ಕಾಲೇಜು ಯುವತಿಯರ ಫೋಟೋಗಳನ್ನು ಅಶ್ಲೀಲವಾಗಿ ಎಡಿಟ್ ಮಾಡಿ, ಅವುಗಳನ್ನು ಇನ್ಸ್ಟಾಗ್ರಾಮ್ ಮೂಲಕ ಹರಿಬಿಟ್ಟ ಪ್ರಕರಣದಲ್ಲಿ ಹುಬ್ಬಳ್ಳಿಯ ಸಮರ್ಥ ಕಾಲೇಜಿನಲ್ಲಿ ಓರ್ವ ವಿದ್ಯಾರ್ಥಿಯನ್ನು ಬಂಧಿಸಲಾಗಿದೆ.
ಹುಬ್ಬಳ್ಳಿಯ ವಿದ್ಯಾನಗರದಲ್ಲಿರುವ ಸಮರ್ಥ ಶಿಕ್ಷಣ ಸಂಸ್ಥೆಯ ಕಾಲೇಜಿನಲ್ಲಿ ಈ ಘಟನೆ ನಡೆದಿದ್ದು, ಕಾಲೇಜಿನಲ್ಲಿ ನಾಲ್ಕು ಜನ ವಿದ್ಯಾರ್ಥಿನಿಯ ಫೋಟೋಗಳನ್ನು ಅಶ್ಲೀಲವಾಗಿ ಮಾರ್ಪಾಡು ಮಾಡಿ ಇನ್ಸ್ಟಾಗ್ರಾಮ್ ಖಾತೆಯೆ ಮೂಲಕ ಅಪ್ಲೋಡ್ ಮಾಡಲಾಗಿತ್ತು.
ಈ ಬಗ್ಗೆ ನಾಲ್ವರು ವಿದ್ಯಾರ್ಥಿನಿಯರು ಹುಬ್ಬಳ್ಳಿಯ ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಇದೀಗ ಯುವತಿಯರ ಫೋಟೋಗಳನ್ನು ಅಶ್ಲೀಲವಾಗಿ ಎಡಿಟ್ ಮಾಡಿ, ಅಪ್ಲೋಡ್ ಮಾಡುತ್ತಿದ್ದ ಕಿರಾತಕನನ್ನ ಬಂಧಿಸಲಾಗಿದೆ ಎಂದು ಹುಬ್ಬಳ್ಳಿ ಧಾರವಾಡ ಪೊಲೀಸ ಕಮಿಷನರ್ ಸಂತೋಷ ಬಾಬು ಮಾಹಿತಿ ನೀಡಿದ್ದಾರೆ.ಹುಬ್ಬಳ್ಳಿಯ ಸಮರ್ಥ ಕಾಲೇಜಿನ ನಾಲ್ವರು ಬಿ.ಕಾಂ ವಿದ್ಯಾರ್ಥಿನಿಯರ ಮಾರ್ಪ್ ಮಾಡಿದ ಪೋಟೋಗಳು ಕಳೆದ ಮೂರು ತಿಂಗಳಿAದ ಸಮಾಜಿಕ ಜಾಲತಾಣಗಳಲ್ಲಿ ಹರಿಬಿಡಲಾಗುತ್ತಿತ್ತು. ಕಳೆದ ಜೂನ್ 20ರಂದು ಮೊದಲ ಬಾರಿಗೆ ವಿದ್ಯಾರ್ಥಿನಿಯರು ಕಾಲೇಜು ಆಡಳಿತ ಮಂಡಳಿಗೆ ದೂರು ನೀಡಿದ್ದರು. ಆರಂಭದಲ್ಲಿ ಪ್ರಕರಣವನ್ನು ಕಾಲೇಜು ಆಡಳಿತ ಮಂಡಳಿ ಗಂಭೀರವಾಗಿ ಪರಿಗಣಿಸಿರಲಿಲ್ಲ. ಆದರೆ ಕಿಡಿಗೇಡಿ ಆರೋಪಿ ರಜತ್ ಮಾತ್ರ ತನ್ನ ಚಾಳಿ ಮುಂದುವರೆಸಿದ್ದು, ತನ್ನ ವಿರುದ್ಧ ಯಾರು ಕ್ರಮಕೈಗೊಳ್ಳಲು ಸಾದ್ಯವಿಲ್ಲ, ಪೊಲೀಸರು ಸಹ ನನ್ನ ಹಿಡಿಯಲು ಸಾದ್ಯವಿಲ್ಲ ಎಂದು ಹುಬ್ಬಳ್ಳಿ ಧಾರವಾಡ ಪೊಲೀಸರಿಗೂ ಸವಾಲು ಹಾಕಿ ತನ್ನ ಖಾತೆಯಲ್ಲಿ ಪೋಸ್ಟ್ ಮಾಡಿದ್ದ. ಇದರಿಂದ ಸಾಕಷ್ಟು ನೋವು ಅನುಭವಿಸಿದ ವಿದ್ಯಾರ್ಥಿನಿಯರು ಪೋಲೀಸ್ ಠಾಣೆ ಮೆಟ್ಟಿಲು ಹತ್ತಿದ್ದರು. ಮಾಧ್ಯಮಗಳಲ್ಲಿ ಸುದ್ದಿಯಾಗುತ್ತಿದ್ದಂತೆ ಅಲರ್ಟ್ ಅದ ಪೊಲೀಸರು ಆರೋಪಿಯನ್ನ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ವಿದ್ಯಾರ್ಥಿನಿಯರು ಪೋಟೋ ಮಾರ್ಪ್ ಮಾಡಿ ಅಪ್ಲೋಡ್ ಮಾಡಿದ ಪ್ರಕರಣದಲ್ಲಿ ಬಂಧಿತನಾಗಿರುವ ಆರೋಪಿ ರಜತ್ ಅದೇ ಸಮರ್ಥ ಕಾಲೇಜಿನ ವಿದ್ಯಾರ್ಥಿ ಅನ್ನೋದು ಬೆಳಕಿಗೆ ಬಂದಿದೆ. ಅದೇ ಕಾಲೇಜಿನಲ್ಲಿ ಬಿ.ಕಾಂ ವ್ಯಾಸಂಗ ಮಾಡುತ್ತಿದ್ದ ರಜತ್ ಸರಿಯಾಗಿ ಕಾಲೇಜಿಗೆ ಬರುತ್ತಿರಲಿಲ್ಲ. ಹಾಜರಾತಿ ಕಡಿಮೆ ಇದೆ ಎಂದು ಆತನನ್ನು ಕಾಲೇಜಿನಿಂದ ಆಡಳಿತ ಮಂಡಳಿ ಹೊರಹಾಕಿತ್ತು. ಇದೇ ಸಿಟ್ಟಿಗೆ ಆರೋಪಿ ತನ್ನದೇ ಕ್ಲಾಸ್ಮೇಟ್ ಯುವತಿಯರ ಫೋಟೋಗಳನ್ನು ಅಶ್ಲೀಲವಾಗಿ ಎಡಿಟ್ ಮಾಡಿ, ಅವುಗಳನ್ನು ಇನಸ್ಟಾಗ್ರಾಮ್ನಲ್ಲಿ ಅಪ್ಲೋಡ್ ಮಾಡುತ್ತಿದ್ದ ಎನ್ನಲಾಗಿದೆ. ಕೇವಲ ರಜತ್ ಮಾತ್ರ ಇದರಲ್ಲಿ ಭಾಗಿಯಾಗಿದ್ದನ್ನ ಅಥವಾ ಇನ್ನೂ ಯಾರಾದರೂ ಆತನ ಜೊತರ ಕೈ ಜೋಡಿಸಿದ್ರಾ ಅನ್ನೊ ತನಿಖೆಯನ್ನು ಪೊಲೀಸರು ನಡೆಸುತ್ತಿದ್ದಾರೆ.
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…