ರಾಜ್ಯ

ವಿದ್ಯಾರ್ಥಿನಿಯರ ಅಶ್ಲೀಲ ಪೋಟೋಸ್ ಇನ್‌ಸ್ಟಾಗ್ರಾಮ್‌ನಲ್ಲಿ ಅಪ್ಲೋಡ್..! ಸಹಪಾಠಿಗಳಿಂದಲೇ ನಡೆಯಿತು ನೀಚ ಕೃತ್ಯ

ಕಾಲೇಜು ಯುವತಿಯರ ಫೋಟೋಗಳನ್ನು ಅಶ್ಲೀಲವಾಗಿ ಎಡಿಟ್ ಮಾಡಿ, ಅವುಗಳನ್ನು ಇನ್‌ಸ್ಟಾಗ್ರಾಮ್ ಮೂಲಕ ಹರಿಬಿಟ್ಟ ಪ್ರಕರಣದಲ್ಲಿ ಹುಬ್ಬಳ್ಳಿಯ ಸಮರ್ಥ ಕಾಲೇಜಿನಲ್ಲಿ ಓರ್ವ ವಿದ್ಯಾರ್ಥಿಯನ್ನು ಬಂಧಿಸಲಾಗಿದೆ.


ಹುಬ್ಬಳ್ಳಿಯ ವಿದ್ಯಾನಗರದಲ್ಲಿರುವ ಸಮರ್ಥ ಶಿಕ್ಷಣ ಸಂಸ್ಥೆಯ ಕಾಲೇಜಿನಲ್ಲಿ ಈ ಘಟನೆ ನಡೆದಿದ್ದು, ಕಾಲೇಜಿನಲ್ಲಿ ನಾಲ್ಕು ಜನ ವಿದ್ಯಾರ್ಥಿನಿಯ ಫೋಟೋಗಳನ್ನು ಅಶ್ಲೀಲವಾಗಿ ಮಾರ್ಪಾಡು ಮಾಡಿ ಇನ್‌ಸ್ಟಾಗ್ರಾಮ್ ಖಾತೆಯೆ ಮೂಲಕ ಅಪ್ಲೋಡ್ ಮಾಡಲಾಗಿತ್ತು.
ಈ ಬಗ್ಗೆ ನಾಲ್ವರು ವಿದ್ಯಾರ್ಥಿನಿಯರು ಹುಬ್ಬಳ್ಳಿಯ ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಇದೀಗ ಯುವತಿಯರ ಫೋಟೋಗಳನ್ನು ಅಶ್ಲೀಲವಾಗಿ ಎಡಿಟ್ ಮಾಡಿ, ಅಪ್ಲೋಡ್ ಮಾಡುತ್ತಿದ್ದ ಕಿರಾತಕನನ್ನ ಬಂಧಿಸಲಾಗಿದೆ ಎಂದು ಹುಬ್ಬಳ್ಳಿ ಧಾರವಾಡ ಪೊಲೀಸ ಕಮಿಷನರ್ ಸಂತೋಷ ಬಾಬು ಮಾಹಿತಿ ನೀಡಿದ್ದಾರೆ.ಹುಬ್ಬಳ್ಳಿಯ ಸಮರ್ಥ ಕಾಲೇಜಿನ ನಾಲ್ವರು ಬಿ.ಕಾಂ ವಿದ್ಯಾರ್ಥಿನಿಯರ ಮಾರ್ಪ್ ಮಾಡಿದ ಪೋಟೋಗಳು ಕಳೆದ ಮೂರು ತಿಂಗಳಿAದ ಸಮಾಜಿಕ ಜಾಲತಾಣಗಳಲ್ಲಿ ಹರಿಬಿಡಲಾಗುತ್ತಿತ್ತು. ಕಳೆದ ಜೂನ್ 20ರಂದು ಮೊದಲ ಬಾರಿಗೆ ವಿದ್ಯಾರ್ಥಿನಿಯರು ಕಾಲೇಜು ಆಡಳಿತ ಮಂಡಳಿಗೆ ದೂರು ನೀಡಿದ್ದರು. ಆರಂಭದಲ್ಲಿ ಪ್ರಕರಣವನ್ನು ಕಾಲೇಜು ಆಡಳಿತ ಮಂಡಳಿ ಗಂಭೀರವಾಗಿ ಪರಿಗಣಿಸಿರಲಿಲ್ಲ. ಆದರೆ ಕಿಡಿಗೇಡಿ ಆರೋಪಿ ರಜತ್ ಮಾತ್ರ ತನ್ನ ಚಾಳಿ ಮುಂದುವರೆಸಿದ್ದು, ತನ್ನ ವಿರುದ್ಧ ಯಾರು ಕ್ರಮಕೈಗೊಳ್ಳಲು ಸಾದ್ಯವಿಲ್ಲ, ಪೊಲೀಸರು ಸಹ ನನ್ನ ಹಿಡಿಯಲು ಸಾದ್ಯವಿಲ್ಲ ಎಂದು ಹುಬ್ಬಳ್ಳಿ ಧಾರವಾಡ ಪೊಲೀಸರಿಗೂ ಸವಾಲು ಹಾಕಿ ತನ್ನ ಖಾತೆಯಲ್ಲಿ ಪೋಸ್ಟ್ ಮಾಡಿದ್ದ. ಇದರಿಂದ ಸಾಕಷ್ಟು ನೋವು ಅನುಭವಿಸಿದ ವಿದ್ಯಾರ್ಥಿನಿಯರು ಪೋಲೀಸ್ ಠಾಣೆ ಮೆಟ್ಟಿಲು ಹತ್ತಿದ್ದರು. ಮಾಧ್ಯಮಗಳಲ್ಲಿ ಸುದ್ದಿಯಾಗುತ್ತಿದ್ದಂತೆ ಅಲರ್ಟ್ ಅದ ಪೊಲೀಸರು ಆರೋಪಿಯನ್ನ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ವಿದ್ಯಾರ್ಥಿನಿಯರು ಪೋಟೋ ಮಾರ್ಪ್ ಮಾಡಿ ಅಪ್ಲೋಡ್ ಮಾಡಿದ ಪ್ರಕರಣದಲ್ಲಿ ಬಂಧಿತನಾಗಿರುವ ಆರೋಪಿ ರಜತ್ ಅದೇ ಸಮರ್ಥ ಕಾಲೇಜಿನ ವಿದ್ಯಾರ್ಥಿ ಅನ್ನೋದು ಬೆಳಕಿಗೆ ಬಂದಿದೆ. ಅದೇ ಕಾಲೇಜಿನಲ್ಲಿ ಬಿ.ಕಾಂ ವ್ಯಾಸಂಗ ಮಾಡುತ್ತಿದ್ದ ರಜತ್ ಸರಿಯಾಗಿ ಕಾಲೇಜಿಗೆ ಬರುತ್ತಿರಲಿಲ್ಲ. ಹಾಜರಾತಿ ಕಡಿಮೆ ಇದೆ ಎಂದು ಆತನನ್ನು ಕಾಲೇಜಿನಿಂದ ಆಡಳಿತ ಮಂಡಳಿ ಹೊರಹಾಕಿತ್ತು. ಇದೇ ಸಿಟ್ಟಿಗೆ ಆರೋಪಿ ತನ್ನದೇ ಕ್ಲಾಸ್‌ಮೇಟ್ ಯುವತಿಯರ ಫೋಟೋಗಳನ್ನು ಅಶ್ಲೀಲವಾಗಿ ಎಡಿಟ್ ಮಾಡಿ, ಅವುಗಳನ್ನು ಇನಸ್ಟಾಗ್ರಾಮ್‌ನಲ್ಲಿ ಅಪ್ಲೋಡ್ ಮಾಡುತ್ತಿದ್ದ ಎನ್ನಲಾಗಿದೆ. ಕೇವಲ ರಜತ್ ಮಾತ್ರ ಇದರಲ್ಲಿ ಭಾಗಿಯಾಗಿದ್ದನ್ನ ಅಥವಾ ಇನ್ನೂ ಯಾರಾದರೂ ಆತನ ಜೊತರ ಕೈ ಜೋಡಿಸಿದ್ರಾ ಅನ್ನೊ ತನಿಖೆಯನ್ನು ಪೊಲೀಸರು ನಡೆಸುತ್ತಿದ್ದಾರೆ.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಬಂಟ್ವಾಳ: ಸಂಚರಿಸುತ್ತಿದ್ದ ಲಾರಿಯಲ್ಲಿ ಆಕಸ್ಮಿಕವಾಗಿ ಕಾಣಿಸಿಕೊಂಡ ಬೆ*ಂಕಿ…!

ಸಂಚರಿಸುತ್ತಿದ್ದ ಲಾರಿಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ ಲಾರಿ ಬೆಂಕಿಗಾಹುತಿಯಾದ ಘಟನೆ ಮೆಲ್ಕಾರಿನಲ್ಲಿ ನಡೆದಿದೆ. ಬೆಂಗಳೂರು ಮೂಲದ ಲಾರಿ ಇದಾಗಿದ್ದು, ಮಂಗಳೂರು…

18 hours ago

ಬಂಟ್ವಾಳ: ಹಗ್ಗ ಕಡಿದು ಬಾವಿಗೆ ಬಿದ್ದ ಇಬ್ಬರು ಕಾರ್ಮಿಕರು ಪಾರು….!

