ಕರಾವಳಿ

ಮೂಡುಬಿದಿರೆಯ ಅಮರಶ್ರೀ ಟಾಕೀಸ್ ಗೆ ಬೀಗ!!

ಸಿನಿಮಾ ಪ್ರದರ್ಶನ ಪರವಾನಗಿ ನವೀಕರಣಗೊಳಿಸದ ಕಾರಣ ಅಮರಶ್ರೀ ಟಾಕೀಸ್ ಸೀಲ್‌ಡೌನ್ ಮಾಡಲಾಗಿದೆ.

ಮೂಡುಬಿದಿರೆ: ಸಿನಿಮಾ ಪ್ರದರ್ಶನ ಪರವಾನಗಿ ನವೀಕರಣಗೊಳಿಸದ ಕಾರಣ ಅಮರಶ್ರೀ ಚಿತ್ರಮಂದಿರವನ್ನು ಗುರುವಾರ ಸಂಜೆ ಕಂದಾಯ ಅಧಿಕಾರಿಗಳು ಪೊಲೀಸ್ ಇಲಾಖೆಯ ಸಹಯೋಗದಲ್ಲಿ ಸೀಲ್ ಡೌನ್ ಮಾಡಿದ್ದಾರೆ.

ದ.ಕ.ಜಿಲ್ಲಾಧಿಕಾರಿಯವರ ಆದೇಶದ ಮೇರೆಗೆ ಈ ಬೆಳವಣಿಗೆಗಳು ನಡೆದಿವೆ. ಜನವರಿ 2021 ಕ್ಕೆ ಪರವಾನಗಿ ಅವಧಿ ಮುಕ್ತಾಯಗೊಂಡಿದ್ದು, ಆ ಬಳಿಕವೂ ಕಳೆದ 18 ತಿಂಗಳಿಂದ ಟಾಕೀಸ್ ಕಾರ್ಯನಿರ್ವಹಿಸಿತ್ತು. ಕಳೆದ ನಾಲ್ಕು ದಶಕಗಳಿಂದ ಸದಭಿರುಚಿಯ ಸಿನಿಮಾ ಪ್ರದರ್ಶನದ ಮೂಲಕ ಗಮನ ಸೆಳೆದಿದ್ದ ಮೂಡುಬಿದಿರೆಯ ಈಗಿನ ಏಕೈಕ ಸಿನಿಮಾ ಟಾಕೀಸ್ ಇದೀಗ ಚಟುವಟಿಕೆ ಸ್ಥಗಿತಗೊಳಿಸುವಂತಾಗಿದೆ.

ಕಳೆದ 10 ವರ್ಷಗಳಿಂದ ಗುತ್ತಿಗೆದಾರರು ಈ ಸಿನಿಮಾ ಟಾಕೀಸ್ ನಡೆಸುತ್ತಿದ್ದು, ಸಕಾಲದಲ್ಲಿ ಅಗತ್ಯ ದಾಖಲೆಪತ್ರ ನವೀಕರಣಗೊಂಡಿಲ್ಲ. ಈ ಮಧ್ಯೆ ಟಾಕೀಸ್ ಮಾಲಕರು ಶಿಥಿಲವಾಗಿದ್ದ ಟಾಕೀಸ್ ಮೇಲ್ಬಾವಣಿ ಸಹಿತ ಮೂಲ ಸೌಕರ್ಯಗಳ ಅಭಿವೃದ್ಧಿಗೆ ಮುಂದಾಗಿದ್ದರು ಎನ್ನಲಾಗಿದೆ. ನವೀಕರಣ ಸಂಬಂಧಿ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಮತ್ತೆ ಟಾಕೀಸ್ ಕಾರ್ಯಾಚರಿಸುವ ನಿರೀಕ್ಷೆಯಿದೆ ಎಂದು ವರದಿಯಾಗಿದೆ.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಬಂಟ್ವಾಳ: ಬಿಸಿಯೂಟ ಸಿಬ್ಬಂದಿಯ ಕೈ ತುರಿಮಣೆಯಲ್ಲಿ ಸಿಲುಕಿ ಅವಘಡ; ಸಮಯಪ್ರಜ್ಞೆ ಮೆರೆದ 5ನೇ ತರಗತಿ ಬಾಲಕ

