ಕರಾವಳಿ

ಮೂಡುಬಿದಿರೆಯ ಅಮರಶ್ರೀ ಟಾಕೀಸ್ ಗೆ ಬೀಗ!!

ಸಿನಿಮಾ ಪ್ರದರ್ಶನ ಪರವಾನಗಿ ನವೀಕರಣಗೊಳಿಸದ ಕಾರಣ ಅಮರಶ್ರೀ ಟಾಕೀಸ್ ಸೀಲ್‌ಡೌನ್ ಮಾಡಲಾಗಿದೆ.

ಮೂಡುಬಿದಿರೆ: ಸಿನಿಮಾ ಪ್ರದರ್ಶನ ಪರವಾನಗಿ ನವೀಕರಣಗೊಳಿಸದ ಕಾರಣ ಅಮರಶ್ರೀ ಚಿತ್ರಮಂದಿರವನ್ನು ಗುರುವಾರ ಸಂಜೆ ಕಂದಾಯ ಅಧಿಕಾರಿಗಳು ಪೊಲೀಸ್ ಇಲಾಖೆಯ ಸಹಯೋಗದಲ್ಲಿ ಸೀಲ್ ಡೌನ್ ಮಾಡಿದ್ದಾರೆ.

ದ.ಕ.ಜಿಲ್ಲಾಧಿಕಾರಿಯವರ ಆದೇಶದ ಮೇರೆಗೆ ಈ ಬೆಳವಣಿಗೆಗಳು ನಡೆದಿವೆ. ಜನವರಿ 2021 ಕ್ಕೆ ಪರವಾನಗಿ ಅವಧಿ ಮುಕ್ತಾಯಗೊಂಡಿದ್ದು, ಆ ಬಳಿಕವೂ ಕಳೆದ 18 ತಿಂಗಳಿಂದ ಟಾಕೀಸ್ ಕಾರ್ಯನಿರ್ವಹಿಸಿತ್ತು. ಕಳೆದ ನಾಲ್ಕು ದಶಕಗಳಿಂದ ಸದಭಿರುಚಿಯ ಸಿನಿಮಾ ಪ್ರದರ್ಶನದ ಮೂಲಕ ಗಮನ ಸೆಳೆದಿದ್ದ ಮೂಡುಬಿದಿರೆಯ ಈಗಿನ ಏಕೈಕ ಸಿನಿಮಾ ಟಾಕೀಸ್ ಇದೀಗ ಚಟುವಟಿಕೆ ಸ್ಥಗಿತಗೊಳಿಸುವಂತಾಗಿದೆ.

ಕಳೆದ 10 ವರ್ಷಗಳಿಂದ ಗುತ್ತಿಗೆದಾರರು ಈ ಸಿನಿಮಾ ಟಾಕೀಸ್ ನಡೆಸುತ್ತಿದ್ದು, ಸಕಾಲದಲ್ಲಿ ಅಗತ್ಯ ದಾಖಲೆಪತ್ರ ನವೀಕರಣಗೊಂಡಿಲ್ಲ. ಈ ಮಧ್ಯೆ ಟಾಕೀಸ್ ಮಾಲಕರು ಶಿಥಿಲವಾಗಿದ್ದ ಟಾಕೀಸ್ ಮೇಲ್ಬಾವಣಿ ಸಹಿತ ಮೂಲ ಸೌಕರ್ಯಗಳ ಅಭಿವೃದ್ಧಿಗೆ ಮುಂದಾಗಿದ್ದರು ಎನ್ನಲಾಗಿದೆ. ನವೀಕರಣ ಸಂಬಂಧಿ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಮತ್ತೆ ಟಾಕೀಸ್ ಕಾರ್ಯಾಚರಿಸುವ ನಿರೀಕ್ಷೆಯಿದೆ ಎಂದು ವರದಿಯಾಗಿದೆ.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…

2 days ago

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.  …

3 days ago

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

  ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…

3 days ago

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…

5 days ago

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…

6 days ago