ಕೇಂದ್ರ ವಾಣಿಜ್ಯ ಹಾಗೂ ಕೈಗಾರಿಕಾ ಸಚಿವಾಲಯ ಭೂತಾನ್ನಿಂದ ಅಡಿಕೆ ಆಮದಿಗೆ ಒಪ್ಪಿಗೆ ನೀಡಿದೆ. ಅಲ್ಲದೆ ಅಡಿಕೆಗೆ ನಿಗದಿಯಾಗಿದ್ದ ಕನಿಷ್ಠ ಆಮದು ಬೆಲೆಯನ್ನ ಇಲ್ಲವಾಗಿಸಿದ್ದು ರೈತರ ಆತಂಕಕ್ಕೆ ಕಾರಣವಾಗಿದೆ.
ದೇಶೀ ಅಡಿಕೆಗೆ ಮನ್ನಣೆ ಸಿಗಬೇಕೆಂಬ ದೃಷ್ಟಿಯಲ್ಲಿ ವಿದೇಶದಿಂದ ಭಾರತಕ್ಕೆ ಆಮದಾಗುವ ಅಡಿಕೆಗೆ ಕನಿಷ್ಠ ಆಮದು ಬೆಲೆ ನಿಗದಿಪಡಿಸಲಾಗಿತ್ತು. ಆದರೆ, ಈ ನಿಯಮ ಉಲ್ಲಂಘಿಸಿ ಭೂತಾನ್ನಿಂದ ಆಮದು ಬೆಲೆ ವಿಧಿಸದೆ ಅಡಿಕೆ ಆಮದಿಗೆ ಒಪ್ಪಿಗೆ ನೀಡಿರುವುದು ಪ್ರಸ್ತುತ ಸಂಕಷ್ಟಕ್ಕೆ ಕಾರಣ . ಇದು ಹಲವು ಅಡ್ಡ ಪರಿಣಾಮ ಸೃಷ್ಟಿಸುವ ಭೀತಿ ಉಂಟಾಗಿದೆ. ಈ ಹಿಂದೆ ಇತರ ರಾಷ್ಟ್ರಗಳಿಂದ ಇದೇ ರೀತಿ ಆಮದು ಮಾಡಿ ಅಡಿಕೆ ಮಾರುಕಟ್ಟೆಯಲ್ಲಿ ದೇಶೀಯ ಅಡಿಕೆ ಧಾರಣೆ ಪಾತಾಳಕ್ಕೆ ಕುಸಿದಿತ್ತು. ಅಂತಹ ಸ್ಥಿತಿ ಮತ್ತೊಮ್ಮೆ ಉಂಟಾಗುವ ಆತಂಕ ರೈತರದ್ದಾಗಿದೆ.
ಕೂಡಲೇ ಈ ಆದೇಶವನ್ನು ಹಿಂಪಡೆದು ಬೆಳೆಗಾರರ ಹಿತ ಕಾಪಾಡಬೇಕು ಎಂಬ ಆಗ್ರಹಗಳು ಕೇಳಿಬಂದಿವೆ. ಜೊತೆಗೆ ಇದನ್ನೇ ನೆಪವಾಗಿಟ್ಟುಕೊಂಡು ಮಧ್ಯವರ್ತಿಗಳು ಬೆಲೆ ಕಡಿಮೆ ಮಾಡಲು ಯತ್ನಿಸುತ್ತಾರೆ. ಸರ್ಕಾರ ಮತ್ತು ಅಧಿಕಾರಿಗಳಿಗೆ ರೈತರ ಬಗ್ಗೆ ಕಾಳಜಿ ಇದ್ದರೆ ಅನ್ಯಾಯ ತಡೆಯಲಿ. ಷರತ್ತು ವಿಧಿಸಿ ಭೂತಾನ್ನಿಂದ ಅಡಿಕೆ ಆಮದು ಮಾಡಿಕೊಳ್ಳಲಿ ಎಂಬುದು ರೈತರ ಬೇಡಿಕೆಯಾಗಿದೆ.
ರಾಜ್ಯದಲ್ಲಿ ಒಟ್ಟಾರೆ 4.20 ಲಕ್ಷ ಹೆಕ್ಟೇರ್ ಅಡಿಕೆ ಪ್ರದೇಶವಿದೆ. ದೇಶದ ಅಡಿಕೆ ಉತ್ಪಾದನೆಯ ಶೇ.35ಕ್ಕೂ ಹೆಚ್ಚು ಅಡಿಕೆಯನ್ನು ಕರ್ನಾಟಕ ರಾಜ್ಯದಿಂದಲೇ ಉತ್ಪಾದಿಸಲಾಗುತ್ತಿದೆ. ಕಳೆದ ಮೂರು ವರ್ಷಗಳ ಅವಧಿಯಲ್ಲಿ ರಾಜ್ಯದಲ್ಲಿ ಅಡಿಕೆ ಉತ್ಪಾದನೆಯು ಶೇ.30 ರಷ್ಟು ಹೆಚ್ಚಿದೆ’ ಎಂದು ಮಾರುಕಟ್ಟೆ ತಜ್ಞರು ಮಾಹಿತಿ ನೀಡಿದ್ದಾರೆ
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ್ಯರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್ನಲ್ಲಿ ಖಾಸಗಿ ಬಸ್ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…