ಕರಾವಳಿ

ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದಲ್ಲಿ ಶ್ರೀಗಳ ಜನ್ಮದಿನೋತ್ಸವ ಗ್ರಾಮೋತ್ಸವ -2023

ಬಂಟ್ವಾಳ ತಾಲೂಕಿನ ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದಲ್ಲಿ ಒಡಿಯೂರು ಶ್ರೀಗಳವರ ಜನ್ಮದಿನೋತ್ಸವ ಸಮಿತಿ ವತಿಯಿಂದ ಪೂಜ್ಯ ಶ್ರೀಗಳವರ ಜನ್ಮದಿನೋತ್ಸವ ಗ್ರಾಮೋತ್ಸವ -2023 ಸೇವಾ ಸಂಭ್ರಮ ಹಾಗೂ ಗುರುವಂದನ ಕಾರ್ಯಕ್ರಮ ಇಂದು ಯಶಸ್ವಿಯಾಗಿ ನಡೆಯಿತು.


ಬೆಳಗ್ಗೆ ಶ್ರೀ ಗಣಪತಿ ಹವನ, ಶ್ರೀ ಅರವಿಂದ ಆಚಾರ್ಯ ಮಾಣಿಲ ಮತ್ತು ಬಳಗದವರಿಂದ ದಾಸವಾಣಿ, ಬಳಿಕ ಶ್ರೀಗಳ ಪಾದಪೂಜೆ, ತುಲಾಭಾರ, ಉಯ್ಯಾಲೆ ಸೇವೆ, ಗುರುವಂದನಾ ಕಾರ್ಯಕ್ರಮ ನೆರವೇರಿತು.
ಬಳಿಕ ಸಭಾಕಾರ್ಯಕ್ರಮ ನಡೆದಿದ್ದು, ಕಾರ್ಯಕ್ರಮದಲ್ಲಿ ಒಡಿಯೂರು ಕ್ಷೇತ್ರದ ಶ್ರೀ ಗುರುದೇವಾನಂದ ಸ್ವಾಮೀಜಿಗಳು ಆಶೀರ್ವಾಚನ ನೀಡಿ, ಸಂತನ ಬದುಕು ಸಂತಗಲ್ಲದು ಸಮಾಜ ಹಿತಕ್ಕೆ, ಹಾಗಾಗಿ ನಾವು ಸಮಾಜಕ್ಕಾಗಿ ಬದುಕಬೇಕು. ನಮ್ಮ ಒಳಗೆ ನಾವು ಹುಡುಕಾಟ ಮಾಡುವಂತಹ ಕಾರ್ಯವನ್ನು ಮಾಡಬೇಕು. ಆಗ ಅದು ಆಧ್ಯಾತ್ಮದ ಬದುಕು ಎಂದೆನಿಕೊಳ್ಳುತ್ತದೆ ಎಂದರು.


ಇನ್ನೂ ಈ ಕಾರ್ಯಕ್ರಮದಲ್ಲಿ ನಾಲ್ವರು ಸಾಧಕರಿಗೆ ಬಿರುದು ನೀಡಿ ಸನ್ಮಾನದ ಗೌರವಾರ್ಪಣೆ ನಡೆಯಿತು. ಆಶಕ್ತಿಗೆ ನೆರವಾಗುವ ಮಾಹಾದಾನಿ, ಮುಂಬಯಿ ಹೇರಂಬ ಕೆಮಿಕಲ್ ಇಂಡಸ್ಟ್ರೀಸ್ ಅಧ್ಯಕ್ಷ ಸದಾಶಿವ ಶೆಟ್ಟಿ, ಕೂಳೂರು ಕನ್ಮಾನ, ಇವರು ‘ದಾನಸಿರಿ’ ಬಿರುದನ್ನು ಮುಡಿಗೇರಿಸಿಕೊಂಡರು. ಸಾಂಸ್ಕೃತಿಕ ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ಅಪಾರ ಸಾಧನೆಗೈದ ಡಾ. ಎಂ. ಮೋಹನ್ ಆಳ್ವ ಅವರು ‘ವಿದ್ಯಾಸಿರಿ’ ಬಿರುದನ್ನು ತಮ್ಮದಾಗಿಸಿಕೊಂಡಿದ್ದಾರೆ.

