ಸುಮಾರು ಒಂದೂವರೆ ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಆರೋಪಿಯನ್ನು ಮೆನ್ನಮೆಟ್ಟು ಗ್ರಾಮದ ಉಲ್ಲಂಜೆಯ ಮೊಹಮ್ಮದ್ ನೌಷದ್ ಯಾನೆ ಉಲ್ಲಂಜೆ ನೌಷದ್ ಎಂದು ಗುರುತಿಸಲಾಗಿದೆ.
ಕೆಲ ವರ್ಷಗಳ ಹಿಂದೆ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ದೀಪಕ್ ರಾವ್ ಕೊಲೆ ಪ್ರಕರಣ ಸೇರಿದಂತೆ 4 ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯದಿಂದ ಜಾಮೀನಿನಲ್ಲಿ ಬಿಡುಗಡೆಗೊಂಡ ಬಳಿಕ ಈತ ವಿಚಾರಣೆ ಸಮಯ ನ್ಯಾಯಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದನು ಎಂದು ಪೊಲೀಸರು ತಿಳಿಸಿದ್ದಾರೆ.



