ಸುರತ್ಕಲ್: ಮೇಲ್ಮನೆ ಸುರತ್ಕಲ್ ವತಿಯಿಂದ ಆಟಿದ ಕೂಟ ಕಾರ್ಯಕ್ರಮ ಶನಿವಾರ ಸಂಜೆ 6.30 ರಿಂದ ನಡೆಯಿತು.
ಮೇಲ್ಮನೆ ಸದಸ್ಯರೆಲ್ಲರೂ ಸೇರಿ ಜತನದಿಂದ ಕಾಪಾಡಿಕೊಂಡು ಬಂದಿರುವ ಪುರಾತನ ಕಾಲದಲ್ಲಿ ಪೂರ್ವಜರು ಉಪಯೋಗಿಸುತ್ತಿದ್ದ ವಸ್ತುಗಳನ್ನು ಜೋಡಿಸಿಕೊಂಡು ಸಾಂಪ್ರದಾಯಿಕ ಶೈಲಿಯಲ್ಲಿ ಸಿಂಗರಿಸಿದ್ದರು.
ಸ್ಥಳೀಯ ಹಿರಿಯರಾದ ಸುಹಾಸಿನಿ, ರತ್ನ, ವಾಸಂತಿ, ಯಮುನಾ, ಸರಸು ಅವರು ಈ ಸಂದರ್ಭದಲ್ಲಿ ಆಟಿ ಆಚರಣೆಯ ಬಗ್ಗೆ ವಿವರಿಸಿದರು. ಅವರನ್ನು ಮೇಲ್ಮನೆಯ ವತಿಯಿಂದ ಶಾಲು ಹೊದೆಸಿ, ಹೂಗುಚ್ಛ ನೀಡಿ ಗೌರವಿಸಿ ಅಭಿನಂದಿಸಲಾಯಿತು.
ಆನಂತರ ಎಲ್ಲರೂ ಸೇರಿ ತಯಾರಿಸಿದ 38 ಬಗೆಯ ಆಟಿ ತಿಂಗಳಲ್ಲಿ ವಿಶೇಷವಾಗಿ ತಯಾರಿಸಲಾಗುವ ತಿನಿಸುಗಳನ್ನು ಸವಿದರು. ಹಿರಿಯರಾದ ಲಕ್ಷ್ಮಿ, ರಾಜೀವಿ, ಯಮುನಾ, ಗೀತಾ ನರೇಂದ್ರ, ಶುಭಾ ಲೋಕೇಶ್, ರೋಹಿಣಿ ವಿಶ್ವನಾಥ್, ವಾರಿಜಾ ಹಾಗೂ ಮತ್ತಿತರರು ಹಾಗೂ ಮಕ್ಕಳು, ಮೊಮ್ಮಕ್ಕಳು ಬಹಳ ಉತ್ಸಾಹದಿಂದ ಪಾಲ್ಗೊಂಡಿದ್ದರು.
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…