ಸಂಗೀತ ಕ್ಷೇತ್ರದಲ್ಲಿ ತಮ್ಮದೇ ಛಾಪು ಮೂಡಿಸಿದ ಶಂಕರ್ ಶಾನುಭೋಗ್ ಅವರು ಮುಕುಟಕ್ಕೆ ‘ಗಾನಸಿರಿ’ ಬಿರುದು ಮತ್ತೊಂದು ಗರಿಮೆಯಾಗಿದೆ. ಇನ್ನೂ ಹದಿನಾರು ಸಾವಿರಕ್ಕೂ ಹೆಚ್ಚಿನ ಜನರಿಗೆ ಉದ್ಯೋಗವನ್ನು ನೀಡಿರುವ ಶಶಿಧರ್ ಶೆಟ್ಟಿ ಬರೋಡ ಅವರಿಗೆ ‘ಸೇವಾ ಸಿರಿ’ ಬಿರುದನ್ನು ನೀಡಿ ಗೌರವಿಸಲಾಯಿತು.


ಬಳಿಕ ಮುಂಬಯಿ ಹೇರಂಬ ಕೆಮಿಕಲ್ ಇಂಡಸ್ಟ್ರೀಸ್ ಅಧ್ಯಕ್ಷ, ಕೊಡುಗೈದಾನಿ ಸದಾಶಿವ ಶೆಟ್ಟಿ ಕನ್ಯಾನ ಅವರು ಮಾತಾನಾಡಿ, ತುಳುನಾಡಿನ ಪುಣ್ಯ ಮಣ್ಣಿನಲ್ಲಿ ನಾನು ಹುಟ್ಟಿದ್ದು ಪೂರ್ವಜನ್ಮದ ಪುಣ್ಯವಾಗಿದೆ. ಆದರೆ ಸಮಾಜದಲ್ಲಿ ಹಿಂಸಾಚಾರ ಅನಾಗರಿಕ ತತ್ವಗಳು ಮನಸ್ಸಿಗೆ ವೇದನೆ ಕೊಡುವಂತಹ ವಿಚಾರವಾಗಿದೆ. ಬೇರೆ ಧರ್ಮದಲ್ಲಿ ಅವರ ಮಕ್ಕಳಿಗೆ ಚಿಕ್ಕನಿಂದಲೇ ದೇವರ ಬಗ್ಗೆ ಭಯ ಹುಟ್ಟಿಸುವ ಕೆಲಸವನ್ನು ಅವರ ಶಿಕ್ಷಣಗಳು ಮಾಡುತ್ತದೆ. ಆದರೆ ನಮ್ಮ ಧರ್ಮದಲ್ಲಿ ಯಾವುದೇ ಭಯವಿಲ್ಲ, ಹಾಗಾಗಿ ಅತ್ಯಾಚಾರದಂತಹ ಕೃತ್ಯಗಳು ನಡೆಯುತ್ತಿದೆ ಇದಕ್ಕೇಲ್ಲ ಕಾರಣ ಕಾನೂನಿನ ಭಯವಿಲ್ಲದೇ ಇರುವುದು ಎಂದರು.


