ಪರಕೀಯರ ಸ್ವಾಧೀನದಿಂದ ಮುಕ್ತವಾದ ಬಳಿಕ ನಮ್ಮ ಭಾರತ ಸ್ವಾತಂತ್ರೋತ್ಸವವನ್ನುಅತ್ಯಂತ ನಿಷ್ಠೆಯಿಂದ ಆಚರಿಸುತ್ತೇವೆ.
ಸ್ವಾತಂತ್ರೋತ್ಸವವನ್ನು ಇನ್ನೂ ಅರ್ಥಪೂರ್ಣ ವಾಗಿಸುವ ನಿಟ್ಟಿನಲ್ಲಿ ಮೂರು ದಿನಗಳ ಕಾಲ ಮನೆ ಮನೆಯಲ್ಲಿ ತ್ರಿವರ್ಣ ಧ್ವಜ ಹಾರಿಸುವಂತೆ ಪ್ರಧಾನಿ ನರೇಂದ್ರ ಮೋದಿ ಕಳೆದ ವರ್ಷ ಕರೆ ನೀಡಿದ್ರು.
ಇದಕ್ಕೆ ಇಡೀ ದೇಶವೇ ಸ್ಪಂದಿಸಿತ್ತು. ಅದನ್ನೇ ಪ್ರೇರಣೆಯಾಗಿ ಸ್ವೀಕರಿಸಿದ ಮಂಗಳೂರಿನ ಸಮುದಾಯವೊಂದು ತಮ್ಮ ದೇವಸ್ಥಾನ ಆವರಣದಲ್ಲಿ ಕಳೆದ ಆ. 15 ರಿಂದ ನಾಡಿದ್ದು ಆ. 15ರ ವರೆಗೆ ಪ್ರತೀ ದಿನ ಧ್ವಜಾರೋಹಣ ನೆರವೇರಿಸುವ ಮೂಲಕ ಅಮೃತ ಮಹೋತ್ಸವವನ್ನು ವಿಭಿನ್ನವಾಗಿ ಆಚರಿಸುತ್ತಿದೆ.
ಹೌದು, ಉರ್ವಸ್ಟೋರ್ ಬಳಿಯ ಅಶೋಕ ನಗರದ ದೇವಾಂಗ ಸಮುದಾಯಕ್ಕೆ ಸೇರಿದ ಶ್ರೀ ಭಗವತೀ ದೇವಸ್ಥಾನ ಮತ್ತು ಕುಕ್ಕಾಡಿ ಶ್ರೀ ಅರಸು ಮುಂಡತ್ತಾಯ ಧೃವಸ್ಥಾನದ ಆವರಣದಲ್ಲಿ 1 ವರ್ಷದಿಂದ ಧ್ವಜಾರೋಹಣ ಮಾಡುತ್ತಿದ್ದಾರೆ.
ಶರಣಪ್ಪ ಎಂಬವರು ಈ ಕಾಯಕವನ್ನು ಮಾಡುತ್ತಿದ್ದು, ಅವರ ನಿಷ್ಠೆ , ದೇಶ ಪ್ರೇಮ ಎಲ್ಲರಿಗೂ ಮಾದರಿಯಾಂತಾಗಿದೆ.
ಕ್ಷೇತ್ರದ ಆವರಣದಲ್ಲಿ ಧ್ವಜಾ ರೋಹಣದ ಯೋಜನೆ ಆ ಕ್ಷಣಕ್ಕೆ ಬಂದ ಯೋಚನೆಯಾಗಿದ್ದು, ಅನುಷ್ಠಾನಗೊಳಿಸುವಲ್ಲಿ ಒಳ್ಳೆಯ ವ್ಯಕ್ತಿಯೊಬ್ಬರು ಸಿಕ್ಕ ಕಾರಣ ವರ್ಷ ಕಾಲ ನಿರ್ವಿಘ್ನವಾಗಿ ನೆರವೇರಿತು, ಮುಂದಕ್ಕೆ ರಾಷ್ಟ್ರ ಪ್ರೇಮ ಉದ್ದೀಪನಗೊಳಿಸುವ ಇನ್ನೊಂದು ಉತ್ತಮ ಕಾರ್ಯಕ್ರಮವನ್ನು ಆಯೋಜಿಸುವ ಚಿಂತನೆ ಇದೆ ಎಂಬುವುದು ಸ್ಥಿತಿ ಮರ್ಮೂರು, ಕ್ಷೇತ್ರದ ಆಡಳಿತ ಮೊಕೇಸ್ತರರ ಮಾತು.
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…
ಕಡಬ ತಾಲೂಕು ಕೊಯಿಲ ಮತ್ತು ರಾಮಕುಂಜ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕ ರಸ್ತೆಯುದ್ದಕ್ಕೂ ಉಂಟಾಗಿರುವ ಹೊಂಡಗಳಿಗೆ ಸ್ಥಳಿಯರು ಶ್ರಮ…
ರಾಷ್ಟ್ರೀಯ ಹೆದ್ದಾರಿಯ ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದಲ್ಲಿ ಸರ್ವೀಸ್ ರಸ್ತೆ ಹೊಂಡಗುಂಡಿಗಳಿಂದ ತುಂಬಿ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ ಎಂದು ಸ್ಥಳೀಯರು…
ಮಾದಕ ದ್ರವ್ಯ ಸಾಗಾಟ ಹಾಗೂ ಮಾರಾಟ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪದಡಿ ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯ 80 ಬಡಗಬೆಟ್ಟು ಗ್ರಾಮದ…
ಮಂಗಳೂರು ನಗರದ ಪದವು ಗ್ರಾಮದ ಜೋಡುಕಟ್ಟೆ ಮರೋಳಿ ಹತ್ತಿರ ಜೂನ್ 11 ರಂದು ಅಕ್ರಮವಾಗಿ ಆನೆದಂತಗಳನ್ನು ಮಾರಾಟಕ್ಕೆ ಯತ್ನಿಸುತಿದ್ದವರನ್ನು ಬಂಧಿಸಲಾಗಿದೆ.…