ಬಾವಿಯೊಂದರ ಹೂಳೆತ್ತುವ ಕೆಲಸ ಮುಗಿಸಿ ಮೇಲೆ ಬರುವ ವೇಳೆ ಹಗ್ಗ ಜಾರಿ ಬಿದ್ದು ಗಾಯಗೊಂಡ ಘಟನೆ ಬಂಟ್ವಾಳ ತಾಲೂಕಿನ ಕುರಿಯಾಳದ…

18 hours ago

ಕಡೇಶಿವಾಲಯ: ನೆತ್ತರ ಬಾಬು ಪೂಜಾರಿಯವರ ಮನೆಗೆ ಸಿಡಿಲು ಬಡಿದು ಹಾನಿ….!

ಕಡೇಶಿವಾಲಯ ನೆತ್ತರ ಬಾಬು ಪೂಜಾರಿಯವರ ಮನೆಗೆ ಸಿಡಿಲು ಬಡಿದು ಹಾನಿಯಾಗಿದ್ದು ಘಟನಾ ಸ್ಥಳಕ್ಕೆ ಬಂಟ್ವಾಳ ಶಾಸಕರಾದ ರಾಜೇಶ್ ನಾೈಕ್ ಉಳಿಪಾಡಿಯವರು…

18 hours ago

ಬಂಟ್ವಾಳ: ಸಿಡಿಲು ಬಡಿದ ಇಳಿಯೂರು ಶ್ರೀ ಮಹಾವಿಷ್ಣು ದೇವಸ್ಥಾನಕ್ಕೆ ಭೇಟಿ ನೀಡಿದ ಬಿಜೆಪಿ ಮುಖಂಡ ಸಂದೇಶ್ ಶೆಟ್ಟಿ ಅರೆಬೆಟ್ಟು..!

ಬಂಟ್ವಾಳ: ಸಿಡಿಲು ಬಡಿದು ಹಾನಿಗೊಳಗಾದ ಇಳಿಯೂರು ಶ್ರೀ ಮಹಾವಿಷ್ಣು ದೇವಸ್ಥಾನಕ್ಕೆ ಬಿಜೆಪಿ ಮುಖಂಡ ಸಂದೇಶ್ ಶೆಟ್ಟಿ ಅರೆಬೆಟ್ಟು ಅವರು ರಾತ್ರಿ…

2 days ago

ಬಂಟ್ವಾಳ: ಕರಾವಳಿಯ ಕಾರಣೀಕ ದೈವ ಕೊರಗಜ್ಜನಿಗೆ ಕೋಲ ಸೇವೆ ಸಲ್ಲಿಸಿದ ಖ್ಯಾತ ಚಲನಚಿತ್ರ ನಟಿಯಾಗಿರುವ ರಚಿತರಾಮ್..!

ಬೆಂಗಳೂರಿನ ಖ್ಯಾತ ಚಲನಚಿತ್ರ ನಟಿಯಾಗಿರುವ ಬಿಂದ್ಯರಾಮ್ (ರಚಿತರಾಮ್) ಅವರು ಕರಾವಳಿಯ ಕಾರಣೀಕ ದೈವ ಕೊರಗಜ್ಜನಿಗೆ ಕೋಲ ಸೇವೆ ಸಲ್ಲಿಸಿದ್ದಾರೆ. ಬೆಂಜನಪದವಿನ…

2 days ago

ಬಂಟ್ವಾಳ: ಬಂಟ್ವಾಳ ತಾಲೂಕಿನ ಮಹತೋಬಾರ ಶ್ರೀ ಕಾರಿಂಜೇಶ್ವರ ದೇವಸ್ಥಾನಕ್ಕೆ ಬಡಿದ ಸಿಡಿಲು..!

ದಕ್ಷಿಣ ಕನ್ನಡ ಜಿಲ್ಲೆಯ ನಿನ್ನೆ ಸುರಿದ ಧಾರಾಕಾರ ಮಳೆಯ ಪರಿಣಾಮ ಬಂಟ್ವಾಳ ತಾಲೂಕಿನ ಹಲವು ಭಾಗಗಳಲ್ಲಿ ಸಿಡಿಲು ಬಡಿದು ಅಪಾರ…

2 days ago