ಮೂವರು ಬಿಜೆಪಿ ಬೆಂಬಲಿತ ಸದಸ್ಯರು ಕಾಂಗ್ರೆಸ್ ಸೇರ್ಪಡೆಗೊಂಡು ಕಾಂಗ್ರೆಸ್ ತನ್ನ ಬಲವನ್ನು 9 ಕ್ಕೆ ಹೆಚ್ಚಿಸಿಕೊಂಡು ಆಡಳಿತದ ಚುಕ್ಕಾಣಿ ಹಿಡಿಯಿತು.
ಕಳೆದ ಬಾರಿ ಕಾಂಗ್ರೆಸ್ 7 ಬಿಜೆಪಿ 7 ಸಮಬಲ ಸ್ಥಾನ ಪಡೆದು ಸಾಮಾನ್ಯ ಮಹಿಳೆಗೆ ಅಧ್ಯಕ್ಷ ಸ್ಥಾನದ ಅವಕಾಶವನ್ನು ತನ್ನದಾಗಿಸಿಕೊಳ್ಳಲು ಬಿಜೆಪಿ ಆಪರೇಶನ್ ಕಮಲದ ಮೂಲಕ ತನ್ನ ಬಲವನ್ನು 8 ಕ್ಕೆ ಹೆಚ್ಚಿಸಿಕೊಂಡಿತ್ತು.
ಆದರೆ ರಾತ್ರೊ ರಾತ್ರಿ ನಡೆದ ಕಾವು ಹೇಮನಾಥ್ ಶೆಟ್ಟಿಯವರಿಂದ ನಡೆದ ರಾಜಕೀಯ ಕ್ಷಿಪ್ರ ಬೆಳವಣಿಗೆ ಮೂಲಕ ಮರುದಿನ ಚುನಾವಣೆ ನಡೆದಾಗ 7, 7 ಸಮಬಲವೇ ಕಾಯ್ದುಕೊಂಡಿತ್ತು. ಟಾಸ್ ಮೂಲಕ ಅಧಿಕಾರ ಬಿಜೆಪಿ ಪಾಲಾಯಿತು.
ಈ ಬಾರಿ ಬಿಜೆಪಿಯಿಂದ ಅಸಮಾಧಾನಗೊಂಡಿದ್ದ ಹರೀಶ್, ಶ್ಯಾಮಲ ಮತ್ತು ದೇವಕಿ ಎಂಬ ಮೂವರು ಬಿಜೆಪಿ ಬೆಂಬಲಿತ ಸದಸ್ಯರು ಕೆದಿಲ ವಲಯ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಪ್ರವೀಣ್ ಚಂದ್ರ ಶೆಟ್ಟಿ ಕಲ್ಲಾಜೆ , ಗ್ರಾಮ ಪಂಚಾಯತಿ ಸದಸ್ಯರಾದ ಅಜೀಝ್ ಸತ್ತಿಕಲ್ಲು , ಮತ್ತು ಎನ್ ಎಸ್ ಯು ಐ ರಾಜ್ಯ ಉಪಾಧ್ಯಕ್ಷರು ಫಾರೂಕ್ ಬಾಯಬೆ ಜೊತೆ ಸಂಪರ್ಕದಲ್ಲಿದ್ದುಕೊಂಡು ಇಂದು ಬೆಳಿಗ್ಗೆ ಕ್ಷೇತ್ರದ ಶಾಸಕರು ಅಶೋಕ್ ಕುಮಾರ್ ರೈ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಗೊಂಡರು.
ಅಧ್ಯಕ್ಷ ಸ್ಥಾನಕ್ಕೆ ಹರೀಶ್ (ಸಾಮಾನ್ಯ ) ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಬಿ ಫಾತುಮ್ಮ ( ಸಾಮಾನ್ಯ ಮಹಿಳೆ) ಯವರು ಬಹುಮತದಿಂದ ಆಯ್ಕೆಯಾದರು
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ್ಯರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್ನಲ್ಲಿ ಖಾಸಗಿ ಬಸ್ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…