ಜನ ಮನದ ನಾಡಿ ಮಿಡಿತ

Advertisement

ಕೆದಿಲ ಗ್ರಾಮ ಪಂಚಾಯತ್ ಕಾಂಗ್ರೆಸ್ ತೆಕ್ಕೆಗೆ

ಮೂವರು ಬಿಜೆಪಿ ಬೆಂಬಲಿತ ಸದಸ್ಯರು ಕಾಂಗ್ರೆಸ್ ಸೇರ್ಪಡೆಗೊಂಡು ಕಾಂಗ್ರೆಸ್ ತನ್ನ ಬಲವನ್ನು 9 ಕ್ಕೆ ಹೆಚ್ಚಿಸಿಕೊಂಡು ಆಡಳಿತದ ಚುಕ್ಕಾಣಿ ಹಿಡಿಯಿತು.

ಕಳೆದ ಬಾರಿ ಕಾಂಗ್ರೆಸ್ 7 ಬಿಜೆಪಿ 7 ಸಮಬಲ ಸ್ಥಾನ ಪಡೆದು ಸಾಮಾನ್ಯ ಮಹಿಳೆಗೆ ಅಧ್ಯಕ್ಷ ಸ್ಥಾನದ ಅವಕಾಶವನ್ನು ತನ್ನದಾಗಿಸಿಕೊಳ್ಳಲು ಬಿಜೆಪಿ ಆಪರೇಶನ್ ಕಮಲದ ಮೂಲಕ ತನ್ನ ಬಲವನ್ನು 8 ಕ್ಕೆ ಹೆಚ್ಚಿಸಿಕೊಂಡಿತ್ತು.
ಆದರೆ ರಾತ್ರೊ ರಾತ್ರಿ ನಡೆದ ಕಾವು ಹೇಮನಾಥ್ ಶೆಟ್ಟಿಯವರಿಂದ ನಡೆದ ರಾಜಕೀಯ ಕ್ಷಿಪ್ರ ಬೆಳವಣಿಗೆ ಮೂಲಕ ಮರುದಿನ ಚುನಾವಣೆ ನಡೆದಾಗ 7, 7 ಸಮಬಲವೇ ಕಾಯ್ದುಕೊಂಡಿತ್ತು. ಟಾಸ್ ಮೂಲಕ ಅಧಿಕಾರ ಬಿಜೆಪಿ ಪಾಲಾಯಿತು.
ಈ ಬಾರಿ ಬಿಜೆಪಿಯಿಂದ ಅಸಮಾಧಾನಗೊಂಡಿದ್ದ ಹರೀಶ್, ಶ್ಯಾಮಲ ಮತ್ತು ದೇವಕಿ ಎಂಬ ಮೂವರು ಬಿಜೆಪಿ ಬೆಂಬಲಿತ ಸದಸ್ಯರು ಕೆದಿಲ ವಲಯ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಪ್ರವೀಣ್ ಚಂದ್ರ ಶೆಟ್ಟಿ ಕಲ್ಲಾಜೆ , ಗ್ರಾಮ ಪಂಚಾಯತಿ ಸದಸ್ಯರಾದ ಅಜೀಝ್ ಸತ್ತಿಕಲ್ಲು , ಮತ್ತು ಎನ್ ಎಸ್ ಯು ಐ ರಾಜ್ಯ ಉಪಾಧ್ಯಕ್ಷರು ಫಾರೂಕ್ ಬಾಯಬೆ ಜೊತೆ ಸಂಪರ್ಕದಲ್ಲಿದ್ದುಕೊಂಡು ಇಂದು ಬೆಳಿಗ್ಗೆ ಕ್ಷೇತ್ರದ ಶಾಸಕರು ಅಶೋಕ್ ಕುಮಾರ್ ರೈ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಗೊಂಡರು.
ಅಧ್ಯಕ್ಷ ಸ್ಥಾನಕ್ಕೆ ಹರೀಶ್ (ಸಾಮಾನ್ಯ ) ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಬಿ ಫಾತುಮ್ಮ ( ಸಾಮಾನ್ಯ ಮಹಿಳೆ) ಯವರು ಬಹುಮತದಿಂದ ಆಯ್ಕೆಯಾದರು

Leave a Reply

Your email address will not be published. Required fields are marked *

ಉಡುಪಿ: ತುಳುನಾಡಿಗೆ ಕಯ್ಯಾರ ಕಿಞ್ಞಣ್ಣ ರೈ ಕೊಡುಗೆ ಅಪಾರ: ಜಯಕರ ಶೆಟ್ಟಿ

ಮಂಗಳೂರು: ಮಂಗಳೂರು ಪತ್ರಕರ್ತ ಸುರೇಶ್ ಡಿ. ಪಳ್ಳಿಗೆ ನಾರದ ಪುರಸ್ಕಾರ ಘೋಷಣೆ

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

error: Content is protected !!