ಮಂಗಳೂರು: ಮಂಗಳೂರು ಜಂಕ್ಷನ್ ರೈಲು ನಿಲ್ದಾಣದಲ್ಲಿ ನಿಂತಿದ್ದ ರೈಲಿನಲ್ಲಿ ಅನಾಮಧೇಯ ಬ್ಯಾಗ್ ನಲ್ಲಿ ಪತ್ತೆಯಾದ ಗಾಂಜಾವನ್ನು ರೈಲ್ವೇ ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಗುರುವಾರ ಬೆಳಗ್ಗೆ ೧೧.೧೫ ರ ಸುಮಾರಿಗೆ ಮಂಗಳೂರು ರೈಲ್ವೇ ನಿಲ್ದಾಣದ ಎರಡನೇ ಫ್ಲ್ಯಾಟ್ ಫಾರಂನಲ್ಲಿ ನಿಲುಗಡೆಗೊಂಡಿದ್ದ ಕಾರವಾರ-ಯಶವಂತಪುರ ಎಕ್ಸ್ಪ್ರೆಸ್ ರೈಲಿನಲ್ಲಿ 3,16,650 ರೂಪಾಯಿ ಮೌಲ್ಯದ 6.333 ಕೇಜಿ ತೂಕದ ಒಣ ಗಾಂಜಾ ಪತ್ತೆಯಾಗಿತ್ತು. ರೈಲಿನ ನಿತ್ಯ ತಪಾಸಣೆ ವೇಳೆ ಸಿಕ್ಕ ಅನಾಮಧೇಯ ಬ್ಯಾಗ್ನಲ್ಲಿ ಗಾಂಜಾ ಪತ್ತೆಯಾಗಿದೆ. ಪ್ರಕರಣದಲ್ಲಿ ಯಾರನ್ನೂ ಬಂಧಿಸಿಲ್ಲ. ಮಂಗಳೂರು ಪೂರ್ವಬಕಾರಿ ವಿಭಾಗದಲ್ಲಿ ಎನ್ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ಕಾರ್ಯಾಚರಣೆಯಲ್ಲಿ ಪಾಲ್ಘಾಟ್ ವಿಭಾಗದ ಸಿಐಬಿ ಮುಖ್ಯ ನಿರೀಕ್ಷಕ ಎನ್. ಕೇಸವದಾಸ್, ಮಂಗಳೂರು ಜಂಕ್ಷನ್ ಇನ್ಸ್ಪೆಕ್ಟರ್ ಮನೋಜ್ ಕುಮಾರ್ ಯಾದವ್, ಸಿಐಬಿ ಎಸ್ಐ ದೀಪಕ್ ಎ.ಪಿ., ಅಜಿತ್ ಅಶೋಕ್ ಎ.ಪಿ, ಎಎಸ್ಐ ಸಾಜು ಕೆ., ಎಸ್.ಎಂ. ರವಿ., ಮಂಗಳೂರು ಜಂಕ್ಷನ್ ಎಎಸ್ಐ ಕೆ. ಶಶಿ, ಸಿಐಬಿ ಹೆಡ್ ಕಾನ್ಸ್ಟೆಬಲ್ ಎನ್. ಅಶೋಕ್, ಅಜೀಶ್ ಒ.ಕೆ., ಜಂಕ್ಷನ್ ಕಾನ್ಸ್ಟೆಬಲ್ ಟಿ.ಪಾಂಡುರಂಗ ಭಾಗವಹಿಸಿದ್ದರು.



