ಕಂಬಳಬೆಟ್ಟು : ಕ್ಷುಲ್ಲಕ ಕಾರಣಕ್ಕೆ ನೆರೆಹೊರೆಯ ಎರಡು ಕುಟುಂಬಗಳ ನಡುವೆ ಜಗಳ ನಡೆದಿದ್ದು, ಮಾನಭಂಗ ಯತ್ನ ನಡೆದ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಂಬಳಬೆಟ್ಟು ಕಾಂಪ್ಲೆಕ್ಸ್ನಲ್ಲಿ ವಾಸವಿರುವ ಜೈನುಲ್ ಅಬೀದ್ ಅವರ ಪತ್ನಿ ಆಯಿಶನ್ ಮುಬೀನಾ ಅವರು ವಿಟ್ಲ ಪೊಲೀಸರಿಗೆ ದೂರು ನೀಡಿದ್ದು, ಅದರಂತೆ ಅದೇ ಕಾಂಪ್ಲೆಕ್ಸ್ ನಲ್ಲಿ ವಾಸವಿರುವ ಆರೋಪಿಗಳಾದ ಹನ್ನತ್ ಆಕೆಯ ಸಹೋದರಿ, ಆಕೆಯ ತಾಯಿ, ಹಾಗೂ ಹನ್ನತ್ ಮಾಡನ ವಿರುದ್ಧ ಮಾನಭಂಗ ಯತ್ನ ಪ್ರಕರಣ ದಾಖಲಾಗಿದೆ.
ವಿಟ್ಲಮುನ್ನೂರು ಗ್ರಾಮದ ಕಂಬಳಬೆಟ್ಟು ಕಾಂಪ್ಲೆಕ್ಸ್ನಲ್ಲಿ ವಾಸವಿರುವ ಮುಬೀನಾ ತನ್ನ ತವರು ಮನೆಗೆ ಹೋಗಲು ಹೊರಡುತ್ತಿದ್ದ ಸಮಯ ನೆರೆ ಮನೆಯ ನಿವಾಸಿ ಹನ್ನತ್ ಮಗಳಾದ ಮಹದಿಗೆ ಕೆಟ್ಟ ಶಬ್ದಗಳಿಂದ ಬೈಯುತ್ತಿದ್ದರು. ಈ ಬಗ್ಗೆ ವಿಚಾರಿಸಿದಾಗ ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಮಾಡುವುದಾಗಿ ಜೀವ ಬೆದರಿಕೆ ಹಾಕಿ ಹನ್ನತ್ನ ಮಾವ ಮೈಮೇಲೆ ಕೈ ಹಾಕಿ ಬುರ್ಖಾವನ್ನು ಹರಿದು ಹಾಕಿ, ಮಾನಭಂಗ ಯತ್ನಿಸಿದ್ದು ಆ ಸಮಯ ಮುಬೀನಾ ನೆಲಕ್ಕೆ ಬಿದ್ದಾಗ ಹೊಟ್ಟೆಗೆ ಹನ್ನತ್ ಮತ್ತು ಆಕೆಯ ತಾಯಿ ಕಾಲಿನಿಂದ ತುಳಿದುದರಿಂದ ಗಾಯಗೊಂಡಿರುತ್ತಾರೆ.
ಗಾಯಾಳುಗಳು ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…