ಕರಾವಳಿ

ಮೂಡುಬಿದಿರೆಯ ಅಮರಶ್ರೀ ಟಾಕೀಸ್ ಗೆ ಬೀಗ!!

ಸಿನಿಮಾ ಪ್ರದರ್ಶನ ಪರವಾನಗಿ ನವೀಕರಣಗೊಳಿಸದ ಕಾರಣ ಅಮರಶ್ರೀ ಟಾಕೀಸ್ ಸೀಲ್‌ಡೌನ್ ಮಾಡಲಾಗಿದೆ.

ಮೂಡುಬಿದಿರೆ: ಸಿನಿಮಾ ಪ್ರದರ್ಶನ ಪರವಾನಗಿ ನವೀಕರಣಗೊಳಿಸದ ಕಾರಣ ಅಮರಶ್ರೀ ಚಿತ್ರಮಂದಿರವನ್ನು ಗುರುವಾರ ಸಂಜೆ ಕಂದಾಯ ಅಧಿಕಾರಿಗಳು ಪೊಲೀಸ್ ಇಲಾಖೆಯ ಸಹಯೋಗದಲ್ಲಿ ಸೀಲ್ ಡೌನ್ ಮಾಡಿದ್ದಾರೆ.

ದ.ಕ.ಜಿಲ್ಲಾಧಿಕಾರಿಯವರ ಆದೇಶದ ಮೇರೆಗೆ ಈ ಬೆಳವಣಿಗೆಗಳು ನಡೆದಿವೆ. ಜನವರಿ 2021 ಕ್ಕೆ ಪರವಾನಗಿ ಅವಧಿ ಮುಕ್ತಾಯಗೊಂಡಿದ್ದು, ಆ ಬಳಿಕವೂ ಕಳೆದ 18 ತಿಂಗಳಿಂದ ಟಾಕೀಸ್ ಕಾರ್ಯನಿರ್ವಹಿಸಿತ್ತು. ಕಳೆದ ನಾಲ್ಕು ದಶಕಗಳಿಂದ ಸದಭಿರುಚಿಯ ಸಿನಿಮಾ ಪ್ರದರ್ಶನದ ಮೂಲಕ ಗಮನ ಸೆಳೆದಿದ್ದ ಮೂಡುಬಿದಿರೆಯ ಈಗಿನ ಏಕೈಕ ಸಿನಿಮಾ ಟಾಕೀಸ್ ಇದೀಗ ಚಟುವಟಿಕೆ ಸ್ಥಗಿತಗೊಳಿಸುವಂತಾಗಿದೆ.

ಕಳೆದ 10 ವರ್ಷಗಳಿಂದ ಗುತ್ತಿಗೆದಾರರು ಈ ಸಿನಿಮಾ ಟಾಕೀಸ್ ನಡೆಸುತ್ತಿದ್ದು, ಸಕಾಲದಲ್ಲಿ ಅಗತ್ಯ ದಾಖಲೆಪತ್ರ ನವೀಕರಣಗೊಂಡಿಲ್ಲ. ಈ ಮಧ್ಯೆ ಟಾಕೀಸ್ ಮಾಲಕರು ಶಿಥಿಲವಾಗಿದ್ದ ಟಾಕೀಸ್ ಮೇಲ್ಬಾವಣಿ ಸಹಿತ ಮೂಲ ಸೌಕರ್ಯಗಳ ಅಭಿವೃದ್ಧಿಗೆ ಮುಂದಾಗಿದ್ದರು ಎನ್ನಲಾಗಿದೆ. ನವೀಕರಣ ಸಂಬಂಧಿ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಮತ್ತೆ ಟಾಕೀಸ್ ಕಾರ್ಯಾಚರಿಸುವ ನಿರೀಕ್ಷೆಯಿದೆ ಎಂದು ವರದಿಯಾಗಿದೆ.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…

7 hours ago

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…

7 hours ago

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಕಡಬ ತಾಲೂಕು ಕೊಯಿಲ ಮತ್ತು ರಾಮಕುಂಜ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕ ರಸ್ತೆಯುದ್ದಕ್ಕೂ ಉಂಟಾಗಿರುವ ಹೊಂಡಗಳಿಗೆ ಸ್ಥಳಿಯರು ಶ್ರಮ…

7 hours ago

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ರಾಷ್ಟ್ರೀಯ ಹೆದ್ದಾರಿಯ ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದಲ್ಲಿ ಸರ್ವೀಸ್ ರಸ್ತೆ ಹೊಂಡಗುಂಡಿಗಳಿಂದ ತುಂಬಿ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ ಎಂದು ಸ್ಥಳೀಯರು…

7 hours ago

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಾದಕ ದ್ರವ್ಯ ಸಾಗಾಟ ಹಾಗೂ ಮಾರಾಟ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪದಡಿ ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯ 80 ಬಡಗಬೆಟ್ಟು ಗ್ರಾಮದ…

2 days ago

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಮಂಗಳೂರು ನಗರದ ಪದವು ಗ್ರಾಮದ ಜೋಡುಕಟ್ಟೆ ಮರೋಳಿ ಹತ್ತಿರ ಜೂನ್ 11 ರಂದು ಅಕ್ರಮವಾಗಿ ಆನೆದಂತಗಳನ್ನು ಮಾರಾಟಕ್ಕೆ ಯತ್ನಿಸುತಿದ್ದವರನ್ನು ಬಂಧಿಸಲಾಗಿದೆ.…

2 days ago