ಮೂಡುಬಿದಿರೆ: ಕಿನ್ನಿಗೋಳಿ – ಮೂಡುಬಿದಿರೆ ರಾಜ್ಯ ಹೆದ್ದಾರಿಯ ಮೂರುಕಾವೇರಿಯಲ್ಲಿ ಟಿಪ್ಪರ್ಗೆ ಕಾರು ಢಿಕ್ಕಿ ಹೊಡೆದಿದೆ. ಇದರ ಪರಿಣಾಮ ಕಾರಿನಲ್ಲಿದ್ದ ಆರು ಮಂದಿಯಲ್ಲಿ ಓರ್ವರು ಮೃತಪಟ್ಟ ಘಟನೆ ನಿನ್ನೆ ಸಂಭವಿಸಿದೆ. ಬೆಳುವಾಯಿ ನಿವಾಸಿ ರಾಮಣ್ಣ (49) ಮೃತರು. ಕಾರಿನಲ್ಲಿ ರಾಮಣ್ಣ ಅವರ ಜತೆ ವಸಂತ, ಪ್ರವೀಣ್, ದಿನೇಶ್, ಆನಂದ, ಸಂಜೀವ ಅವರು ಇದ್ದರು. ಕಾರಿನಲ್ಲಿದ್ದವರ ಪೈಕಿ ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ನಾಲ್ವರು ಅಲ್ಪಸ್ವಲ್ಪ ಗಾಯಗಳಿಂದ ಪಾರಾಗಿದ್ದಾರೆ.
ಐಕಳ ಕಡೆಯಿಂದ ಮೂಲ್ಕಿ ಕಡೆ ಸಂಚರಿಸುತ್ತಿದ್ದ ಟಿಪ್ಪರ್ಗೆ, ಮೂಲ್ಕಿಯಿಂದ ಬೆಳುವಾಯಿ ಕಡೆಗೆ ಸಂಚರಿಸುತ್ತಿದ್ದ ಕಾರು ಮೂರುಕಾವೇರಿ ಸಮೀಪದಲ್ಲಿ ಢಿಕ್ಕಿ ಹೊಡೆದಿತ್ತು. ಕಾರು ಸಂಚರಿಸುವ ಸಂದರ್ಭ ರಸ್ತೆಯ ಅಂಚಿನಿಂದ ಕೆಳಗೆ ಇಳಿದಿದ್ದು, ಅಂಚಿನಿಂದ ಮೇಲೆ ಬರುವ ಸಂದರ್ಭ ಚಾಲಕನ ನಿಯಂತ್ರಣ ತಪ್ಪಿ, ಮುಂಭಾಗದಿಂದ ಬರುತ್ತಿದ್ದ ಟಿಪ್ಪರ್ಗೆ ಢಿಕ್ಕಿ ಹೊಡೆದಿದೆ. ಕಾರು ಸಂಪೂರ್ಣವಾಗಿ ಬಲ ಬದಿಗೆ ಸರಿದಿದ್ದು, ಅಪಘಾತ ತಪ್ಪಿಸಲು ಟಿಪ್ಪರ್ ಎಡಭಾಗಕ್ಕೆ ಸಂಚರಿಸಿದರೂ ಅಪಘಾತ ತಡೆಯಲು ಸಾಧ್ಯವಾಗಿಲ್ಲ.
ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಟಿಪ್ಪರಿಗೂ ಹಾನಿಯಾಗಿದೆ. ಮೃತ ರಾಮಣ್ಣಮತ್ತು ಐವರು ಮೂಲ್ಕಿ ಕಾರ್ನಾಡಿನಲ್ಲಿ ಕೆಲಸ ಮುಗಿಸಿ ಸಂಜೆ ತಮ್ಮ ಮನೆ ಬೆಳವಾಯಿಗೆ ವಾಪಸಾಗುವ ಸಂದರ್ಭ ಅಪಘಾತ ಸಂಭವಿಸಿದೆ.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…