ಸಿನಿಮಾ ಪ್ರದರ್ಶನ ಪರವಾನಗಿ ನವೀಕರಣಗೊಳಿಸದ ಕಾರಣ ಅಮರಶ್ರೀ ಟಾಕೀಸ್ ಸೀಲ್ಡೌನ್ ಮಾಡಲಾಗಿದೆ.
ಮೂಡುಬಿದಿರೆ: ಸಿನಿಮಾ ಪ್ರದರ್ಶನ ಪರವಾನಗಿ ನವೀಕರಣಗೊಳಿಸದ ಕಾರಣ ಅಮರಶ್ರೀ ಚಿತ್ರಮಂದಿರವನ್ನು ಗುರುವಾರ ಸಂಜೆ ಕಂದಾಯ ಅಧಿಕಾರಿಗಳು ಪೊಲೀಸ್ ಇಲಾಖೆಯ ಸಹಯೋಗದಲ್ಲಿ ಸೀಲ್ ಡೌನ್ ಮಾಡಿದ್ದಾರೆ.
ದ.ಕ.ಜಿಲ್ಲಾಧಿಕಾರಿಯವರ ಆದೇಶದ ಮೇರೆಗೆ ಈ ಬೆಳವಣಿಗೆಗಳು ನಡೆದಿವೆ. ಜನವರಿ 2021 ಕ್ಕೆ ಪರವಾನಗಿ ಅವಧಿ ಮುಕ್ತಾಯಗೊಂಡಿದ್ದು, ಆ ಬಳಿಕವೂ ಕಳೆದ 18 ತಿಂಗಳಿಂದ ಟಾಕೀಸ್ ಕಾರ್ಯನಿರ್ವಹಿಸಿತ್ತು. ಕಳೆದ ನಾಲ್ಕು ದಶಕಗಳಿಂದ ಸದಭಿರುಚಿಯ ಸಿನಿಮಾ ಪ್ರದರ್ಶನದ ಮೂಲಕ ಗಮನ ಸೆಳೆದಿದ್ದ ಮೂಡುಬಿದಿರೆಯ ಈಗಿನ ಏಕೈಕ ಸಿನಿಮಾ ಟಾಕೀಸ್ ಇದೀಗ ಚಟುವಟಿಕೆ ಸ್ಥಗಿತಗೊಳಿಸುವಂತಾಗಿದೆ.
ಕಳೆದ 10 ವರ್ಷಗಳಿಂದ ಗುತ್ತಿಗೆದಾರರು ಈ ಸಿನಿಮಾ ಟಾಕೀಸ್ ನಡೆಸುತ್ತಿದ್ದು, ಸಕಾಲದಲ್ಲಿ ಅಗತ್ಯ ದಾಖಲೆಪತ್ರ ನವೀಕರಣಗೊಂಡಿಲ್ಲ. ಈ ಮಧ್ಯೆ ಟಾಕೀಸ್ ಮಾಲಕರು ಶಿಥಿಲವಾಗಿದ್ದ ಟಾಕೀಸ್ ಮೇಲ್ಬಾವಣಿ ಸಹಿತ ಮೂಲ ಸೌಕರ್ಯಗಳ ಅಭಿವೃದ್ಧಿಗೆ ಮುಂದಾಗಿದ್ದರು ಎನ್ನಲಾಗಿದೆ. ನವೀಕರಣ ಸಂಬಂಧಿ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಮತ್ತೆ ಟಾಕೀಸ್ ಕಾರ್ಯಾಚರಿಸುವ ನಿರೀಕ್ಷೆಯಿದೆ ಎಂದು ವರದಿಯಾಗಿದೆ.
ಬಿಸಿಯೂಟದ ಸಿಬ್ಬಂದಿಯೊಬ್ಬರ ಕೈ ವಿದ್ಯುತ್ ಚಾಲಿತ ತುರಿಮಣೆಯಲ್ಲಿ ಸಿಲುಕಿಕೊಂಡ ಸಂದರ್ಭದಲ್ಲಿ ಸಮಯಪ್ರಜ್ಞೆ ಮೆರೆದ ನರಿಕೊಂಬು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ…
ನಗರದ ಕೆಪಿಟಿ ಸಿಗ್ನಲ್ ಸಮೀಪ ರಸ್ತೆಯ ಮಧ್ಯಭಾಗದಲ್ಲೇ ಭಾರೀ ಗುಂಡಿಯೊಂದು ನಿರ್ಮಾಣವಾಗಿದ್ದು, ವಾಹನ ಸವಾರರಿಗೆ ಅಪಾಯ ಎದುರಾಗಿದೆ. ಈ ಮಾರ್ಗದಲ್ಲಿ…
ಆಟಿ ಅಮಾವಾಸ್ಯೆಯ ಪವಿತ್ರ ದಿನದಂದು ಬಂಟ್ವಾಳ ತಾಲೂಕಿನ ಐತಿಹಾಸಿಕ ಹಾಗೂ ಪೌರಾಣಿಕ ಪ್ರಸಿದ್ಧಿಯ ನರಹರಿ ಪರ್ವತ ಶ್ರೀ ಸದಾಶಿವ ದೇವಸ್ಥಾನದಲ್ಲಿ…
ತುಳುಕೂಟ ಬಂಟ್ವಾಳ ಹಾಗೂ ಶ್ರೀ ರಕ್ತೇಶ್ವರಿ ದೇವಿ ದೇವಸ್ಥಾನ, ಬಿ.ಸಿ.ರೋಡು ಇದರ ಆಡಳಿತ ಮಂಡಳಿಯ ಆಶ್ರಯದಲ್ಲಿ ವರ್ಷಂಪ್ರತಿ ನಡೆಯುವ ಆಟಿ…
ಲೋಕಾಯುಕ್ತದಲ್ಲಿ ದಾಖಲಾಗಿರುವ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಮೇಲಾಧಿಕಾರಿಗಳ ನಿರ್ದೇಶನದ ಮೇರೆಗೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ತಾಲೂಕು ಕಚೇರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು…
ಆಟಿ ಅಮಾವಾಸ್ಯೆಯ ಪ್ರಯುಕ್ತ ತಾಲೂಕಿನ ಪ್ರಸಿದ್ಧ ಕಾರಿಂಜ ಶ್ರೀ ಕಾರಿಂಜೇಶ್ವರ ದೇವಸ್ಥಾನದಲ್ಲಿ ಬುಧವಾರ ಶ್ರದ್ಧಾಭಕ್ತಿ ಹಾಗೂ ಸಂಭ್ರಮದಿಂದ ವಿವಿಧ ಧಾರ್ಮಿಕ…