ಕರಾವಳಿ

ಪ್ರಪಂಚದ ಅತೀ ಎತ್ತರದ ಶಿಖರದಲ್ಲಿ ತುಳುನಾಡಿನ ಧ್ವಜವನ್ನು ಹಾರಿಸಿದ ಉಡುಪಿಯ ಸಿದ್ವಿನ್ ಶೆಟ್ಟಿ

ತುಳುನಾಡಿನ ಧ್ವಜವನ್ನು ವಿಶ್ವದ ಅತೀ ಎತ್ತರದ ಕಾಶ್ಮೀರದ ಲಡಾಖ್‌ನ ಉಮ್ಲಿಂಗ್ ಲಾ ಮತ್ತು ಮೌಂಟ್ ಎವರೆಸ್ಟ್ ಬೇಸ್ ಕ್ಯಾಂಪ್‌ನ ಮೇಲೆ ಹಾರಿಸುವ ಮೂಲಕ ಉಡುಪಿಯ ಬ್ರಹ್ಮಗಿರಿಯ ಯುವಕ ಸಿದ್ವಿನ್ ಶೆಟ್ಟಿ ತುಳುವರ ಪ್ರೀತಿಗೆ ಪಾತ್ರರಾಗಿದ್ದಾರೆ.

ಟ್ರೆಕ್ಕಿಂಗ್‌ನಲ್ಲಿ ಆಸಕ್ತಿ ಹೊಂದಿದ್ದ ಇವರು 2023ರ ಮೇ 6ರಂದು ಉಡುಪಿಯಿಂದ ತನ್ನ ಹಿಮಾಲಯನ್ ಬೈಕ್‌ನಲ್ಲಿ ಪ್ರಯಾಣ ಆರಂಭಿಸಿ ಭಾರತದ 21 ರಾಜ್ಯಗಳು, 5 ಕೇಂದ್ರಾಡಳಿತ ಪ್ರದೇಶಗಳನ್ನು ಮತ್ತು ನೇಪಾಲ ಮತ್ತು ಭೂತಾನ್ ದೇಶಗಳನ್ನು ಸುತ್ತಿ ಜು. 19ರಂದು ಉಡುಪಿಗೆ ಮರಳಿದ್ದಾರೆ.
ಇದರೊಂದಿಗೆ ವಿಶ್ವದ ಅತೀ ಎತ್ತರದ ಪ್ರದೇಶವಾದ ಉಮ್ಲಿಂಗ್ ಲಾ (19,024 ಅಡಿ), ಮೌಂಟ್ ಎವರೆಸ್ಟ್ ಬೇಸ್ ಕ್ಯಾಂಪ್ (17,598 ಅಡಿ ಎತ್ತರ) ಮತ್ತು ವಿಶ್ವದ ಅತೀ ಎತ್ತರದ ಶಿವ ದೇವಾಲಯ ತುಂಗನಾಥ್ ಅನ್ನು ಕೂಡ ಸ್ಪರ್ಶಿಸಿ ಬಂದಿದ್ದಾರೆ.

ಸಿದ್ವಿನ್ ಅವರು ಉಡುಪಿಯ ಸುರೇಶ್ ಕೃಷ್ಣ ಶೆಟ್ಟಿ ಮತ್ತು ಸುಜಯಾ ಎಸ್. ಶೆಟ್ಟಿ ಅವರ ಪುತ್ರ. ಪ್ರಾಥಮಿಕ ಹಾಗೂ ಹೈಸ್ಕೂಲ್ ಶಿಕ್ಷಣವನ್ನು ಉಡುಪಿಯ ಸೈಂಟ್ ಮೇರಿಸ್ ಶಾಲೆಯಲ್ಲಿ ಪೂರೈಸಿ, ಪಿಯು ಶಿಕ್ಷಣವನ್ನು ಬ್ರಹ್ಮಾವರದ ಜಿಎಮ್ ವಿದ್ಯಾನಿಕೇತನದಲ್ಲಿ ಮಾಡಿದ್ದಾರೆ.
ಬಳಿಕ ಕಂಪ್ಯೂಟರ್ ಸೈನ್ಸ್ ನಲ್ಲಿ ಎಂಜಿನಿಯರಿ0ಗ್ ಪದವಿಯನ್ನು ನಿಟ್ಟೆ ಕಾಲೇಜಿನಿಂದ ಪಡೆದಿದ್ದು ಚಿಕ್ಕಂದಿನಿ0ದಲೇ ಚಾರಣದ ಬಗ್ಗೆ ವಿಶೇಷ ಆಸಕ್ತಿ ಹೊಂದಿದವರಾಗಿದ್ದಾರೆ.

ಚಾರಣದೊ0ದಿಗೆ ಇಡೀ ದೇಶವನ್ನು ಸುತ್ತಿ ಅಲ್ಲಿನ ಶಿವ ದೇವಾಲಯಗಳನ್ನು ಸಂದರ್ಶಿಸಬೇಕು ಎನ್ನುವುದು ಅವರ ಆಸೆಯಾಗಿತ್ತು. ಅದರೊಂದಿಗೆ ತುಳುನಾಡಿನ ಧ್ವಜವನ್ನು ವಿಶ್ವದ ಎತ್ತರದ ಪ್ರದೇಶದಲ್ಲಿ ಇದುವರೆಗೆ ಉಡುಪಿಯ ಯಾವುದೇ ಚಾರಣಿಗರು ಹಾರಿಸಿಲ್ಲ. ಈ ಸಾಧನೆಯನ್ನು ತಾನು ಮಾಡಬೇಕು ಎನ್ನುವ ಆಸೆಯಿಂದ ಕಠಿಣ ಪರಿಶ್ರಮದೊಂದಿಗೆ ತನ್ನ ಕನಸನ್ನು ನನಸು ಮಾಡಿದ್ದಾರೆ.
ಈ ಬಗ್ಗೆ ಮಾತನಾಡಿದ ಸಿದ್ವಿನ್ ಶೆಟ್ಟಿ “ನಾನು ನನ್ನ ಪ್ರಯಾಣವನ್ನು ಯಾವುದೇ ರೀತಿಯ ಸುದ್ದಿಯನ್ನು ಮಾಡದೇ ಕೇವಲ ನನ್ನ ತಂದೆ ತಾಯಿ ಮತ್ತು ಸಹೋದರಿಗೆ ತಿಳಿಸುವ ಮೂಲಕ ಮೌನವಾಗಿ ಆರಂಭಿಸಿದೆ. ಏಕೆಂದರೆ 18,000 ಕಿಮೀ ಪ್ರಯಾಣ ಕ್ರಮಿಸುವುದು ಎಷ್ಟು ಕಷ್ಟ ಸಾಧ್ಯ ಎನ್ನುವ ಅರಿವು ನನಗಿತ್ತು. ಆದರೆ ನನ್ನ ಮನೆಯವರ ಬೆಂಬಲ ನನ್ನೊಂದಿಗೆ ಇದ್ದ ಕಾರಣ ನಾನು ಅದನ್ನು ಕ್ರಮಿಸಲು ಸಾಧ್ಯವಾಯಿತು.


ನನ್ನ ಬೈಕ್ ಸವಾರಿಯ ಸಮಯದಲ್ಲಿ ಹಲವಾರು ಸೇತುವೆಗಳು, ಭೂಕುಸಿತಗಳು, ಪ್ರವಾಹ ಪ್ರದೇಶಗಳು, ಹೊಳೆಗಳು, ಮಂಜುಗಡ್ಡೆಯ ಪ್ರದೇಶಗಳು, ಮರಳು, ಕಲ್ಲುಗಳು, ಪರ್ವತಗಳು, ದಟ್ಟವಾದ ಕಾಡುಗಳನ್ನು ದಾಟಿ ಮುಂದುವರೆದಿದ್ದೇನೆ. ನನ್ನ ಕ್ರೀಡಾ ಟೀ ಶರ್ಟ್ನಲ್ಲಿ +50 ಡಿಗ್ರಿಗಳಿಂದ -16 ರವರೆಗೆ ತಾಪಮಾನವನ್ನು ತಡೆದುಕೊಂಡು ಪ್ರಯಾಣಿಸಿದ್ದೇನೆ. ಯಾವುದೇ ಚರ್ಮ ರಕ್ಷಕ ಕ್ರೀಮ್ಗಳು ಅಥವಾ ಥರ್ಮಲ್ಗಳಿಲ್ಲದೆ ಪ್ರಯಾಣಿಸಿದ್ದು ಮನೆ ಬಿಟ್ಟಾಗಿನಿಂದ ಇಂದಿನ ತನಕ ಯಾವುದೇ ರೀತಿ ಮಾತ್ರೆಗಳನ್ನು ಕೂಡ ಉಪಯೋಗಿಸದೆ ಇರುವುದು ಕೂಡ ವಿಶೇಷವಾಗಿದೆ.

