ಇತ್ತೀಚೆಗೆ ಕಾಡನ್ನ ತೊರೆದು ನಾಡಿಗೆ ಬರ್ತಿರೋ ಪ್ರಾಣಿಗಳ ಸಂಖ್ಯೆ ದಿನೇ ದಿನೆ ಹೆಚ್ಚಾಗ್ತಾನೆ ಇದೆ. ಅದರಲ್ಲೂ ನಾಡಿಗೆ ಬರುವ ಪ್ರಾಣಿಗಳು ಕಾಡಿನಲ್ಲಿ ದರ್ಬಾರ್ ಮಾಡೋ ರೀತಿಯೇ ನಾಡಲ್ಲೂ ದರ್ಬಾರ್ ಮಾಡುತ್ತಿವೆ.
ಹೌದು, ಇಲ್ಲಿ ಒಂದು ಕಾಡಾನೆ ಅದೇ ರೀತಿ ಮಾಡಿದೆ. ತನ್ನದಲ್ಲದ ಏರಿಯಾದಲ್ಲಿ ತಾನೇ ಕಿಂಗ್ ಅಂದುಕೊAಡು ವಾಹನ ಸವಾರರಿಗೆ ಕಾಟ ಕೊಟ್ಟಿದೆ.
ಅಷ್ಟಕ್ಕೂ ಈ ಕಾಡಾನೆ ಏನು ಮಾಡಿದೆ ಅಂತ ಕೇಳ್ತೀರಾ ಹಾಗಿದ್ದರೆ ಹೇಳ್ತಿವಿ ಓದಿ, ಈ ಗಜರಾಜ ರಸ್ತೆಯಲ್ಲಿ ಬಂದು ನಿಂತು ನಾನೇ ಈ ರಸ್ತೆಗೆ ಕಿಂಗ್ ಅಂತಾ ಬರೋ ಗಾಡಿಗಳನ್ನ ಅಡ್ಡಗಟ್ಟಿ ನಿಂತ್ಬಿಟ್ಟಿದೆ. ಯಾರನ್ನೂ ಮುಂದೆ ಹೋಗೋಕೆ ಬಿಡ್ತಿಲ್ಲ. ನನ್ನನ್ನ ದಾಟಿ ಅದ್ಹೆಂಗೆ ಮುಂದೆ ಹೋಗ್ತೀರಾ ನೋಡ್ತೀನಿ ಅಂತಾ ಸವಾಲ್ ಹಾಕಿ ನಿಂತಿದೆ.
ಕೇರಳದ ಶೋಲಯಾರ್ ಬಳಿ ಒಂಟಿಸಲಗ ರಸ್ತೆಲೀ ದರ್ಬಾರ್ ಮಾಡ್ತಿದಿದೆ. ಒಂಟಿಸಲಗ ಕೆಎಸ್ಆರ್ಟಿಸಿ ಬಸ್ ಸೇರಿದಂತೆ ಅನೇಕ ಬಸ್ಗಳನ್ನ ತಡೆದಿದೆ. ಇನ್ನೂ ಅಚ್ಚರಿ ಎಂಬ0ತೆ ಆನೆಯೊಂದಿಗೆ ಚಾಲಕ ಮಾತನಾಡಿದ್ದು, ದಾರಿ ಬಿಟ್ಟುಕೊಡುವಂತೆ ಮನವಿ ಮಾಡಿದ್ದಾನೆ. ಆಗಲೂ ಆನೆ ಜಗ್ಗದೇ ಇದ್ದಾಗ ಒಂದಷ್ಟು ಬಾರಿ ಆನೆಯನ್ನ ಗದರಿಸಿದ್ದಾನೆ. ಆದ್ರೂ ಕೂಡ ಆನೆ ಮಾತ್ರ ದಾರಿ ಬಿಟ್ಟುಕೊಟ್ಟಿಲ್ಲ. ಸ್ವಲ್ಪ ಸಮಯ ಕಳೆದ ಮೇಲೆ, ಇದಕ್ಕೂ ತನಗೂ ಸಂಬ0ಧವೇ ಇಲ್ಲ ಅನ್ನೋ ಹಾಗೆ, ಅಲ್ಲೇನೂ ನಡೆದೇ ಇಲ್ಲವೇನೋ ಅನ್ನೋ ಹಾಗೆ, ಆನೆ ತನ್ನ ಪಾಡಿಗೆ ತಾನು ಹೊರಟೋಗಿದೆ. ಅದೃಷ್ಟವಶಾತ್ ಆನೆ ಯಾರ ಮೇಲೂ ದಾಳಿ ನಡೆಸಿಲ್ಲ.
ಇನ್ನೂ ಈ ಗಜರಾಜ ರಸ್ತೆ ಮಧ್ಯೆ ದರ್ಬಾರ್ ಮೆರೆದಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ.
ನಾಪತ್ತೆಯಾಗಿದ್ದ ಉಪನ್ಯಾಸಕರೊಬ್ಬರ ಶವವು ಮನೆ ವಠಾರದಲ್ಲಿದ್ದ ಬಾವಿಯಲ್ಲಿ ಪತ್ತೆಯಾಗಿದೆ. ಅವರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಮೃತ…
ದೈವದ ಭಂಡಾರ ಮೆರವಣಿಗೆ ವೇಳೆ ಕಾಲು ಸಂಕ ಮುರಿದು ಬಿದ್ದು ಅವಘಡ ಸಂಭವಿಸಿದ್ದು ಒಟ್ಟು ಎಂಟು ಮಂದಿ ಗಾಯಗೊಂಡಿದ್ದಾರೆ. ದಕ್ಷಿಣ…
ವಿದ್ಯುತ್ ತಂತಿ ತಗುಲಿ ಬಾಲಕನೋರ್ವ ಮೃತಪಟ್ಟ ಘಟನೆ ಗಡಿಯಾರ ಎಂಬಲ್ಲಿ ನಡೆದಿದೆ. ನೇರಳಕಟ್ಟೆ ಸಮೀಪದ ಕೊಡಾಜೆ ನಿವಾಸಿ ಮೃತಪಟ್ಟ ಬಾಲಕ.…
ದ.ಕ. ಗ್ರಾಮೀಣ ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿ ಬಂಟ್ವಾಳ ಬ್ಲಾಕ್ ಮಹಿಳಾ ಕಾಂಗ್ರೆಸ್ ಮತ್ತು ಪಾಣೆಮಂಗಳೂರು ಬ್ಲಾಕ್ ಮಹಿಳಾ ಕಾಂಗ್ರೆಸ್…
ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ ಇಂಗ್ಲೀಷ್ ಮಾಧ್ಯಮ ಪ್ರೌಢಶಾಲೆ ಕಟೀಲು ಇಲ್ಲಿಯ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ 35 ವಿದ್ಯಾರ್ಥಿಗಳು ಹಾಜರಾಗಿದ್ದು,ಎಲ್ಲಾ ವಿದ್ಯಾರ್ಥಿಗಳು ತೇರ್ಗಡೆಯಾಗಿ…
ತಣ್ಣೀರುಬಾವಿ ಬೀಚ್ ಬಳಿ ನಡೆದಿದ್ದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ರೌಡಿಶೀಟರ್ನನ್ನು ಪಣಂಬೂರು ಪೊಲೀಸರು ಬಂಧಿಸಿದ್ದಾರೆ. ಕಸಬಾ ಬೆಂಗ್ರೆ ನಿವಾಸಿ…