ಇತ್ತೀಚೆಗೆ ಕಾಡನ್ನ ತೊರೆದು ನಾಡಿಗೆ ಬರ್ತಿರೋ ಪ್ರಾಣಿಗಳ ಸಂಖ್ಯೆ ದಿನೇ ದಿನೆ ಹೆಚ್ಚಾಗ್ತಾನೆ ಇದೆ. ಅದರಲ್ಲೂ ನಾಡಿಗೆ ಬರುವ ಪ್ರಾಣಿಗಳು ಕಾಡಿನಲ್ಲಿ ದರ್ಬಾರ್ ಮಾಡೋ ರೀತಿಯೇ ನಾಡಲ್ಲೂ ದರ್ಬಾರ್ ಮಾಡುತ್ತಿವೆ.
ಹೌದು, ಇಲ್ಲಿ ಒಂದು ಕಾಡಾನೆ ಅದೇ ರೀತಿ ಮಾಡಿದೆ. ತನ್ನದಲ್ಲದ ಏರಿಯಾದಲ್ಲಿ ತಾನೇ ಕಿಂಗ್ ಅಂದುಕೊAಡು ವಾಹನ ಸವಾರರಿಗೆ ಕಾಟ ಕೊಟ್ಟಿದೆ.
ಅಷ್ಟಕ್ಕೂ ಈ ಕಾಡಾನೆ ಏನು ಮಾಡಿದೆ ಅಂತ ಕೇಳ್ತೀರಾ ಹಾಗಿದ್ದರೆ ಹೇಳ್ತಿವಿ ಓದಿ, ಈ ಗಜರಾಜ ರಸ್ತೆಯಲ್ಲಿ ಬಂದು ನಿಂತು ನಾನೇ ಈ ರಸ್ತೆಗೆ ಕಿಂಗ್ ಅಂತಾ ಬರೋ ಗಾಡಿಗಳನ್ನ ಅಡ್ಡಗಟ್ಟಿ ನಿಂತ್ಬಿಟ್ಟಿದೆ. ಯಾರನ್ನೂ ಮುಂದೆ ಹೋಗೋಕೆ ಬಿಡ್ತಿಲ್ಲ. ನನ್ನನ್ನ ದಾಟಿ ಅದ್ಹೆಂಗೆ ಮುಂದೆ ಹೋಗ್ತೀರಾ ನೋಡ್ತೀನಿ ಅಂತಾ ಸವಾಲ್ ಹಾಕಿ ನಿಂತಿದೆ.
ಕೇರಳದ ಶೋಲಯಾರ್ ಬಳಿ ಒಂಟಿಸಲಗ ರಸ್ತೆಲೀ ದರ್ಬಾರ್ ಮಾಡ್ತಿದಿದೆ. ಒಂಟಿಸಲಗ ಕೆಎಸ್ಆರ್ಟಿಸಿ ಬಸ್ ಸೇರಿದಂತೆ ಅನೇಕ ಬಸ್ಗಳನ್ನ ತಡೆದಿದೆ. ಇನ್ನೂ ಅಚ್ಚರಿ ಎಂಬ0ತೆ ಆನೆಯೊಂದಿಗೆ ಚಾಲಕ ಮಾತನಾಡಿದ್ದು, ದಾರಿ ಬಿಟ್ಟುಕೊಡುವಂತೆ ಮನವಿ ಮಾಡಿದ್ದಾನೆ. ಆಗಲೂ ಆನೆ ಜಗ್ಗದೇ ಇದ್ದಾಗ ಒಂದಷ್ಟು ಬಾರಿ ಆನೆಯನ್ನ ಗದರಿಸಿದ್ದಾನೆ. ಆದ್ರೂ ಕೂಡ ಆನೆ ಮಾತ್ರ ದಾರಿ ಬಿಟ್ಟುಕೊಟ್ಟಿಲ್ಲ. ಸ್ವಲ್ಪ ಸಮಯ ಕಳೆದ ಮೇಲೆ, ಇದಕ್ಕೂ ತನಗೂ ಸಂಬ0ಧವೇ ಇಲ್ಲ ಅನ್ನೋ ಹಾಗೆ, ಅಲ್ಲೇನೂ ನಡೆದೇ ಇಲ್ಲವೇನೋ ಅನ್ನೋ ಹಾಗೆ, ಆನೆ ತನ್ನ ಪಾಡಿಗೆ ತಾನು ಹೊರಟೋಗಿದೆ. ಅದೃಷ್ಟವಶಾತ್ ಆನೆ ಯಾರ ಮೇಲೂ ದಾಳಿ ನಡೆಸಿಲ್ಲ.
