ಇತರೆ

ಬಡಜನರ ಸೇವೆಯಲ್ಲಿ ಭಗವಂತನನ್ನು ಕಾಣಬೇಕು – ಶೇಖರ್ ಕೆ. ಕರ್ಕೇರ

ಮುಲ್ಕಿ: ಸ್ವರ್ಣ ಸೌಹಾರ್ದ ಸಹಕಾರಿ ಸಂಘ ನಿಯಮಿತ ಮತ್ತು ಘಾಟ್ಗೆ ಕರ್ಕೇರ ಪವರ್ ಇಂಡಸ್ಟ್ರೀಸ್ ಮತ್ತು
ಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘ (ರಿ) ಕೆ. ಎಸ್ ರಾವ್ ನಗರ ಇವರ ಜಂಟಿ ಆಶ್ರಯದಲ್ಲಿ ಎ. ಜೆ ವೈದ್ಯಕೀಯ ಮಹಾವಿದ್ಯಾಲಯ ಆಸ್ಪತ್ರೆ ಮಂಗಳೂರು ಇವರ ಸಹಯೋಗದಲ್ಲಿ ಉಚಿತ ಆರೋಗ್ಯ ತಪಾಸಣೆ ಮತ್ತು ದಂತ ಚಿಕಿತ್ಸಾ ಶಿಬಿರವನ್ನು ಆದಿತ್ಯವಾರದಂದು ನೆರವೇರಿಸಲಾಯ್ತು.

ಶಿಬಿರದಲ್ಲಿ ಸಾಮಾನ್ಯ ಆರೋಗ್ಯ ತಪಾಸಣೆ (ಜನರಲ್ ಚಿಕಿತ್ಸೆ), ಕಿವಿ ಮೂಗು ಮತ್ತು ಗಂಟಲು (ENT) ತಪಾಸಣೆ, ಚರ್ಮರೋಗ ತಪಾಸಣೆ,ಕಣ್ಣಿನ ತಪಾಸಣೆ, ಮಧುಮೇಹ ರಕ್ತದ ಒತ್ತಡ ತಪಾಸಣೆ, ಹೃದಯ ಸಂಬಂಧಿ ರೋಗ ತಪಾಸಣೆ (ECG) ಗಳನ್ನು ನೆರವೇರಿಸಲಾಯಿತು.
ವೈದ್ಯಕೀಯ ಶಿಬಿರದ ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸ್ವರ್ಣ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ಅಧ್ಯಕ್ಷರಾದ ಶ್ರೀ ಶೇಖರ್ ಕೆ ಕರ್ಕೇರರವರು ವಹಿಸಿ ತಮ್ಮ ಅಧ್ಯಕ್ಷೀಯ ಮಾತಿನಲ್ಲಿ ಬಡಜನರ ಕಷ್ಟ ಸುಖಗಳಿಗೆ ಸ್ಪಂದಿಸುತ್ತಾ ಬಡಜನರ ಸೇವೆ ನಿರಂತರವಾಗಿ ನಡೆಯುತ್ತಿರಬೇಕು. ಅವರಿಗೆ ನೀಡುವ ಸೇವೆಯಲ್ಲಿ ನಾವು ಭಗವಂತನನ್ನು ಕಾಣಬೇಕು ಎಂಬ ಅಭಿಪ್ರಾಯವನ್ನು ವ್ಯಕ್ತಪಡಿಸಿದರು.

ಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘ (ರಿ) ಕೆ ಎಸ್ ರಾವ್ ನಗರ ಇಲ್ಲಿನ ಗೌರವಾಧ್ಯಕ್ಷರಾದ ಶ್ರೀ ರಾಘವ ಎ. ಸುವರ್ಣರವರು ದೀಪ ಪ್ರಜ್ವಲನೆ ಮಾಡಿ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿದರು. ಗ್ರಾಮೀಣ ಭಾಗದಲ್ಲಿ ಜನರಿಗೆ ಸೇವೆಯನ್ನು ನೀಡುತ್ತಿರುವ ಸ್ವರ್ಣ ಸೌಹಾರ್ದ ಸಹಕಾರಿ ಸಂಘದ ಕೆಲಸ ಕಾರ್ಯಗಳಿಗೆ ಅಭಿನಂದನೆಯನ್ನು ಸೂಚಿಸಿದರು. ಕಲಿಯುವಿಕೆಯಲ್ಲಿ ಉತ್ತಮ ಸಾಧನೆಯನ್ನು ತೋರಿರುವ ಐದು ಜನ ವಿದ್ಯಾರ್ಥಿಗಳಿಗೆ ಸ್ಕಾಲರ್ ಶಿಪ್ ನ ಚೆಕ್ಕುಗಳನ್ನು ಹಸ್ತಾಂತರಿಸಲಾಯಿತು.
ಎ.ಜೆ ಆಸ್ಪತ್ರೆಯ ವೈದ್ಯಕೀಯ ತಂಡದ ಶ್ರೀ ರಾಜೇಶ್ ರವರನ್ನು ಸ್ಮರಣಿಕೆ ನೀಡಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘ (ರಿ) ಕೆ ಎಸ್ ರಾವ್ ನಗರ ಇಲ್ಲಿನ ಅಧ್ಯಕ್ಷರಾದ ಶ್ರೀ ಮಹಾಬಲ ಎನ್. ಸನಿಲ್ ಮತ್ತು ಮಹಿಳಾ ಅಧ್ಯಕ್ಷರಾದ ಶ್ರೀಮತಿ ಚಂದ್ರಾಕ್ಷಿ ಎಸ್. ಸಾಲ್ಯಾನ್ ಮತ್ತು ಎಜೆ ಆಸ್ಪತ್ರೆ ಮಂಗಳೂರು ಇಲ್ಲಿನ ಮೆಡಿಸಿನ್ ವಿಭಾಗದ ಮುಖ್ಯಸ್ಥೆಯಾದ ಡಾ. ಹೀರಲ್ ರವರು ಉಪಸ್ಥಿತರಿದ್ದರು.

ಈ ಶಿಬಿರದಲ್ಲಿ ಒಟ್ಟು 156 ಶಿಬಿರಾರ್ಥಿಗಳು ಪ್ರಯೋಜನವನ್ನು ಪಡೆದುಕೊಂಡರು.
ಕಾರ್ಯಕ್ರಮವನ್ನು ಶ್ರೀ ಹರಿಶ್ಚಂದ್ರ ಎಸ್. ಕೋಟ್ಯಾನ್ ರವರು ಸ್ವಾಗತಿಸಿ ಶ್ರೀಮತಿ ಚಂದ್ರಿಕಾ ಅಂಚನ್ ಮತ್ತು ಶ್ರೀಮತಿ ರಂಜಿತಾ ಹರಿಶ್ಚಂದ್ರ ಎಸ್. ಕೋಟ್ಯಾನ್ ರವರು ಪ್ರಾರ್ಥನೆಯನ್ನು ನೆರವೇರಿಸಿದರು, ಶ್ರೀಮತಿ ಚಂದ್ರಿಕಾ ಅಂಚನ್ ರವರು ಧನ್ಯವಾದವನ್ನು ಸಮರ್ಪಿಸಿದರು. ಸ್ವರ್ಣ ಸೌಹಾರ್ದ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀ ಭಾಸ್ಕರ್ ಅಮೀನ್ ತೋಕೂರು ಕಾರ್ಯಕ್ರಮವನ್ನು ನಿರೂಪಿಸಿದರು.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್‌ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…

24 mins ago

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿಯಿಂದ ಹಳೇ ಸೇತುವೆ ಕಡೆಗೆ ಸಾಗುವ ದಾರಿಯ…

32 mins ago

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಜೂಜಾಟ ನಡೆಯುತ್ತಿರುವ…

20 hours ago

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಮಚ್ಚಿನ ಗ್ರಾಮ ಪಾಳ್ಯರ ಎಂಬಲ್ಲಿ ಪಿಕಪ್ ವಾಹನ ಹಾಗೂ ಸ್ಕೂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸವಾರರಿಬ್ಬರು ಚಿಕಿತ್ಸೆ…

20 hours ago

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ, ದೇಶಾದ್ಯಂತ ಗೋಹತ್ಯೆ ಹಾಗೂ ಗೋಮಾಂಸ ರಫ್ತನ್ನು ಸಂಪೂರ್ಣವಾಗಿ ನಿಷೇಧಿಸುವ ಕಾನೂನು ಜಾರಿಗೊಳಿಸಬೇಕು ಎಂದು ಮುಸ್ಲಿಂ…

21 hours ago

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

ಕಂಟೇನರ್ ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಕೋಟೇಶ್ವರ ಹಾಲಾಡಿ…

21 hours ago