ಕೆಲವೊಮ್ಮೆ ದಿನಕ್ಕೆ ಒಂದೇ ಬಾರಿ ಊಟವನ್ನು ಮಾಡುತ್ತಿದ್ದೆ. ಈ ಎಲ್ಲಾ ಪರೀಕ್ಷೆಗಳನ್ನು ನಾನು ಉದ್ದೇಶಪೂರ್ವಕವಾಗಿ ಮಾಡಿದ್ದು ನಾನು ಈ ಪ್ರಯಾಣಕ್ಕೆ ಎಷ್ಟೊಂದು ಸಮರ್ಥನಿದ್ದೇನೆ ಮತ್ತು ಹೇಗೆ ನಿಭಾಯಿಸುತ್ತೇನೆ ಎನ್ನುವುದನ್ನು ಅರಿಯುವ ನಿಟ್ಟಿನಲ್ಲಿ ಹೊರಟಿದ್ದು ಅದರಲ್ಲಿ ನಾನು ಉತ್ತೀರ್ಣನಾಗಿದ್ದೇನೆ ಎಂಬ ಹೆಮ್ಮೆ ಇದೆ” ಎಂದಿದ್ದಾರೆ.

ನನ್ನ ಬೈಕ್ ಪ್ರಯಾಣದಲ್ಲಿ 100ಕ್ಕೂ ಅಧಿಕ ದೇವಸ್ಥಾನಗಳು, ಗುರುದ್ವಾರ, ಚರ್ಚ್ ಮತ್ತು ಮಸೀದಿಗಳ ವಾಸ್ತು ಶಿಲ್ಪವನ್ನು ಅನುಭವಿಸುವ ಅವಕಾಶ ದೊರಕಿತು. ಈ ವೇಳೆ ಬಹುತೇಕ ಎಲ್ಲಾ ಧರ್ಮದ ಜನರೊಂದಿಗೆ ಬೆರೆಯುವ ಅವರೊಂದಿಗೆ ಸಂವಾದ ಮಾಡುವುದರೊಂದಿಗೆ ಅವರ ಸಂಸ್ಕೃತಿ ಆಚಾರ ವಿಚಾರಗಳನ್ನು ತಿಳಿಯಲು ಕೂಡ ಸಾಧ್ಯವಾಯಿತು. ಇದರೊಂದಿಗೆ ಭಾರತ, ನೇಪಾಳ, ಭೂತಾನ್ ದೇಶಗಳ ಸಶಸ್ತ್ರ ಪಡೆಗಳ ಅಧಿಕಾರಿಗಳನ್ನು ಕೂಡ ಭೇಟಿಯಾಗಿದ್ದು ಮತ್ತೊಂದು ವಿಶೇಷತೆ ಆಗಿದೆ.

