ಮೂಡುಬಿದಿರೆ: ಕಿನ್ನಿಗೋಳಿ – ಮೂಡುಬಿದಿರೆ ರಾಜ್ಯ ಹೆದ್ದಾರಿಯ ಮೂರುಕಾವೇರಿಯಲ್ಲಿ ಟಿಪ್ಪರ್ಗೆ ಕಾರು ಢಿಕ್ಕಿ ಹೊಡೆದಿದೆ. ಇದರ ಪರಿಣಾಮ ಕಾರಿನಲ್ಲಿದ್ದ ಆರು ಮಂದಿಯಲ್ಲಿ ಓರ್ವರು ಮೃತಪಟ್ಟ ಘಟನೆ ನಿನ್ನೆ ಸಂಭವಿಸಿದೆ. ಬೆಳುವಾಯಿ ನಿವಾಸಿ ರಾಮಣ್ಣ (49) ಮೃತರು. ಕಾರಿನಲ್ಲಿ ರಾಮಣ್ಣ ಅವರ ಜತೆ ವಸಂತ, ಪ್ರವೀಣ್, ದಿನೇಶ್, ಆನಂದ, ಸಂಜೀವ ಅವರು ಇದ್ದರು. ಕಾರಿನಲ್ಲಿದ್ದವರ ಪೈಕಿ ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ನಾಲ್ವರು ಅಲ್ಪಸ್ವಲ್ಪ ಗಾಯಗಳಿಂದ ಪಾರಾಗಿದ್ದಾರೆ.
ಐಕಳ ಕಡೆಯಿಂದ ಮೂಲ್ಕಿ ಕಡೆ ಸಂಚರಿಸುತ್ತಿದ್ದ ಟಿಪ್ಪರ್ಗೆ, ಮೂಲ್ಕಿಯಿಂದ ಬೆಳುವಾಯಿ ಕಡೆಗೆ ಸಂಚರಿಸುತ್ತಿದ್ದ ಕಾರು ಮೂರುಕಾವೇರಿ ಸಮೀಪದಲ್ಲಿ ಢಿಕ್ಕಿ ಹೊಡೆದಿತ್ತು. ಕಾರು ಸಂಚರಿಸುವ ಸಂದರ್ಭ ರಸ್ತೆಯ ಅಂಚಿನಿಂದ ಕೆಳಗೆ ಇಳಿದಿದ್ದು, ಅಂಚಿನಿಂದ ಮೇಲೆ ಬರುವ ಸಂದರ್ಭ ಚಾಲಕನ ನಿಯಂತ್ರಣ ತಪ್ಪಿ, ಮುಂಭಾಗದಿಂದ ಬರುತ್ತಿದ್ದ ಟಿಪ್ಪರ್ಗೆ ಢಿಕ್ಕಿ ಹೊಡೆದಿದೆ. ಕಾರು ಸಂಪೂರ್ಣವಾಗಿ ಬಲ ಬದಿಗೆ ಸರಿದಿದ್ದು, ಅಪಘಾತ ತಪ್ಪಿಸಲು ಟಿಪ್ಪರ್ ಎಡಭಾಗಕ್ಕೆ ಸಂಚರಿಸಿದರೂ ಅಪಘಾತ ತಡೆಯಲು ಸಾಧ್ಯವಾಗಿಲ್ಲ.
ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಟಿಪ್ಪರಿಗೂ ಹಾನಿಯಾಗಿದೆ. ಮೃತ ರಾಮಣ್ಣಮತ್ತು ಐವರು ಮೂಲ್ಕಿ ಕಾರ್ನಾಡಿನಲ್ಲಿ ಕೆಲಸ ಮುಗಿಸಿ ಸಂಜೆ ತಮ್ಮ ಮನೆ ಬೆಳವಾಯಿಗೆ ವಾಪಸಾಗುವ ಸಂದರ್ಭ ಅಪಘಾತ ಸಂಭವಿಸಿದೆ.
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿ ದೇವಿ ಮೂಕಾಂಬಿಕಾ…
ಮಳೆಗಾಲ ಆರಂಭವಾಗುತ್ತಿದ್ದಂತೆ ಸೇತುವೆಯೊಂದು ಕುಸಿದು ಬಿದ್ದ ಪರಿಣಾಮ ಹಲವು ಗ್ರಾಮಗಳ ಸಂಪರ್ಕದ ಕೊಂಡಿ ಕಳಚಿ ಬಿದ್ದು, ಜನರು ದ್ವೀಪದಂತೆ, ಹಳ್ಳಿಯೊಳಗೆ…
ಜ್ವರದಿಂದ ಬಳಲುತ್ತಿದ್ದ ಬಾಲಕಿಯೊರ್ವಳು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ಬಂಟ್ವಾಳ ತಾಲೂಕಿನ ಅಲ್ಲಿಪಾದೆ ಎಂಬಲ್ಲಿ ನಡೆದಿದೆ. ಅಲ್ಲಿಪಾದೆ ಅನೇಜ…
ಬಿಸಿರೋಡಿನ ಪ್ರಸಿದ್ದ ಕ್ಯಾಂಟೀನ್ ಒಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಸ್ವಲ್ಪದರಲ್ಲಿ ದೊಡ್ಡ ದುರಂತವೊಂದು ತಪ್ಪಿದೆ. ಬಿಸಿರೋಡಿನ ಮಿನಿ ವಿಧಾನ ಸೌಧದ…
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…