ಜನ ಮನದ ನಾಡಿ ಮಿಡಿತ

Advertisement

ಕರಾವಳಿಯ ವಾಣಿಜ್ಯ ಬೆಳೆಯಾದ ಅಡಿಕೆ ಬೆಳೆಗಾರನಿಗೆ ಆರ್ಥಿಕ ಸಂಕಷ್ಟ

 ಕೇಂದ್ರ ವಾಣಿಜ್ಯ ಹಾಗೂ ಕೈಗಾರಿಕಾ ಸಚಿವಾಲಯ ಭೂತಾನ್‌ನಿಂದ ಅಡಿಕೆ ಆಮದಿಗೆ ಒಪ್ಪಿಗೆ ನೀಡಿದೆ. ಅಲ್ಲದೆ ಅಡಿಕೆಗೆ  ನಿಗದಿಯಾಗಿದ್ದ ಕನಿಷ್ಠ ಆಮದು ಬೆಲೆಯನ್ನ ಇಲ್ಲವಾಗಿಸಿದ್ದು ರೈತರ ಆತಂಕಕ್ಕೆ ಕಾರಣವಾಗಿದೆ.  

  ದೇಶೀ ಅಡಿಕೆಗೆ ಮನ್ನಣೆ ಸಿಗಬೇಕೆಂಬ ದೃಷ್ಟಿಯಲ್ಲಿ ವಿದೇಶದಿಂದ ಭಾರತಕ್ಕೆ ಆಮದಾಗುವ ಅಡಿಕೆಗೆ  ಕನಿಷ್ಠ ಆಮದು ಬೆಲೆ ನಿಗದಿಪಡಿಸಲಾಗಿತ್ತು. ಆದರೆ, ಈ ನಿಯಮ ಉಲ್ಲಂಘಿಸಿ ಭೂತಾನ್‌ನಿಂದ ಆಮದು ಬೆಲೆ ವಿಧಿಸದೆ ಅಡಿಕೆ ಆಮದಿಗೆ ಒಪ್ಪಿಗೆ ನೀಡಿರುವುದು ಪ್ರಸ್ತುತ ಸಂಕಷ್ಟಕ್ಕೆ ಕಾರಣ . ಇದು ಹಲವು ಅಡ್ಡ ಪರಿಣಾಮ ಸೃಷ್ಟಿಸುವ ಭೀತಿ ಉಂಟಾಗಿದೆ. ಈ ಹಿಂದೆ ಇತರ ರಾಷ್ಟ್ರಗಳಿಂದ  ಇದೇ ರೀತಿ ಆಮದು ಮಾಡಿ   ಅಡಿಕೆ ಮಾರುಕಟ್ಟೆಯಲ್ಲಿ ದೇಶೀಯ ಅಡಿಕೆ ಧಾರಣೆ ಪಾತಾಳಕ್ಕೆ ಕುಸಿದಿತ್ತು. ಅಂತಹ ಸ್ಥಿತಿ ಮತ್ತೊಮ್ಮೆ ಉಂಟಾಗುವ ಆತಂಕ ರೈತರದ್ದಾಗಿದೆ.

     ಕೂಡಲೇ ಈ ಆದೇಶವನ್ನು ಹಿಂಪಡೆದು ಬೆಳೆಗಾರರ ಹಿತ ಕಾಪಾಡಬೇಕು ಎಂಬ ಆಗ್ರಹಗಳು ಕೇಳಿಬಂದಿವೆ. ಜೊತೆಗೆ ಇದನ್ನೇ ನೆಪವಾಗಿಟ್ಟುಕೊಂಡು ಮಧ್ಯವರ್ತಿಗಳು ಬೆಲೆ ಕಡಿಮೆ ಮಾಡಲು ಯತ್ನಿಸುತ್ತಾರೆ. ಸರ್ಕಾರ ಮತ್ತು ಅಧಿಕಾರಿಗಳಿಗೆ ರೈತರ ಬಗ್ಗೆ ಕಾಳಜಿ ಇದ್ದರೆ ಅನ್ಯಾಯ ತಡೆಯಲಿ. ಷರತ್ತು ವಿಧಿಸಿ ಭೂತಾನ್‌ನಿಂದ ಅಡಿಕೆ ಆಮದು ಮಾಡಿಕೊಳ್ಳಲಿ ಎಂಬುದು ರೈತರ ಬೇಡಿಕೆಯಾಗಿದೆ.

     ರಾಜ್ಯದಲ್ಲಿ ಒಟ್ಟಾರೆ 4.20 ಲಕ್ಷ ಹೆಕ್ಟೇರ್ ಅಡಿಕೆ ಪ್ರದೇಶವಿದೆ. ದೇಶದ ಅಡಿಕೆ ಉತ್ಪಾದನೆಯ ಶೇ.35ಕ್ಕೂ ಹೆಚ್ಚು ಅಡಿಕೆಯನ್ನು ಕರ್ನಾಟಕ ರಾಜ್ಯದಿಂದಲೇ ಉತ್ಪಾದಿಸಲಾಗುತ್ತಿದೆ. ಕಳೆದ ಮೂರು ವರ್ಷಗಳ ಅವಧಿಯಲ್ಲಿ ರಾಜ್ಯದಲ್ಲಿ ಅಡಿಕೆ ಉತ್ಪಾದನೆಯು ಶೇ.30 ರಷ್ಟು ಹೆಚ್ಚಿದೆ’ ಎಂದು ಮಾರುಕಟ್ಟೆ ತಜ್ಞರು ಮಾಹಿತಿ ನೀಡಿದ್ದಾರೆ

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!