ಕಾರ್ಯಕ್ರಮದಲ್ಲಿ ಬಂಟ್ವಾಳ ಶಾಸಕ ರಾಜೇಶ್ ನ್ಯಾಕ್ ಉಳಿಪಾಡಿಗುತ್ತು ಮಾತಾನಾಡಿ, 11 ವರ್ಷದಿಂದ ನಾನು ಈ ಕಾರ್ಯಕ್ರಮಕ್ಕೆ ಬರುತ್ತಿದ್ದೇನೆ. ಎಂದು ಸಂತಸ ವ್ಯಕ್ತಪಡಿಸಿದರು.
ಮೂಡಬಿದ್ರೆ ಆಳ್ವಾಸ್‌ಎಜುಕೇಶನ್ ಫೌಂಡೇಶನ್ ಅಧ್ಯಕ್ಷ ಡಾ. ಮೋಹನ್ ಆಳ್ವ ಮಾತಾನಾಡಿ, ಹಿಂದು ಆಗಿ ಹುಟ್ಟುವ ಭಾಗ್ಯವನ್ನು ದೇವರು ಕಲ್ಪಿಸಿಕೊಟ್ಟಿದ್ದಾರೆ. ವಿದೇಶಗಳಲ್ಲಿ ನೆಲೆಸುವ ಅವಕಾಶವನ್ನು ದೇವರು ಕೊಟ್ಟರು ಈ ತುಳುನಾಡನ್ನು ಬಿಟ್ಟು ಹೋಗುವ ಮನಸ್ಸು ನನಗಿರಲ್ಲಿಲ್ಲ, ಹಲವಾರು ಸಾಮಾಜ ಮುಖಿ ಕಾರ್ಯಗಳನ್ನು ಮಾಡುವ ಅವಕಾಶವನ್ನು ಗುರುಹಿರಿಯರು ಕಲ್ಪಿಸಿಕೊಟ್ಟಿದ್ದಾರೆ ಎಂದರು.
ಸಂಗೀತ ನಿರ್ದೇಶಕರಾದ ಶಂಕರ್ ಶಾನುಬೋಗ ಮಾತಾನಾಡಿ, ಹಿಂದುಗಳ ಮೇಲೆ ತುಂಬಾನೆ ಕೆಟ್ಟ ದೃಷ್ಠಿ ಬೀಳುತ್ತಿದೆ. ಪ್ರತಿ ಕಟ್ಟ ಶಕ್ತಿಗಳ ವಿರುದ್ದ ದತ್ತಾತ್ರೇಯ ಸ್ವಾಮಿ ನಿಂತು, ಹಿಂದು ಧರ್ಮವನ್ನು ಉಳಿಸಲಿ ಎಂದರು.
ಶಶಿಕ್ಯಾಟರಿಂಗ್ ಸರ್ವಿಸಸ್ ಆಡಳಿತ ನಿರ್ದೇಶಕ ಶಶಿಧರ ಬಿ. ಶೆಟ್ಟಿ ಬರೋಡ ಮಾತಾನಾಡಿ, ಸ್ವಾಮೀಜಿಯವರ ಪ್ರತಿ ಮಾತಿನಲ್ಲೂ ಒಂದು ಅರ್ಥವಿರುತ್ತದೆ ಈ ಬಗ್ಗೆ ನನಗೆ ಅನುಭವವಾಗಿದೆ ಎಂದು ಹೇಳಿದರು.


ಇನ್ನೂ ಈ ಕಾರ್ಯಕ್ರಮದಲ್ಲಿ, ಸಾಧ್ಯ ಮಾತಾನಂದಮಯಿ, ಮುಂಬಯಿ ಹೈಟೆಕ್ ಇಲೆಕ್ಟಿಫಿಕೇಶನ್ ಇಂಜಿನಿಯರಿAಗ್ ಆಡಳಿತನಿರ್ದೇಶಕ ರವಿನಾಥ್ ವಿ. ಶೆಟ್ಟಿ ಅಂಕೇಶ್ವರ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಉಡುಪಿ: ನಾಪತ್ತೆಯಾಗಿದ್ದ ಉಪನ್ಯಾಸಕನ ಶವ ಬಾವಿಯಲ್ಲಿ ಪತ್ತೆ..!

