ದಕ್ಷಿಣ ಕನ್ನಡ : ಮೂಡಬಿದಿರೆಯ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ಭವಾನಿ ಇವರು ಇತ್ತೀಚೆಗೆ ಚೀನಾದಲ್ಲಿ ನಡೆದ ಜಾಗತಿಕ ವಿಶ್ವವಿದ್ಯಾಲಯಗಳ ಕ್ರೀಡಾಕೂಟದಲ್ಲಿ ಲಾಂಗ್ ಜಂಪ್ ವಿಭಾಗದಲ್ಲಿ ಕಂಚಿನ ಪದಕ ಗೆಲ್ಲುವ ಮೂಲಕ ಅಪ್ರತಿಮ ಸಾಧನೆಯನ್ನು ಮಾಡಿದ್ದಾರೆ.
ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಕ್ರೀಡಾ ದತ್ತು ಯೋಜನೆಯ ಕ್ರೀಡಾಪಟು ಭವಾನಿ ಯಾದವ್ ಭಗವತಿ ಇವರು ಜಾಗತಿಕ ಮಟ್ಟದ ಕ್ರೀಡಾಕೂಟದಲ್ಲಿ ಸಾಧನೆ ಮಾಡಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ, ಮಂಗಳೂರು ವಿಶ್ವವಿದ್ಯಾನಿಲಯ, ಕರ್ನಾಟಕ ರಾಜ್ಯ ಮತ್ತು ದೇಶಕ್ಕೆ ಹೆಮ್ಮೆಯ ಸುಪುತ್ರಾಗಿ ಕೀರ್ತಿಯನ್ನು ತಂದಿದ್ದಾರೆ ಭವಾನಿ ಇವರು ಜಾಗತಿಕ ವಿಶ್ವವಿದ್ಯಾಲಯಗಳ ಕ್ರೀಡಾಕೂಟದಲ್ಲಿ ಮೊದಲ ಬಾರಿಗೆ ಭಾಗವಹಿಸಿ, ಪ್ರಶಸ್ತಿಗೆ ಭಾಜನರಾಗಿದ್ದಾರೆ ಹಾಗೂ ಟ್ರ್ಯಾಕ್ ಮತ್ತು ಫೀಲ್ಡ್ ಇವುಗಳಲ್ಲಿ ಭಾರತಕ್ಕೆ ಪದಕ ತಂದುಕೊಟ್ಟ ಮೂರನೇ ಕ್ರೀಡಾಪಟು ಎಂಬ ಹಿರಿಮೆಗೂ ಪಾತ್ರರಾಗಿದ್ದಾರೆ.
ಕಳೆದ ಬಾರಿ ಭುವನೇಶ್ವರದಲ್ಲಿ ನಡೆದ ರಾಷ್ಟ್ರೀಯ ಕ್ರೀಡಾಕೂಟದ ಲಾಂಗ್ ಜಂಪಿನಲ್ಲೂ ಅಪ್ರತಿಮ ಸಾಧನೆ ಸಾಧಿಸಿದ ಭವಾನಿ ಇವರು ಅಲ್ಲೂ ಕಂಚಿನ ಪದಕ ಗೆದ್ದಿದ್ದು ಗಮನಾರ್ಹ ದೇಶದ ಸುಮಾರು 1025 ಯೂನಿವರ್ಸಿಟಿಗಳ ಆಯ್ಕೆಯಾದ 85 ಕ್ರೀಡಾಪಟುಗಳು ಸ್ಪರ್ಧಾಕೂಟದಲ್ಲಿ ಪಾಲ್ಗೊಂಡಿದ್ದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಕ್ರೀಡಾ ದತ್ತು ಯೋಜನೆಯ 8 ಕ್ರೀಡಾಪಟುಗಳು ಜಾಗತಿಕ ವಿಶ್ವವಿದ್ಯಾಲಯಗಳ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದರು. ಭವಾನಿ ಹಾಗೂ ಇತರ ಕ್ರೀಡಾಪಟುಗಳ ಕೋಚ್ ಅಜಿತ್ ರವರ ಮಾರ್ಗದರ್ಶನ ಮತ್ತು ಪ್ರೋತ್ಸಾಹಕ್ಕಾಗಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾಕ್ಟರ್ ಮೋಹನ ಆಳ್ವಾರವರು ಭವಾನಿ ಹಾಗೂ ಇತರ ಕ್ರೀಡಾಪಟುಗಳು ಮತ್ತು ಕೋಚ್ ಇವರನ್ನು ಅಭಿನಂದಿಸಿದ್ದಾರೆ ಹಾಗೂ ಮುಂದಿನ 15ನೇ ತಾರೀಖಿನಂದು ಸಾಧನೆ ಮಾಡಿದ ಭವಾನಿ ಮತ್ತು ಕೋಚ್ ಅಜಿತ್ ಇವರನ್ನು ಸನ್ಮಾನಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಬಿಸಿಯೂಟದ ಸಿಬ್ಬಂದಿಯೊಬ್ಬರ ಕೈ ವಿದ್ಯುತ್ ಚಾಲಿತ ತುರಿಮಣೆಯಲ್ಲಿ ಸಿಲುಕಿಕೊಂಡ ಸಂದರ್ಭದಲ್ಲಿ ಸಮಯಪ್ರಜ್ಞೆ ಮೆರೆದ ನರಿಕೊಂಬು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ…
ನಗರದ ಕೆಪಿಟಿ ಸಿಗ್ನಲ್ ಸಮೀಪ ರಸ್ತೆಯ ಮಧ್ಯಭಾಗದಲ್ಲೇ ಭಾರೀ ಗುಂಡಿಯೊಂದು ನಿರ್ಮಾಣವಾಗಿದ್ದು, ವಾಹನ ಸವಾರರಿಗೆ ಅಪಾಯ ಎದುರಾಗಿದೆ. ಈ ಮಾರ್ಗದಲ್ಲಿ…
ಆಟಿ ಅಮಾವಾಸ್ಯೆಯ ಪವಿತ್ರ ದಿನದಂದು ಬಂಟ್ವಾಳ ತಾಲೂಕಿನ ಐತಿಹಾಸಿಕ ಹಾಗೂ ಪೌರಾಣಿಕ ಪ್ರಸಿದ್ಧಿಯ ನರಹರಿ ಪರ್ವತ ಶ್ರೀ ಸದಾಶಿವ ದೇವಸ್ಥಾನದಲ್ಲಿ…
ತುಳುಕೂಟ ಬಂಟ್ವಾಳ ಹಾಗೂ ಶ್ರೀ ರಕ್ತೇಶ್ವರಿ ದೇವಿ ದೇವಸ್ಥಾನ, ಬಿ.ಸಿ.ರೋಡು ಇದರ ಆಡಳಿತ ಮಂಡಳಿಯ ಆಶ್ರಯದಲ್ಲಿ ವರ್ಷಂಪ್ರತಿ ನಡೆಯುವ ಆಟಿ…
ಲೋಕಾಯುಕ್ತದಲ್ಲಿ ದಾಖಲಾಗಿರುವ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಮೇಲಾಧಿಕಾರಿಗಳ ನಿರ್ದೇಶನದ ಮೇರೆಗೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ತಾಲೂಕು ಕಚೇರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು…
ಆಟಿ ಅಮಾವಾಸ್ಯೆಯ ಪ್ರಯುಕ್ತ ತಾಲೂಕಿನ ಪ್ರಸಿದ್ಧ ಕಾರಿಂಜ ಶ್ರೀ ಕಾರಿಂಜೇಶ್ವರ ದೇವಸ್ಥಾನದಲ್ಲಿ ಬುಧವಾರ ಶ್ರದ್ಧಾಭಕ್ತಿ ಹಾಗೂ ಸಂಭ್ರಮದಿಂದ ವಿವಿಧ ಧಾರ್ಮಿಕ…