ಇನ್ನೂ ಈ ಗಜರಾಜ ರಸ್ತೆ ಮಧ್ಯೆ ದರ್ಬಾರ್ ಮೆರೆದಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ.
ಬಿಸಿಯೂಟದ ಸಿಬ್ಬಂದಿಯೊಬ್ಬರ ಕೈ ವಿದ್ಯುತ್ ಚಾಲಿತ ತುರಿಮಣೆಯಲ್ಲಿ ಸಿಲುಕಿಕೊಂಡ ಸಂದರ್ಭದಲ್ಲಿ ಸಮಯಪ್ರಜ್ಞೆ ಮೆರೆದ ನರಿಕೊಂಬು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ…
ನಗರದ ಕೆಪಿಟಿ ಸಿಗ್ನಲ್ ಸಮೀಪ ರಸ್ತೆಯ ಮಧ್ಯಭಾಗದಲ್ಲೇ ಭಾರೀ ಗುಂಡಿಯೊಂದು ನಿರ್ಮಾಣವಾಗಿದ್ದು, ವಾಹನ ಸವಾರರಿಗೆ ಅಪಾಯ ಎದುರಾಗಿದೆ. ಈ ಮಾರ್ಗದಲ್ಲಿ…
ಆಟಿ ಅಮಾವಾಸ್ಯೆಯ ಪವಿತ್ರ ದಿನದಂದು ಬಂಟ್ವಾಳ ತಾಲೂಕಿನ ಐತಿಹಾಸಿಕ ಹಾಗೂ ಪೌರಾಣಿಕ ಪ್ರಸಿದ್ಧಿಯ ನರಹರಿ ಪರ್ವತ ಶ್ರೀ ಸದಾಶಿವ ದೇವಸ್ಥಾನದಲ್ಲಿ…
ತುಳುಕೂಟ ಬಂಟ್ವಾಳ ಹಾಗೂ ಶ್ರೀ ರಕ್ತೇಶ್ವರಿ ದೇವಿ ದೇವಸ್ಥಾನ, ಬಿ.ಸಿ.ರೋಡು ಇದರ ಆಡಳಿತ ಮಂಡಳಿಯ ಆಶ್ರಯದಲ್ಲಿ ವರ್ಷಂಪ್ರತಿ ನಡೆಯುವ ಆಟಿ…
ಲೋಕಾಯುಕ್ತದಲ್ಲಿ ದಾಖಲಾಗಿರುವ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಮೇಲಾಧಿಕಾರಿಗಳ ನಿರ್ದೇಶನದ ಮೇರೆಗೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ತಾಲೂಕು ಕಚೇರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು…
ಆಟಿ ಅಮಾವಾಸ್ಯೆಯ ಪ್ರಯುಕ್ತ ತಾಲೂಕಿನ ಪ್ರಸಿದ್ಧ ಕಾರಿಂಜ ಶ್ರೀ ಕಾರಿಂಜೇಶ್ವರ ದೇವಸ್ಥಾನದಲ್ಲಿ ಬುಧವಾರ ಶ್ರದ್ಧಾಭಕ್ತಿ ಹಾಗೂ ಸಂಭ್ರಮದಿಂದ ವಿವಿಧ ಧಾರ್ಮಿಕ…