ಮೂವರು ಬಿಜೆಪಿ ಬೆಂಬಲಿತ ಸದಸ್ಯರು ಕಾಂಗ್ರೆಸ್ ಸೇರ್ಪಡೆಗೊಂಡು ಕಾಂಗ್ರೆಸ್ ತನ್ನ ಬಲವನ್ನು 9 ಕ್ಕೆ ಹೆಚ್ಚಿಸಿಕೊಂಡು ಆಡಳಿತದ ಚುಕ್ಕಾಣಿ ಹಿಡಿಯಿತು.
ಕಳೆದ ಬಾರಿ ಕಾಂಗ್ರೆಸ್ 7 ಬಿಜೆಪಿ 7 ಸಮಬಲ ಸ್ಥಾನ ಪಡೆದು ಸಾಮಾನ್ಯ ಮಹಿಳೆಗೆ ಅಧ್ಯಕ್ಷ ಸ್ಥಾನದ ಅವಕಾಶವನ್ನು ತನ್ನದಾಗಿಸಿಕೊಳ್ಳಲು ಬಿಜೆಪಿ ಆಪರೇಶನ್ ಕಮಲದ ಮೂಲಕ ತನ್ನ ಬಲವನ್ನು 8 ಕ್ಕೆ ಹೆಚ್ಚಿಸಿಕೊಂಡಿತ್ತು.
ಆದರೆ ರಾತ್ರೊ ರಾತ್ರಿ ನಡೆದ ಕಾವು ಹೇಮನಾಥ್ ಶೆಟ್ಟಿಯವರಿಂದ ನಡೆದ ರಾಜಕೀಯ ಕ್ಷಿಪ್ರ ಬೆಳವಣಿಗೆ ಮೂಲಕ ಮರುದಿನ ಚುನಾವಣೆ ನಡೆದಾಗ 7, 7 ಸಮಬಲವೇ ಕಾಯ್ದುಕೊಂಡಿತ್ತು. ಟಾಸ್ ಮೂಲಕ ಅಧಿಕಾರ ಬಿಜೆಪಿ ಪಾಲಾಯಿತು.
ಈ ಬಾರಿ ಬಿಜೆಪಿಯಿಂದ ಅಸಮಾಧಾನಗೊಂಡಿದ್ದ ಹರೀಶ್, ಶ್ಯಾಮಲ ಮತ್ತು ದೇವಕಿ ಎಂಬ ಮೂವರು ಬಿಜೆಪಿ ಬೆಂಬಲಿತ ಸದಸ್ಯರು ಕೆದಿಲ ವಲಯ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಪ್ರವೀಣ್ ಚಂದ್ರ ಶೆಟ್ಟಿ ಕಲ್ಲಾಜೆ , ಗ್ರಾಮ ಪಂಚಾಯತಿ ಸದಸ್ಯರಾದ ಅಜೀಝ್ ಸತ್ತಿಕಲ್ಲು , ಮತ್ತು ಎನ್ ಎಸ್ ಯು ಐ ರಾಜ್ಯ ಉಪಾಧ್ಯಕ್ಷರು ಫಾರೂಕ್ ಬಾಯಬೆ ಜೊತೆ ಸಂಪರ್ಕದಲ್ಲಿದ್ದುಕೊಂಡು ಇಂದು ಬೆಳಿಗ್ಗೆ ಕ್ಷೇತ್ರದ ಶಾಸಕರು ಅಶೋಕ್ ಕುಮಾರ್ ರೈ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಗೊಂಡರು.
ಅಧ್ಯಕ್ಷ ಸ್ಥಾನಕ್ಕೆ ಹರೀಶ್ (ಸಾಮಾನ್ಯ ) ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಬಿ ಫಾತುಮ್ಮ ( ಸಾಮಾನ್ಯ ಮಹಿಳೆ) ಯವರು ಬಹುಮತದಿಂದ ಆಯ್ಕೆಯಾದರು
ನೆರೆಮನೆಯ ದನಗಳು ತನ್ನ ತೋಟಕ್ಕೆ ಬಂದು ಹಾನಿಗೊಳಿಸಿವೆ ಎಂಬ ಆಕ್ರೋಶದಿಂದ ಹಟ್ಟಿಯಲ್ಲಿ ಕಟ್ಟಿಹಾಕಿದ್ದ ದನಗಳಿಗೆ ಕತ್ತಿಯಿಂದ ಕಡಿದು ಹಲ್ಲೆ ನಡೆಸಿ…
ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ…
ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು ಎಂಬಲ್ಲಿ ನೇತ್ರಾವತಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪ ವ್ಯಕ್ತಪಡಿಸಿ, ಇವರ…
ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…
ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿಯಿಂದ ಹಳೇ ಸೇತುವೆ ಕಡೆಗೆ ಸಾಗುವ ದಾರಿಯ…
ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಜೂಜಾಟ ನಡೆಯುತ್ತಿರುವ…