ಮುಲ್ಕಿ: ಮುಲ್ಕಿ ತಾಲ್ಲೂಕು ವ್ಯಾಪ್ತಿಯ ಪಡುಪಣಂಬೂರು ಗ್ರಾಮ ಪಂಚಾಯತ್ ಗೆ ಮುಂದಿನ ಎರಡುವರೆ ವರ್ಷದ ಅವಧಿಗೆ ನೂತನ ಅಧ್ಯಕ್ಷರಾಗಿ ಕುಸುಮಾ ಚಂದ್ರಶೇಖರ್ ಹಾಗೂ ಉಪಾಧ್ಯಕ್ಷರಾಗಿ ಹೇಮನಾಥ ಅಮಿನ್ ತೋಕೂರು ಆಯ್ಕೆಯಾಗಿದ್ದಾರೆ.
ಪಂಚಾಯಿತಿ ಸಭಾಭವನದಲ್ಲಿ ನಡೆದ ಆಯ್ಕೆ ಪ್ರಕ್ರಿಯೆಯನ್ನು ಚುನಾವಣಾ ಅಧಿಕಾರಿ ಲೋಕೇಶ್, ಹಾಗೂ ಪ್ರಭಾರ ತಾಲೂಕು ಪಂಚಾಯತ್ ನಿರ್ವಹಣಾಧಿಕಾರಿ ಹರಿಶ್ಚಂದ್ರ ನೆರವೇರಿಸಿಕೊಟ್ಟರು.
ಬಿಜೆಪಿ ಬೆಂಬಲಿತ ಪಡುಪಣಂಬೂರು ಗ್ರಾಮ ಪಂಚಾಯಿತಿಯಲ್ಲಿ ಒಟ್ಟು 16 ವಾರ್ಡ್ ಗಳಿದ್ದು ಕಳೆದ ಚುನಾವಣೆಯಲ್ಲಿ 15 ಬಿಜೆಪಿ ಬೆಂಬಲಿತ ಸದಸ್ಯರು ಹಾಗೂ ಒಂದು ಕಾಂಗ್ರೆಸ್ ಬೆಂಬಲಿತ ಸದಸ್ಯರು ಇದ್ದಾರೆ.
ಬಿಗಿ ಭದ್ರತೆಯಲ್ಲಿ ನಡೆದ ಚುನಾವಣೆಯಲ್ಲಿ ನೂತನ ಅಧ್ಯಕ್ಷರ ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಯಿತು. ಈ ಬಾರಿ ಸರಕಾರದ ನಿಯಮದಂತೆ ಅಧ್ಯಕ್ಷರು ಸಾಮಾನ್ಯ ಮಹಿಳೆ ಹಾಗೂ ಉಪಾಧ್ಯಕ್ಷರು ಸಾಮಾನ್ಯ ಬಂದಿದ್ದು ಕೆಲವು ಸದಸ್ಯರು ಆಕಾಂಕ್ಷಿಗಳಾಗಿದ್ದರು.
ನೂತನವಾಗಿ ಆಯ್ಕೆಯಾದ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರನ್ನು ಬೆಂಗಳೂರಿನ ಅಂತರಾಷ್ಟ್ರೀಯ ವಾಸ್ತುತಜ್ಞ ಹಾಗೂ ವೈಜ್ಞಾನಿಕ ಜ್ಯೋತಿಷಿ ಶ್ರೀ ಶ್ರೀಚಂದ್ರಶೇಖರ ಸ್ವಾಮೀಜಿ, ಮುಲ್ಕಿ ಸೀಮೆ ಅರಸರಾದ ದುಗ್ಗಣ್ಣ ಸಾವಂತರು, ಗೌತಮ್ ಜೈನ್ ಮುಲ್ಕಿ ಅರಮನೆ, ಕಂಬಳ ಸಮಿತಿ ಅಧ್ಯಕ್ಷ ಕಿರಣ್ ಶೆಟ್ಟಿ ಕೋಲ್ನಾಡು ಗುತ್ತು ಮಂಡಲಾಧ್ಯಕ್ಷ ಸುನಿಲ್ ಆಳ್ವ, ಮುಲ್ಕಿ ನ ಪಂ ಮಾಜೀ ಉಪಾಧ್ಯಕ್ಷ ಸತೀಶ್ ಅಂಚನ್, ಸದಸ್ಯ ಶೈಲೇಶ್, ಬಿಜೆಪಿ ನಾಯಕರಾದ ಅಭಿಲಾಷ್ ಶೆಟ್ಟಿ ಕಟೀಲು, ದಿನೇಶ್ ಪುತ್ರನ್ ಪುರುಷೋತ್ತಮ್ ಬಡಗಿತ್ಲು, ಪಂಚಾಯತ್ ಮಾಜೀ ಅಧ್ಯಕ್ಷರುಗಳಾದ ವಿನೋದ್ ಸಾಲ್ಯಾನ್ ಬೆಳ್ಳಾಯರು, ಮೋಹನ್ ದಾಸ್, ಸದಸ್ಯರಾದ ಸಂತೋಷ್ ಕುಮಾರ್ ಉಮೇಶ್ ಪೂಜಾರಿ,ದಿನೇಶ್ ಹೊಸಲಕ್ಕೆ, ಹರಿಪ್ರಸಾದ್ , ಕೃಷ್ಣ ಶೆಟ್ಟಿಗಾರ್ ಕಲ್ಲಾಪು, ವಿನೋದ್ ತೋಕೂರು, ದಿನೇಶ್ ಸುವರ್ಣ ಬೆಳ್ಳಾಯರು ಹಾಗೂ ಪಂಚಾಯತ್ ಸಿಬ್ಬಂದಿಗಳು ಅಭಿನಂದಿಸಿದ್ದಾರೆ.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…