ಜನ ಮನದ ನಾಡಿ ಮಿಡಿತ

Advertisement

ಕರಾವಳಿಯ ವಾಣಿಜ್ಯ ಬೆಳೆಯಾದ ಅಡಿಕೆ ಬೆಳೆಗಾರನಿಗೆ ಆರ್ಥಿಕ ಸಂಕಷ್ಟ

 ಕೇಂದ್ರ ವಾಣಿಜ್ಯ ಹಾಗೂ ಕೈಗಾರಿಕಾ ಸಚಿವಾಲಯ ಭೂತಾನ್‌ನಿಂದ ಅಡಿಕೆ ಆಮದಿಗೆ ಒಪ್ಪಿಗೆ ನೀಡಿದೆ. ಅಲ್ಲದೆ ಅಡಿಕೆಗೆ  ನಿಗದಿಯಾಗಿದ್ದ ಕನಿಷ್ಠ ಆಮದು ಬೆಲೆಯನ್ನ ಇಲ್ಲವಾಗಿಸಿದ್ದು ರೈತರ ಆತಂಕಕ್ಕೆ ಕಾರಣವಾಗಿದೆ.  

  ದೇಶೀ ಅಡಿಕೆಗೆ ಮನ್ನಣೆ ಸಿಗಬೇಕೆಂಬ ದೃಷ್ಟಿಯಲ್ಲಿ ವಿದೇಶದಿಂದ ಭಾರತಕ್ಕೆ ಆಮದಾಗುವ ಅಡಿಕೆಗೆ  ಕನಿಷ್ಠ ಆಮದು ಬೆಲೆ ನಿಗದಿಪಡಿಸಲಾಗಿತ್ತು. ಆದರೆ, ಈ ನಿಯಮ ಉಲ್ಲಂಘಿಸಿ ಭೂತಾನ್‌ನಿಂದ ಆಮದು ಬೆಲೆ ವಿಧಿಸದೆ ಅಡಿಕೆ ಆಮದಿಗೆ ಒಪ್ಪಿಗೆ ನೀಡಿರುವುದು ಪ್ರಸ್ತುತ ಸಂಕಷ್ಟಕ್ಕೆ ಕಾರಣ . ಇದು ಹಲವು ಅಡ್ಡ ಪರಿಣಾಮ ಸೃಷ್ಟಿಸುವ ಭೀತಿ ಉಂಟಾಗಿದೆ. ಈ ಹಿಂದೆ ಇತರ ರಾಷ್ಟ್ರಗಳಿಂದ  ಇದೇ ರೀತಿ ಆಮದು ಮಾಡಿ   ಅಡಿಕೆ ಮಾರುಕಟ್ಟೆಯಲ್ಲಿ ದೇಶೀಯ ಅಡಿಕೆ ಧಾರಣೆ ಪಾತಾಳಕ್ಕೆ ಕುಸಿದಿತ್ತು. ಅಂತಹ ಸ್ಥಿತಿ ಮತ್ತೊಮ್ಮೆ ಉಂಟಾಗುವ ಆತಂಕ ರೈತರದ್ದಾಗಿದೆ.

     ಕೂಡಲೇ ಈ ಆದೇಶವನ್ನು ಹಿಂಪಡೆದು ಬೆಳೆಗಾರರ ಹಿತ ಕಾಪಾಡಬೇಕು ಎಂಬ ಆಗ್ರಹಗಳು ಕೇಳಿಬಂದಿವೆ. ಜೊತೆಗೆ ಇದನ್ನೇ ನೆಪವಾಗಿಟ್ಟುಕೊಂಡು ಮಧ್ಯವರ್ತಿಗಳು ಬೆಲೆ ಕಡಿಮೆ ಮಾಡಲು ಯತ್ನಿಸುತ್ತಾರೆ. ಸರ್ಕಾರ ಮತ್ತು ಅಧಿಕಾರಿಗಳಿಗೆ ರೈತರ ಬಗ್ಗೆ ಕಾಳಜಿ ಇದ್ದರೆ ಅನ್ಯಾಯ ತಡೆಯಲಿ. ಷರತ್ತು ವಿಧಿಸಿ ಭೂತಾನ್‌ನಿಂದ ಅಡಿಕೆ ಆಮದು ಮಾಡಿಕೊಳ್ಳಲಿ ಎಂಬುದು ರೈತರ ಬೇಡಿಕೆಯಾಗಿದೆ.

     ರಾಜ್ಯದಲ್ಲಿ ಒಟ್ಟಾರೆ 4.20 ಲಕ್ಷ ಹೆಕ್ಟೇರ್ ಅಡಿಕೆ ಪ್ರದೇಶವಿದೆ. ದೇಶದ ಅಡಿಕೆ ಉತ್ಪಾದನೆಯ ಶೇ.35ಕ್ಕೂ ಹೆಚ್ಚು ಅಡಿಕೆಯನ್ನು ಕರ್ನಾಟಕ ರಾಜ್ಯದಿಂದಲೇ ಉತ್ಪಾದಿಸಲಾಗುತ್ತಿದೆ. ಕಳೆದ ಮೂರು ವರ್ಷಗಳ ಅವಧಿಯಲ್ಲಿ ರಾಜ್ಯದಲ್ಲಿ ಅಡಿಕೆ ಉತ್ಪಾದನೆಯು ಶೇ.30 ರಷ್ಟು ಹೆಚ್ಚಿದೆ’ ಎಂದು ಮಾರುಕಟ್ಟೆ ತಜ್ಞರು ಮಾಹಿತಿ ನೀಡಿದ್ದಾರೆ

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!