ಮಂಗಳೂರು: ಮಂಗಳೂರು ಜಂಕ್ಷನ್ ರೈಲು ನಿಲ್ದಾಣದಲ್ಲಿ ನಿಂತಿದ್ದ ರೈಲಿನಲ್ಲಿ ಅನಾಮಧೇಯ ಬ್ಯಾಗ್ ನಲ್ಲಿ ಪತ್ತೆಯಾದ ಗಾಂಜಾವನ್ನು ರೈಲ್ವೇ ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಗುರುವಾರ ಬೆಳಗ್ಗೆ ೧೧.೧೫ ರ ಸುಮಾರಿಗೆ ಮಂಗಳೂರು ರೈಲ್ವೇ ನಿಲ್ದಾಣದ ಎರಡನೇ ಫ್ಲ್ಯಾಟ್ ಫಾರಂನಲ್ಲಿ ನಿಲುಗಡೆಗೊಂಡಿದ್ದ ಕಾರವಾರ-ಯಶವಂತಪುರ ಎಕ್ಸ್ಪ್ರೆಸ್ ರೈಲಿನಲ್ಲಿ 3,16,650 ರೂಪಾಯಿ ಮೌಲ್ಯದ 6.333 ಕೇಜಿ ತೂಕದ ಒಣ ಗಾಂಜಾ ಪತ್ತೆಯಾಗಿತ್ತು. ರೈಲಿನ ನಿತ್ಯ ತಪಾಸಣೆ ವೇಳೆ ಸಿಕ್ಕ ಅನಾಮಧೇಯ ಬ್ಯಾಗ್ನಲ್ಲಿ ಗಾಂಜಾ ಪತ್ತೆಯಾಗಿದೆ. ಪ್ರಕರಣದಲ್ಲಿ ಯಾರನ್ನೂ ಬಂಧಿಸಿಲ್ಲ. ಮಂಗಳೂರು ಪೂರ್ವಬಕಾರಿ ವಿಭಾಗದಲ್ಲಿ ಎನ್ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ಕಾರ್ಯಾಚರಣೆಯಲ್ಲಿ ಪಾಲ್ಘಾಟ್ ವಿಭಾಗದ ಸಿಐಬಿ ಮುಖ್ಯ ನಿರೀಕ್ಷಕ ಎನ್. ಕೇಸವದಾಸ್, ಮಂಗಳೂರು ಜಂಕ್ಷನ್ ಇನ್ಸ್ಪೆಕ್ಟರ್ ಮನೋಜ್ ಕುಮಾರ್ ಯಾದವ್, ಸಿಐಬಿ ಎಸ್ಐ ದೀಪಕ್ ಎ.ಪಿ., ಅಜಿತ್ ಅಶೋಕ್ ಎ.ಪಿ, ಎಎಸ್ಐ ಸಾಜು ಕೆ., ಎಸ್.ಎಂ. ರವಿ., ಮಂಗಳೂರು ಜಂಕ್ಷನ್ ಎಎಸ್ಐ ಕೆ. ಶಶಿ, ಸಿಐಬಿ ಹೆಡ್ ಕಾನ್ಸ್ಟೆಬಲ್ ಎನ್. ಅಶೋಕ್, ಅಜೀಶ್ ಒ.ಕೆ., ಜಂಕ್ಷನ್ ಕಾನ್ಸ್ಟೆಬಲ್ ಟಿ.ಪಾಂಡುರಂಗ ಭಾಗವಹಿಸಿದ್ದರು.
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…
ಕಡಬ ತಾಲೂಕು ಕೊಯಿಲ ಮತ್ತು ರಾಮಕುಂಜ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕ ರಸ್ತೆಯುದ್ದಕ್ಕೂ ಉಂಟಾಗಿರುವ ಹೊಂಡಗಳಿಗೆ ಸ್ಥಳಿಯರು ಶ್ರಮ…
ರಾಷ್ಟ್ರೀಯ ಹೆದ್ದಾರಿಯ ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದಲ್ಲಿ ಸರ್ವೀಸ್ ರಸ್ತೆ ಹೊಂಡಗುಂಡಿಗಳಿಂದ ತುಂಬಿ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ ಎಂದು ಸ್ಥಳೀಯರು…
ಮಾದಕ ದ್ರವ್ಯ ಸಾಗಾಟ ಹಾಗೂ ಮಾರಾಟ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪದಡಿ ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯ 80 ಬಡಗಬೆಟ್ಟು ಗ್ರಾಮದ…
ಮಂಗಳೂರು ನಗರದ ಪದವು ಗ್ರಾಮದ ಜೋಡುಕಟ್ಟೆ ಮರೋಳಿ ಹತ್ತಿರ ಜೂನ್ 11 ರಂದು ಅಕ್ರಮವಾಗಿ ಆನೆದಂತಗಳನ್ನು ಮಾರಾಟಕ್ಕೆ ಯತ್ನಿಸುತಿದ್ದವರನ್ನು ಬಂಧಿಸಲಾಗಿದೆ.…