ಇತರೆ

ಬಡಜನರ ಸೇವೆಯಲ್ಲಿ ಭಗವಂತನನ್ನು ಕಾಣಬೇಕು – ಶೇಖರ್ ಕೆ. ಕರ್ಕೇರ

ಮುಲ್ಕಿ: ಸ್ವರ್ಣ ಸೌಹಾರ್ದ ಸಹಕಾರಿ ಸಂಘ ನಿಯಮಿತ ಮತ್ತು ಘಾಟ್ಗೆ ಕರ್ಕೇರ ಪವರ್ ಇಂಡಸ್ಟ್ರೀಸ್ ಮತ್ತು
ಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘ (ರಿ) ಕೆ. ಎಸ್ ರಾವ್ ನಗರ ಇವರ ಜಂಟಿ ಆಶ್ರಯದಲ್ಲಿ ಎ. ಜೆ ವೈದ್ಯಕೀಯ ಮಹಾವಿದ್ಯಾಲಯ ಆಸ್ಪತ್ರೆ ಮಂಗಳೂರು ಇವರ ಸಹಯೋಗದಲ್ಲಿ ಉಚಿತ ಆರೋಗ್ಯ ತಪಾಸಣೆ ಮತ್ತು ದಂತ ಚಿಕಿತ್ಸಾ ಶಿಬಿರವನ್ನು ಆದಿತ್ಯವಾರದಂದು ನೆರವೇರಿಸಲಾಯ್ತು.

ಶಿಬಿರದಲ್ಲಿ ಸಾಮಾನ್ಯ ಆರೋಗ್ಯ ತಪಾಸಣೆ (ಜನರಲ್ ಚಿಕಿತ್ಸೆ), ಕಿವಿ ಮೂಗು ಮತ್ತು ಗಂಟಲು (ENT) ತಪಾಸಣೆ, ಚರ್ಮರೋಗ ತಪಾಸಣೆ,ಕಣ್ಣಿನ ತಪಾಸಣೆ, ಮಧುಮೇಹ ರಕ್ತದ ಒತ್ತಡ ತಪಾಸಣೆ, ಹೃದಯ ಸಂಬಂಧಿ ರೋಗ ತಪಾಸಣೆ (ECG) ಗಳನ್ನು ನೆರವೇರಿಸಲಾಯಿತು.
ವೈದ್ಯಕೀಯ ಶಿಬಿರದ ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸ್ವರ್ಣ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ಅಧ್ಯಕ್ಷರಾದ ಶ್ರೀ ಶೇಖರ್ ಕೆ ಕರ್ಕೇರರವರು ವಹಿಸಿ ತಮ್ಮ ಅಧ್ಯಕ್ಷೀಯ ಮಾತಿನಲ್ಲಿ ಬಡಜನರ ಕಷ್ಟ ಸುಖಗಳಿಗೆ ಸ್ಪಂದಿಸುತ್ತಾ ಬಡಜನರ ಸೇವೆ ನಿರಂತರವಾಗಿ ನಡೆಯುತ್ತಿರಬೇಕು. ಅವರಿಗೆ ನೀಡುವ ಸೇವೆಯಲ್ಲಿ ನಾವು ಭಗವಂತನನ್ನು ಕಾಣಬೇಕು ಎಂಬ ಅಭಿಪ್ರಾಯವನ್ನು ವ್ಯಕ್ತಪಡಿಸಿದರು.

ಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘ (ರಿ) ಕೆ ಎಸ್ ರಾವ್ ನಗರ ಇಲ್ಲಿನ ಗೌರವಾಧ್ಯಕ್ಷರಾದ ಶ್ರೀ ರಾಘವ ಎ. ಸುವರ್ಣರವರು ದೀಪ ಪ್ರಜ್ವಲನೆ ಮಾಡಿ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿದರು. ಗ್ರಾಮೀಣ ಭಾಗದಲ್ಲಿ ಜನರಿಗೆ ಸೇವೆಯನ್ನು ನೀಡುತ್ತಿರುವ ಸ್ವರ್ಣ ಸೌಹಾರ್ದ ಸಹಕಾರಿ ಸಂಘದ ಕೆಲಸ ಕಾರ್ಯಗಳಿಗೆ ಅಭಿನಂದನೆಯನ್ನು ಸೂಚಿಸಿದರು. ಕಲಿಯುವಿಕೆಯಲ್ಲಿ ಉತ್ತಮ ಸಾಧನೆಯನ್ನು ತೋರಿರುವ ಐದು ಜನ ವಿದ್ಯಾರ್ಥಿಗಳಿಗೆ ಸ್ಕಾಲರ್ ಶಿಪ್ ನ ಚೆಕ್ಕುಗಳನ್ನು ಹಸ್ತಾಂತರಿಸಲಾಯಿತು.
ಎ.ಜೆ ಆಸ್ಪತ್ರೆಯ ವೈದ್ಯಕೀಯ ತಂಡದ ಶ್ರೀ ರಾಜೇಶ್ ರವರನ್ನು ಸ್ಮರಣಿಕೆ ನೀಡಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘ (ರಿ) ಕೆ ಎಸ್ ರಾವ್ ನಗರ ಇಲ್ಲಿನ ಅಧ್ಯಕ್ಷರಾದ ಶ್ರೀ ಮಹಾಬಲ ಎನ್. ಸನಿಲ್ ಮತ್ತು ಮಹಿಳಾ ಅಧ್ಯಕ್ಷರಾದ ಶ್ರೀಮತಿ ಚಂದ್ರಾಕ್ಷಿ ಎಸ್. ಸಾಲ್ಯಾನ್ ಮತ್ತು ಎಜೆ ಆಸ್ಪತ್ರೆ ಮಂಗಳೂರು ಇಲ್ಲಿನ ಮೆಡಿಸಿನ್ ವಿಭಾಗದ ಮುಖ್ಯಸ್ಥೆಯಾದ ಡಾ. ಹೀರಲ್ ರವರು ಉಪಸ್ಥಿತರಿದ್ದರು.

