ಸುರತ್ಕಲ್: ಮೇಲ್ಮನೆ ಸುರತ್ಕಲ್ ವತಿಯಿಂದ ಆಟಿದ ಕೂಟ ಕಾರ್ಯಕ್ರಮ ಶನಿವಾರ ಸಂಜೆ 6.30 ರಿಂದ ನಡೆಯಿತು.
ಮೇಲ್ಮನೆ ಸದಸ್ಯರೆಲ್ಲರೂ ಸೇರಿ ಜತನದಿಂದ ಕಾಪಾಡಿಕೊಂಡು ಬಂದಿರುವ ಪುರಾತನ ಕಾಲದಲ್ಲಿ ಪೂರ್ವಜರು ಉಪಯೋಗಿಸುತ್ತಿದ್ದ ವಸ್ತುಗಳನ್ನು ಜೋಡಿಸಿಕೊಂಡು ಸಾಂಪ್ರದಾಯಿಕ ಶೈಲಿಯಲ್ಲಿ ಸಿಂಗರಿಸಿದ್ದರು.
ಸ್ಥಳೀಯ ಹಿರಿಯರಾದ ಸುಹಾಸಿನಿ, ರತ್ನ, ವಾಸಂತಿ, ಯಮುನಾ, ಸರಸು ಅವರು ಈ ಸಂದರ್ಭದಲ್ಲಿ ಆಟಿ ಆಚರಣೆಯ ಬಗ್ಗೆ ವಿವರಿಸಿದರು. ಅವರನ್ನು ಮೇಲ್ಮನೆಯ ವತಿಯಿಂದ ಶಾಲು ಹೊದೆಸಿ, ಹೂಗುಚ್ಛ ನೀಡಿ ಗೌರವಿಸಿ ಅಭಿನಂದಿಸಲಾಯಿತು.
ಆನಂತರ ಎಲ್ಲರೂ ಸೇರಿ ತಯಾರಿಸಿದ 38 ಬಗೆಯ ಆಟಿ ತಿಂಗಳಲ್ಲಿ ವಿಶೇಷವಾಗಿ ತಯಾರಿಸಲಾಗುವ ತಿನಿಸುಗಳನ್ನು ಸವಿದರು. ಹಿರಿಯರಾದ ಲಕ್ಷ್ಮಿ, ರಾಜೀವಿ, ಯಮುನಾ, ಗೀತಾ ನರೇಂದ್ರ, ಶುಭಾ ಲೋಕೇಶ್, ರೋಹಿಣಿ ವಿಶ್ವನಾಥ್, ವಾರಿಜಾ ಹಾಗೂ ಮತ್ತಿತರರು ಹಾಗೂ ಮಕ್ಕಳು, ಮೊಮ್ಮಕ್ಕಳು ಬಹಳ ಉತ್ಸಾಹದಿಂದ ಪಾಲ್ಗೊಂಡಿದ್ದರು.
ತುಳುನಾಡಿನ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ಕಯ್ಯಾರ ಕಿಞ್ಞಣ್ಣ ರೈ ಅವರ ಕೊಡುಗೆ ಅಪಾರವಾಗಿದ್ದು, ಅವರನ್ನು ಈ ನಾಡಿನ…
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕಾರಣಗಿರಿ ಗ್ರಾಮ ಭಾರತಿ ಟ್ರಸ್ಟ್ ಹಾಗೂ ಕಲಾದರ್ಶನ ಮಾಸಪತ್ರಿಕೆ ಆಶ್ರಯದಲ್ಲಿ ಪ್ರಥಮ ಸುದ್ದಿ ವಾಹಕ…
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…