ಮೂವರು ಬಿಜೆಪಿ ಬೆಂಬಲಿತ ಸದಸ್ಯರು ಕಾಂಗ್ರೆಸ್ ಸೇರ್ಪಡೆಗೊಂಡು ಕಾಂಗ್ರೆಸ್ ತನ್ನ ಬಲವನ್ನು 9 ಕ್ಕೆ ಹೆಚ್ಚಿಸಿಕೊಂಡು ಆಡಳಿತದ ಚುಕ್ಕಾಣಿ ಹಿಡಿಯಿತು.
ಕಳೆದ ಬಾರಿ ಕಾಂಗ್ರೆಸ್ 7 ಬಿಜೆಪಿ 7 ಸಮಬಲ ಸ್ಥಾನ ಪಡೆದು ಸಾಮಾನ್ಯ ಮಹಿಳೆಗೆ ಅಧ್ಯಕ್ಷ ಸ್ಥಾನದ ಅವಕಾಶವನ್ನು ತನ್ನದಾಗಿಸಿಕೊಳ್ಳಲು ಬಿಜೆಪಿ ಆಪರೇಶನ್ ಕಮಲದ ಮೂಲಕ ತನ್ನ ಬಲವನ್ನು 8 ಕ್ಕೆ ಹೆಚ್ಚಿಸಿಕೊಂಡಿತ್ತು.
ಆದರೆ ರಾತ್ರೊ ರಾತ್ರಿ ನಡೆದ ಕಾವು ಹೇಮನಾಥ್ ಶೆಟ್ಟಿಯವರಿಂದ ನಡೆದ ರಾಜಕೀಯ ಕ್ಷಿಪ್ರ ಬೆಳವಣಿಗೆ ಮೂಲಕ ಮರುದಿನ ಚುನಾವಣೆ ನಡೆದಾಗ 7, 7 ಸಮಬಲವೇ ಕಾಯ್ದುಕೊಂಡಿತ್ತು. ಟಾಸ್ ಮೂಲಕ ಅಧಿಕಾರ ಬಿಜೆಪಿ ಪಾಲಾಯಿತು.
ಈ ಬಾರಿ ಬಿಜೆಪಿಯಿಂದ ಅಸಮಾಧಾನಗೊಂಡಿದ್ದ ಹರೀಶ್, ಶ್ಯಾಮಲ ಮತ್ತು ದೇವಕಿ ಎಂಬ ಮೂವರು ಬಿಜೆಪಿ ಬೆಂಬಲಿತ ಸದಸ್ಯರು ಕೆದಿಲ ವಲಯ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಪ್ರವೀಣ್ ಚಂದ್ರ ಶೆಟ್ಟಿ ಕಲ್ಲಾಜೆ , ಗ್ರಾಮ ಪಂಚಾಯತಿ ಸದಸ್ಯರಾದ ಅಜೀಝ್ ಸತ್ತಿಕಲ್ಲು , ಮತ್ತು ಎನ್ ಎಸ್ ಯು ಐ ರಾಜ್ಯ ಉಪಾಧ್ಯಕ್ಷರು ಫಾರೂಕ್ ಬಾಯಬೆ ಜೊತೆ ಸಂಪರ್ಕದಲ್ಲಿದ್ದುಕೊಂಡು ಇಂದು ಬೆಳಿಗ್ಗೆ ಕ್ಷೇತ್ರದ ಶಾಸಕರು ಅಶೋಕ್ ಕುಮಾರ್ ರೈ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಗೊಂಡರು.
ಅಧ್ಯಕ್ಷ ಸ್ಥಾನಕ್ಕೆ ಹರೀಶ್ (ಸಾಮಾನ್ಯ ) ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಬಿ ಫಾತುಮ್ಮ ( ಸಾಮಾನ್ಯ ಮಹಿಳೆ) ಯವರು ಬಹುಮತದಿಂದ ಆಯ್ಕೆಯಾದರು
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…