ನಾಪತ್ತೆಯಾಗಿದ್ದ ಉಪನ್ಯಾಸಕರೊಬ್ಬರ ಶವವು ಮನೆ ವಠಾರದಲ್ಲಿದ್ದ ಬಾವಿಯಲ್ಲಿ ಪತ್ತೆಯಾಗಿದೆ. ಅವರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಮೃತ…

2 days ago

ಮಂಗಳೂರು: ದೈವದ ಭಂಡಾರ ಮೆರವಣಿಗೆ ವೇಳೆ ಸಂಕ ಮುರಿದು ಬಿದ್ದು ಅವಘಡ….!

ದೈವದ ಭಂಡಾರ ಮೆರವಣಿಗೆ ವೇಳೆ ಕಾಲು ಸಂಕ ಮುರಿದು ಬಿದ್ದು ಅವಘಡ ಸಂಭವಿಸಿದ್ದು ಒಟ್ಟು ಎಂಟು ಮಂದಿ ಗಾಯಗೊಂಡಿದ್ದಾರೆ. ದಕ್ಷಿಣ…

2 days ago

ಬಂಟ್ವಾಳ: ಗಡಿಯಾರ ಎಂಬಲ್ಲಿ ವಿದ್ಯುತ್ ತಂತಿ ತಗುಲಿ ಬಾಲಕ ಮೃ*ತ್ಯು….!

ವಿದ್ಯುತ್ ತಂತಿ ತಗುಲಿ ಬಾಲಕನೋರ್ವ ಮೃತಪಟ್ಟ ಘಟನೆ ಗಡಿಯಾರ ಎಂಬಲ್ಲಿ ನಡೆದಿದೆ. ನೇರಳಕಟ್ಟೆ ಸಮೀಪದ ಕೊಡಾಜೆ ನಿವಾಸಿ ಮೃತಪಟ್ಟ ಬಾಲಕ.…

2 days ago

ಬಂಟ್ವಾಳ: ಮಹಿಳೆಯರ ಹಕ್ಕುಗಳ ಬಗ್ಗೆ ಬಿಜೆಪಿ ಮೋಸ- ರಮಾನಾಥ ರೈ ಆರೋಪ….!

ದ.ಕ. ಗ್ರಾಮೀಣ ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿ ಬಂಟ್ವಾಳ ಬ್ಲಾಕ್ ಮಹಿಳಾ ಕಾಂಗ್ರೆಸ್ ಮತ್ತು ಪಾಣೆಮಂಗಳೂರು ಬ್ಲಾಕ್ ಮಹಿಳಾ ಕಾಂಗ್ರೆಸ್…

2 days ago

100 ಶೇಕಡಾ ಫಲಿತಾಂಶ ಪಡೆದ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ ಇಂಗ್ಲೀಷ್ ಮಾಧ್ಯಮ ಪ್ರೌಢಶಾಲೆ..!

ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ ಇಂಗ್ಲೀಷ್ ಮಾಧ್ಯಮ ಪ್ರೌಢಶಾಲೆ ಕಟೀಲು ಇಲ್ಲಿಯ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ 35 ವಿದ್ಯಾರ್ಥಿಗಳು ಹಾಜರಾಗಿದ್ದು,ಎಲ್ಲಾ ವಿದ್ಯಾರ್ಥಿಗಳು ತೇರ್ಗಡೆಯಾಗಿ…

2 days ago

ಮಂಗಳೂರು: ತಣ್ಣೀರುಬಾವಿ ಬೀಚ್ ಬಳಿ ನಡೆದಿದ್ದ ದರೋಡೆ ಪ್ರಕರಣದ ಆರೋಪಿಯ ಬಂಧನ…!

ತಣ್ಣೀರುಬಾವಿ ಬೀಚ್ ಬಳಿ ನಡೆದಿದ್ದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ರೌಡಿಶೀಟರ್‌ನನ್ನು ಪಣಂಬೂರು ಪೊಲೀಸರು ಬಂಧಿಸಿದ್ದಾರೆ. ಕಸಬಾ ಬೆಂಗ್ರೆ ನಿವಾಸಿ…

4 days ago