ಮೂವರು ಬಿಜೆಪಿ ಬೆಂಬಲಿತ ಸದಸ್ಯರು ಕಾಂಗ್ರೆಸ್ ಸೇರ್ಪಡೆಗೊಂಡು ಕಾಂಗ್ರೆಸ್ ತನ್ನ ಬಲವನ್ನು 9 ಕ್ಕೆ ಹೆಚ್ಚಿಸಿಕೊಂಡು ಆಡಳಿತದ ಚುಕ್ಕಾಣಿ ಹಿಡಿಯಿತು.
ಕಳೆದ ಬಾರಿ ಕಾಂಗ್ರೆಸ್ 7 ಬಿಜೆಪಿ 7 ಸಮಬಲ ಸ್ಥಾನ ಪಡೆದು ಸಾಮಾನ್ಯ ಮಹಿಳೆಗೆ ಅಧ್ಯಕ್ಷ ಸ್ಥಾನದ ಅವಕಾಶವನ್ನು ತನ್ನದಾಗಿಸಿಕೊಳ್ಳಲು ಬಿಜೆಪಿ ಆಪರೇಶನ್ ಕಮಲದ ಮೂಲಕ ತನ್ನ ಬಲವನ್ನು 8 ಕ್ಕೆ ಹೆಚ್ಚಿಸಿಕೊಂಡಿತ್ತು.
ಆದರೆ ರಾತ್ರೊ ರಾತ್ರಿ ನಡೆದ ಕಾವು ಹೇಮನಾಥ್ ಶೆಟ್ಟಿಯವರಿಂದ ನಡೆದ ರಾಜಕೀಯ ಕ್ಷಿಪ್ರ ಬೆಳವಣಿಗೆ ಮೂಲಕ ಮರುದಿನ ಚುನಾವಣೆ ನಡೆದಾಗ 7, 7 ಸಮಬಲವೇ ಕಾಯ್ದುಕೊಂಡಿತ್ತು. ಟಾಸ್ ಮೂಲಕ ಅಧಿಕಾರ ಬಿಜೆಪಿ ಪಾಲಾಯಿತು.
ಈ ಬಾರಿ ಬಿಜೆಪಿಯಿಂದ ಅಸಮಾಧಾನಗೊಂಡಿದ್ದ ಹರೀಶ್, ಶ್ಯಾಮಲ ಮತ್ತು ದೇವಕಿ ಎಂಬ ಮೂವರು ಬಿಜೆಪಿ ಬೆಂಬಲಿತ ಸದಸ್ಯರು ಕೆದಿಲ ವಲಯ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಪ್ರವೀಣ್ ಚಂದ್ರ ಶೆಟ್ಟಿ ಕಲ್ಲಾಜೆ , ಗ್ರಾಮ ಪಂಚಾಯತಿ ಸದಸ್ಯರಾದ ಅಜೀಝ್ ಸತ್ತಿಕಲ್ಲು , ಮತ್ತು ಎನ್ ಎಸ್ ಯು ಐ ರಾಜ್ಯ ಉಪಾಧ್ಯಕ್ಷರು ಫಾರೂಕ್ ಬಾಯಬೆ ಜೊತೆ ಸಂಪರ್ಕದಲ್ಲಿದ್ದುಕೊಂಡು ಇಂದು ಬೆಳಿಗ್ಗೆ ಕ್ಷೇತ್ರದ ಶಾಸಕರು ಅಶೋಕ್ ಕುಮಾರ್ ರೈ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಗೊಂಡರು.
ಅಧ್ಯಕ್ಷ ಸ್ಥಾನಕ್ಕೆ ಹರೀಶ್ (ಸಾಮಾನ್ಯ ) ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಬಿ ಫಾತುಮ್ಮ ( ಸಾಮಾನ್ಯ ಮಹಿಳೆ) ಯವರು ಬಹುಮತದಿಂದ ಆಯ್ಕೆಯಾದರು
ತುಳುನಾಡಿನ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ಕಯ್ಯಾರ ಕಿಞ್ಞಣ್ಣ ರೈ ಅವರ ಕೊಡುಗೆ ಅಪಾರವಾಗಿದ್ದು, ಅವರನ್ನು ಈ ನಾಡಿನ…
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕಾರಣಗಿರಿ ಗ್ರಾಮ ಭಾರತಿ ಟ್ರಸ್ಟ್ ಹಾಗೂ ಕಲಾದರ್ಶನ ಮಾಸಪತ್ರಿಕೆ ಆಶ್ರಯದಲ್ಲಿ ಪ್ರಥಮ ಸುದ್ದಿ ವಾಹಕ…
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…