ಬಿಸಿಯೂಟದ ಸಿಬ್ಬಂದಿಯೊಬ್ಬರ ಕೈ ವಿದ್ಯುತ್ ಚಾಲಿತ ತುರಿಮಣೆಯಲ್ಲಿ ಸಿಲುಕಿಕೊಂಡ ಸಂದರ್ಭದಲ್ಲಿ ಸಮಯಪ್ರಜ್ಞೆ ಮೆರೆದ ನರಿಕೊಂಬು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ…

5 hours ago

ಮಂಗಳೂರು: ಕೆಪಿಟಿ ಸಿಗ್ನಲ್ ಬಳಿ ಭಾರೀ ಗುಂಡಿ; ಅಪಾಯದಂಚಿನಲ್ಲಿ ವಾಹನ ಸವಾರರು

ನಗರದ ಕೆಪಿಟಿ ಸಿಗ್ನಲ್ ಸಮೀಪ ರಸ್ತೆಯ ಮಧ್ಯಭಾಗದಲ್ಲೇ ಭಾರೀ ಗುಂಡಿಯೊಂದು ನಿರ್ಮಾಣವಾಗಿದ್ದು, ವಾಹನ ಸವಾರರಿಗೆ ಅಪಾಯ ಎದುರಾಗಿದೆ. ಈ ಮಾರ್ಗದಲ್ಲಿ…

5 hours ago

ಬಂಟ್ವಾಳ: ನರಹರಿ ಪರ್ವತ ಶ್ರೀ ಸದಾಶಿವ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ ವಿಶೇಷ ತೀರ್ಥಸ್ನಾನ

ಆಟಿ ಅಮಾವಾಸ್ಯೆಯ ಪವಿತ್ರ ದಿನದಂದು ಬಂಟ್ವಾಳ ತಾಲೂಕಿನ ಐತಿಹಾಸಿಕ ಹಾಗೂ ಪೌರಾಣಿಕ ಪ್ರಸಿದ್ಧಿಯ ನರಹರಿ ಪರ್ವತ ಶ್ರೀ ಸದಾಶಿವ ದೇವಸ್ಥಾನದಲ್ಲಿ…

5 hours ago

ಬಂಟ್ವಾಳ: ಬಿ.ಸಿ.ರೋಡಿನಲ್ಲಿ ಸಾರ್ವಜನಿಕ ಪಾಲೆದ ಕೆತ್ತೆ ಕಷಾಯ ವಿತರಣೆ

ತುಳುಕೂಟ ಬಂಟ್ವಾಳ ಹಾಗೂ ಶ್ರೀ ರಕ್ತೇಶ್ವರಿ ದೇವಿ ದೇವಸ್ಥಾನ, ಬಿ.ಸಿ.ರೋಡು ಇದರ ಆಡಳಿತ ಮಂಡಳಿಯ ಆಶ್ರಯದಲ್ಲಿ ವರ್ಷಂಪ್ರತಿ ನಡೆಯುವ ಆಟಿ…

5 hours ago

ಬಂಟ್ವಾಳ: ದಕ್ಷಿಣ ಕನ್ನಡದ ತಾಲೂಕು ಕಚೇರಿಗಳಲ್ಲಿ ಲೋಕಾಯುಕ್ತ ಅಧಿಕಾರಿಗಳ ಪರಿಶೀಲನೆ

ಲೋಕಾಯುಕ್ತದಲ್ಲಿ ದಾಖಲಾಗಿರುವ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಮೇಲಾಧಿಕಾರಿಗಳ ನಿರ್ದೇಶನದ ಮೇರೆಗೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ತಾಲೂಕು ಕಚೇರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು…

6 hours ago

ಬಂಟ್ವಾಳ: ಕಾರಿಂಜ ಶ್ರೀ ಕಾರಿಂಜೇಶ್ವರ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ ಸಂಭ್ರಮ

ಆಟಿ ಅಮಾವಾಸ್ಯೆಯ ಪ್ರಯುಕ್ತ ತಾಲೂಕಿನ ಪ್ರಸಿದ್ಧ ಕಾರಿಂಜ ಶ್ರೀ ಕಾರಿಂಜೇಶ್ವರ ದೇವಸ್ಥಾನದಲ್ಲಿ ಬುಧವಾರ ಶ್ರದ್ಧಾಭಕ್ತಿ ಹಾಗೂ ಸಂಭ್ರಮದಿಂದ ವಿವಿಧ ಧಾರ್ಮಿಕ…

10 hours ago