ರಯುಕ್ತ ತಾಲೂಕಿನ ಪ್ರಸಿದ್ಧ ಕಾರಿಂಜ ಶ್ರೀ ಕಾರಿಂಜೇಶ್ವರ ದೇವಸ್ಥಾನದಲ್ಲಿ ಬುಧವಾರ ಶ್ರದ್ಧಾಭಕ್ತಿ ಹಾಗೂ ಸಂಭ್ರಮದಿಂದ ವಿವಿಧ ಧಾರ್ಮಿಕ…