ಈ ಶಿಬಿರದಲ್ಲಿ ಒಟ್ಟು 156 ಶಿಬಿರಾರ್ಥಿಗಳು ಪ್ರಯೋಜನವನ್ನು ಪಡೆದುಕೊಂಡರು.
ಕಾರ್ಯಕ್ರಮವನ್ನು ಶ್ರೀ ಹರಿಶ್ಚಂದ್ರ ಎಸ್. ಕೋಟ್ಯಾನ್ ರವರು ಸ್ವಾಗತಿಸಿ ಶ್ರೀಮತಿ ಚಂದ್ರಿಕಾ ಅಂಚನ್ ಮತ್ತು ಶ್ರೀಮತಿ ರಂಜಿತಾ ಹರಿಶ್ಚಂದ್ರ ಎಸ್. ಕೋಟ್ಯಾನ್ ರವರು ಪ್ರಾರ್ಥನೆಯನ್ನು ನೆರವೇರಿಸಿದರು, ಶ್ರೀಮತಿ ಚಂದ್ರಿಕಾ ಅಂಚನ್ ರವರು ಧನ್ಯವಾದವನ್ನು ಸಮರ್ಪಿಸಿದರು. ಸ್ವರ್ಣ ಸೌಹಾರ್ದ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀ ಭಾಸ್ಕರ್ ಅಮೀನ್ ತೋಕೂರು ಕಾರ್ಯಕ್ರಮವನ್ನು ನಿರೂಪಿಸಿದರು.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಆಂಧ್ರಪದೇಶದಲ್ಲಿ ಫ್ಲೋರ್ ಮಾಸ್ಟರ್ಸ್ ಮೊದಲ ಫ್ಲಾಟ್ ಬ್ರೆಡ್ ಸ್ಥಾವರ; ರೂ. 100 ಕೋಟಿ ಹೂಡಿಕೆ, ರಫ್ತು ಆಧಾರಿತ ಉದ್ಯಮ..!

ಯುಎಇ ಮೂಲದ ಟೋರ್ಟಿಲ್ಲಾ ಮತ್ತು ಫ್ಲಾಟ್‌ಬ್ರೆಡ್ ತಯಾರಕರಾದ ಫ್ಲೋರ್ ಮಾಸ್ಟರ್ಸ್, ಆಂಧ್ರಪ್ರದೇಶದಲ್ಲಿ ವಿಶ್ವ ದರ್ಜೆಯ ಸಂಯೋಜಿತ ಫ್ಲಾಟ್‌ಬ್ರೆಡ್ ಉತ್ಪಾದನಾ ಪರಿಸರ…

1 day ago

ಮುಲ್ಕಿ: ಮುಲ್ಕಿ ಬಸ್ ನಿಲ್ದಾಣದ ಬಳಿ ಬಸ್-ಕಾರು ಡಿಕ್ಕಿ; ಮಕ್ಕಳಿದ್ದ ಕಾರು ಅಪಾಯದಿಂದ ಪಾರು

ಕಾರಿಗೆ ಖಾಸಗಿ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಪುಟ್ಟ ಮಕ್ಕಳು ಸಹಿತ ಚಾಲಕ ಅಪಾಯದಿಂದ ಪಾರಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ…

2 days ago

ನ್ಯೂಯಾರ್ಕ್: ಅಮೆರಿಕ-ಇರಾನ್ ಮಿಲಿಟರಿ ವಿರಾಮದ ಪರಿಣಾಮ; ಕಚ್ಚಾ ತೈಲ ಬೆಲೆ ಇಳಿಕೆ, ಹಣದುಬ್ಬರಕ್ಕೂ ಬ್ರೇಕ್?

ಅಮೆರಿಕ ಮತ್ತು ಇರಾನ್ ನಡುವೆ ಪರ್ಷಿಯನ್ ಕೊಲ್ಲಿಯಲ್ಲಿನ ಮಿಲಿಟರಿ ದಾಳಿಗಳು ತಾತ್ಕಾಲಿಕವಾಗಿ ಸ್ಥಗಿತಗೊಂಡ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ…

2 days ago

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…

3 days ago

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ನಗರದ ಲಾಲ್‌ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…

3 days ago

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…

4 days ago