ಇತ್ತೀಚೆಗೆ ಕಾಡನ್ನ ತೊರೆದು ನಾಡಿಗೆ ಬರ್ತಿರೋ ಪ್ರಾಣಿಗಳ ಸಂಖ್ಯೆ ದಿನೇ ದಿನೆ ಹೆಚ್ಚಾಗ್ತಾನೆ ಇದೆ. ಅದರಲ್ಲೂ ನಾಡಿಗೆ ಬರುವ ಪ್ರಾಣಿಗಳು ಕಾಡಿನಲ್ಲಿ ದರ್ಬಾರ್ ಮಾಡೋ ರೀತಿಯೇ ನಾಡಲ್ಲೂ ದರ್ಬಾರ್ ಮಾಡುತ್ತಿವೆ.
ಹೌದು, ಇಲ್ಲಿ ಒಂದು ಕಾಡಾನೆ ಅದೇ ರೀತಿ ಮಾಡಿದೆ. ತನ್ನದಲ್ಲದ ಏರಿಯಾದಲ್ಲಿ ತಾನೇ ಕಿಂಗ್ ಅಂದುಕೊAಡು ವಾಹನ ಸವಾರರಿಗೆ ಕಾಟ ಕೊಟ್ಟಿದೆ.
ಅಷ್ಟಕ್ಕೂ ಈ ಕಾಡಾನೆ ಏನು ಮಾಡಿದೆ ಅಂತ ಕೇಳ್ತೀರಾ ಹಾಗಿದ್ದರೆ ಹೇಳ್ತಿವಿ ಓದಿ, ಈ ಗಜರಾಜ ರಸ್ತೆಯಲ್ಲಿ ಬಂದು ನಿಂತು ನಾನೇ ಈ ರಸ್ತೆಗೆ ಕಿಂಗ್ ಅಂತಾ ಬರೋ ಗಾಡಿಗಳನ್ನ ಅಡ್ಡಗಟ್ಟಿ ನಿಂತ್ಬಿಟ್ಟಿದೆ. ಯಾರನ್ನೂ ಮುಂದೆ ಹೋಗೋಕೆ ಬಿಡ್ತಿಲ್ಲ. ನನ್ನನ್ನ ದಾಟಿ ಅದ್ಹೆಂಗೆ ಮುಂದೆ ಹೋಗ್ತೀರಾ ನೋಡ್ತೀನಿ ಅಂತಾ ಸವಾಲ್ ಹಾಕಿ ನಿಂತಿದೆ.
ಕೇರಳದ ಶೋಲಯಾರ್ ಬಳಿ ಒಂಟಿಸಲಗ ರಸ್ತೆಲೀ ದರ್ಬಾರ್ ಮಾಡ್ತಿದಿದೆ. ಒಂಟಿಸಲಗ ಕೆಎಸ್ಆರ್ಟಿಸಿ ಬಸ್ ಸೇರಿದಂತೆ ಅನೇಕ ಬಸ್ಗಳನ್ನ ತಡೆದಿದೆ. ಇನ್ನೂ ಅಚ್ಚರಿ ಎಂಬ0ತೆ ಆನೆಯೊಂದಿಗೆ ಚಾಲಕ ಮಾತನಾಡಿದ್ದು, ದಾರಿ ಬಿಟ್ಟುಕೊಡುವಂತೆ ಮನವಿ ಮಾಡಿದ್ದಾನೆ. ಆಗಲೂ ಆನೆ ಜಗ್ಗದೇ ಇದ್ದಾಗ ಒಂದಷ್ಟು ಬಾರಿ ಆನೆಯನ್ನ ಗದರಿಸಿದ್ದಾನೆ. ಆದ್ರೂ ಕೂಡ ಆನೆ ಮಾತ್ರ ದಾರಿ ಬಿಟ್ಟುಕೊಟ್ಟಿಲ್ಲ. ಸ್ವಲ್ಪ ಸಮಯ ಕಳೆದ ಮೇಲೆ, ಇದಕ್ಕೂ ತನಗೂ ಸಂಬ0ಧವೇ ಇಲ್ಲ ಅನ್ನೋ ಹಾಗೆ, ಅಲ್ಲೇನೂ ನಡೆದೇ ಇಲ್ಲವೇನೋ ಅನ್ನೋ ಹಾಗೆ, ಆನೆ ತನ್ನ ಪಾಡಿಗೆ ತಾನು ಹೊರಟೋಗಿದೆ. ಅದೃಷ್ಟವಶಾತ್ ಆನೆ ಯಾರ ಮೇಲೂ ದಾಳಿ ನಡೆಸಿಲ್ಲ.
ಇನ್ನೂ ಈ ಗಜರಾಜ ರಸ್ತೆ ಮಧ್ಯೆ ದರ್ಬಾರ್ ಮೆರೆದಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ.
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿ ದೇವಿ ಮೂಕಾಂಬಿಕಾ…
ಮಳೆಗಾಲ ಆರಂಭವಾಗುತ್ತಿದ್ದಂತೆ ಸೇತುವೆಯೊಂದು ಕುಸಿದು ಬಿದ್ದ ಪರಿಣಾಮ ಹಲವು ಗ್ರಾಮಗಳ ಸಂಪರ್ಕದ ಕೊಂಡಿ ಕಳಚಿ ಬಿದ್ದು, ಜನರು ದ್ವೀಪದಂತೆ, ಹಳ್ಳಿಯೊಳಗೆ…
ಜ್ವರದಿಂದ ಬಳಲುತ್ತಿದ್ದ ಬಾಲಕಿಯೊರ್ವಳು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ಬಂಟ್ವಾಳ ತಾಲೂಕಿನ ಅಲ್ಲಿಪಾದೆ ಎಂಬಲ್ಲಿ ನಡೆದಿದೆ. ಅಲ್ಲಿಪಾದೆ ಅನೇಜ…
ಬಿಸಿರೋಡಿನ ಪ್ರಸಿದ್ದ ಕ್ಯಾಂಟೀನ್ ಒಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಸ್ವಲ್ಪದರಲ್ಲಿ ದೊಡ್ಡ ದುರಂತವೊಂದು ತಪ್ಪಿದೆ. ಬಿಸಿರೋಡಿನ ಮಿನಿ ವಿಧಾನ ಸೌಧದ…
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…