ಮೂಡುಬಿದಿರೆ: ಕಿನ್ನಿಗೋಳಿ – ಮೂಡುಬಿದಿರೆ ರಾಜ್ಯ ಹೆದ್ದಾರಿಯ ಮೂರುಕಾವೇರಿಯಲ್ಲಿ ಟಿಪ್ಪರ್ಗೆ ಕಾರು ಢಿಕ್ಕಿ ಹೊಡೆದಿದೆ. ಇದರ ಪರಿಣಾಮ ಕಾರಿನಲ್ಲಿದ್ದ ಆರು ಮಂದಿಯಲ್ಲಿ ಓರ್ವರು ಮೃತಪಟ್ಟ ಘಟನೆ ನಿನ್ನೆ ಸಂಭವಿಸಿದೆ. ಬೆಳುವಾಯಿ ನಿವಾಸಿ ರಾಮಣ್ಣ (49) ಮೃತರು. ಕಾರಿನಲ್ಲಿ ರಾಮಣ್ಣ ಅವರ ಜತೆ ವಸಂತ, ಪ್ರವೀಣ್, ದಿನೇಶ್, ಆನಂದ, ಸಂಜೀವ ಅವರು ಇದ್ದರು. ಕಾರಿನಲ್ಲಿದ್ದವರ ಪೈಕಿ ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ನಾಲ್ವರು ಅಲ್ಪಸ್ವಲ್ಪ ಗಾಯಗಳಿಂದ ಪಾರಾಗಿದ್ದಾರೆ.
ಐಕಳ ಕಡೆಯಿಂದ ಮೂಲ್ಕಿ ಕಡೆ ಸಂಚರಿಸುತ್ತಿದ್ದ ಟಿಪ್ಪರ್ಗೆ, ಮೂಲ್ಕಿಯಿಂದ ಬೆಳುವಾಯಿ ಕಡೆಗೆ ಸಂಚರಿಸುತ್ತಿದ್ದ ಕಾರು ಮೂರುಕಾವೇರಿ ಸಮೀಪದಲ್ಲಿ ಢಿಕ್ಕಿ ಹೊಡೆದಿತ್ತು. ಕಾರು ಸಂಚರಿಸುವ ಸಂದರ್ಭ ರಸ್ತೆಯ ಅಂಚಿನಿಂದ ಕೆಳಗೆ ಇಳಿದಿದ್ದು, ಅಂಚಿನಿಂದ ಮೇಲೆ ಬರುವ ಸಂದರ್ಭ ಚಾಲಕನ ನಿಯಂತ್ರಣ ತಪ್ಪಿ, ಮುಂಭಾಗದಿಂದ ಬರುತ್ತಿದ್ದ ಟಿಪ್ಪರ್ಗೆ ಢಿಕ್ಕಿ ಹೊಡೆದಿದೆ. ಕಾರು ಸಂಪೂರ್ಣವಾಗಿ ಬಲ ಬದಿಗೆ ಸರಿದಿದ್ದು, ಅಪಘಾತ ತಪ್ಪಿಸಲು ಟಿಪ್ಪರ್ ಎಡಭಾಗಕ್ಕೆ ಸಂಚರಿಸಿದರೂ ಅಪಘಾತ ತಡೆಯಲು ಸಾಧ್ಯವಾಗಿಲ್ಲ.
ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಟಿಪ್ಪರಿಗೂ ಹಾನಿಯಾಗಿದೆ. ಮೃತ ರಾಮಣ್ಣಮತ್ತು ಐವರು ಮೂಲ್ಕಿ ಕಾರ್ನಾಡಿನಲ್ಲಿ ಕೆಲಸ ಮುಗಿಸಿ ಸಂಜೆ ತಮ್ಮ ಮನೆ ಬೆಳವಾಯಿಗೆ ವಾಪಸಾಗುವ ಸಂದರ್ಭ ಅಪಘಾತ ಸಂಭವಿಸಿದೆ.
ಬಿಸಿಯೂಟದ ಸಿಬ್ಬಂದಿಯೊಬ್ಬರ ಕೈ ವಿದ್ಯುತ್ ಚಾಲಿತ ತುರಿಮಣೆಯಲ್ಲಿ ಸಿಲುಕಿಕೊಂಡ ಸಂದರ್ಭದಲ್ಲಿ ಸಮಯಪ್ರಜ್ಞೆ ಮೆರೆದ ನರಿಕೊಂಬು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ…
ನಗರದ ಕೆಪಿಟಿ ಸಿಗ್ನಲ್ ಸಮೀಪ ರಸ್ತೆಯ ಮಧ್ಯಭಾಗದಲ್ಲೇ ಭಾರೀ ಗುಂಡಿಯೊಂದು ನಿರ್ಮಾಣವಾಗಿದ್ದು, ವಾಹನ ಸವಾರರಿಗೆ ಅಪಾಯ ಎದುರಾಗಿದೆ. ಈ ಮಾರ್ಗದಲ್ಲಿ…
ಆಟಿ ಅಮಾವಾಸ್ಯೆಯ ಪವಿತ್ರ ದಿನದಂದು ಬಂಟ್ವಾಳ ತಾಲೂಕಿನ ಐತಿಹಾಸಿಕ ಹಾಗೂ ಪೌರಾಣಿಕ ಪ್ರಸಿದ್ಧಿಯ ನರಹರಿ ಪರ್ವತ ಶ್ರೀ ಸದಾಶಿವ ದೇವಸ್ಥಾನದಲ್ಲಿ…
ತುಳುಕೂಟ ಬಂಟ್ವಾಳ ಹಾಗೂ ಶ್ರೀ ರಕ್ತೇಶ್ವರಿ ದೇವಿ ದೇವಸ್ಥಾನ, ಬಿ.ಸಿ.ರೋಡು ಇದರ ಆಡಳಿತ ಮಂಡಳಿಯ ಆಶ್ರಯದಲ್ಲಿ ವರ್ಷಂಪ್ರತಿ ನಡೆಯುವ ಆಟಿ…
ಲೋಕಾಯುಕ್ತದಲ್ಲಿ ದಾಖಲಾಗಿರುವ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಮೇಲಾಧಿಕಾರಿಗಳ ನಿರ್ದೇಶನದ ಮೇರೆಗೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ತಾಲೂಕು ಕಚೇರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು…
ಆಟಿ ಅಮಾವಾಸ್ಯೆಯ ಪ್ರಯುಕ್ತ ತಾಲೂಕಿನ ಪ್ರಸಿದ್ಧ ಕಾರಿಂಜ ಶ್ರೀ ಕಾರಿಂಜೇಶ್ವರ ದೇವಸ್ಥಾನದಲ್ಲಿ ಬುಧವಾರ ಶ್ರದ್ಧಾಭಕ್ತಿ ಹಾಗೂ ಸಂಭ್ರಮದಿಂದ ವಿವಿಧ ಧಾರ್ಮಿಕ…