ನನ್ನ ಪ್ರಯಾಣದ ಉದ್ದಕ್ಕೂ ಎಲ್ಲಾ ರೀತಿಯ ಸಹಕಾರ ಪ್ರತಿ ಭಾಗದ ಜನರು ನನಗೆ ನೀಡಿದರು. ನನ್ನ ಪ್ರಯಾಣದ ಮುಖ್ಯವಾದ ಸಾಧನೆ ಎಂದರೆ ಸುಮಾರು 17,598 ಅಡಿ ಎತ್ತರ ಮೌಂಟ್ ಎವರೆಸ್ಟ್ ಬೇಸ್ ಕ್ಯಾಂಪನ್ನು ಕೇವಲ 6 ದಿನಗಳಲ್ಲಿ ಯಾವುದೇ ರೀತಿ ಮಾರ್ಗದರ್ಶಕರಿಲ್ಲದೆ ಆರೋಹಣ ಮಾಡಿ ಪೂರ್ಣಗೊಳಿಸಿರುವುದಾಗಿದೆ. ಈ ಎತ್ತರದ ಪ್ರದೇಶಕ್ಕೆ ತೆರಳಿ ಅಲ್ಲಿ ತುಳುನಾಡಿನ ಧ್ವಜವನ್ನು ಹಾರಿಸಿದ್ದೇನೆ ಎಂಬ ಹೆಮ್ಮೆ ನನಗಿದೆ.
ಒಂದು ವರ್ಷದ ಹಿಂದೆ ಅಪಘಾತದಿಂದ ನನ್ನ ಮಂಡಿಯ ಚಿಪ್ಪು ಮುರಿದ್ದಿದ್ದು ಇದರ ನಡುವೆಯೂ ಈ ಚಾರಣ ಮಾಡುವ ಅದೃಷ್ಠ ನನಗೆ ಸಿಕ್ಕಿದೆ. ಈ ನನ್ನ ಸಾಧನೆಗೆ ಅಲ್ಲಿನ ಅಧಿಕಾರಿಗಳು ಪ್ರಶಂಸಾ ಪತ್ರವನ್ನು ಕೂಡ ನೀಡಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಬಂಟ್ವಾಳ: ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲಕ ಕಾಣೆ..!

ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲನೋರ್ವ ಕಾಣೆಯಾದ ಘಟನೆ ನಡೆದಿದ್ದು, ನೇತ್ರಾವತಿ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ.…

8 hours ago

ಬಂಟ್ವಾಳ: ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ಚೆನ್ನಕೇಶವ ನಾಪತ್ತೆ

ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ವ್ಯಕ್ತಿಯೋರ್ವರು ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಾಗಿದೆ. ಬೊಳ್ಳಾರಿ ನಿವಾಸಿ ಚೆನ್ನಕೇಶವ ಕಾಣೆಯಾದವರಾಗಿದ್ದು, ದೂರುದಾರರ ಪ್ರಕಾರ,…

8 hours ago

ಬಂಟ್ವಾಳ: ಕಾಮಗಾರಿಯ ಪ್ರಗತಿಯ ಕುರಿತು ಪುರಸಭಾ ಜನಪ್ರತಿನಿಧಿಗಳ ಸಭೆ….!

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ತಮ್ಮ ಕಚೇರಿಯಲ್ಲಿ ಬಂಟ್ವಾಳ ಪುರಸಭೆಯ ಸಮಗ್ರ ಕುಡಿಯುವ ನೀರಿನ ಯೋಜನೆಯ 2ನೇ…

9 hours ago

ಬಂಟ್ವಾಳ: ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯಿತಿಗೆ ಕಿಶೋರ್ ಕುಮಾರ್ ಭೇಟಿ…!

ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯತಿಗೆ ಎಮ್.ಎಲ್.ಸಿ ಕಿಶೋರ್ ಕುಮಾರ್ ಪುತ್ತೂರು ಭೇಟಿ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ…

9 hours ago

ಬಂಟ್ವಾಳ: ಕಾರು ಮೇಲ್ಸೇತುವೆಗೆ ಡಿ*ಕ್ಕಿ; ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಚಾಲಕ…!

ಐವರು ಸ್ನೇಹಿತರು ಪ್ರಯಾಣಿಸುತ್ತಿದ್ದ ಕಾರೊಂದು ನಿಯಂತ್ರಣ ಕಳೆದುಕೊಂಡು ಮೇಲ್ಸೇತುವೆಯ ರಸ್ತೆ ವಿಭಾಜಕಕ್ಕೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಚಾಲಕ ಆಸ್ಪತ್ರೆಯಲ್ಲಿ…

9 hours ago

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…

1 day ago