ಕರಾವಳಿ

ಮಂದಾರ ತ್ಯಾಜ್ಯ ದುರಂತ, ಸಿಕ್ಕಿಲ್ಲ ಪರಿಹಾರ, ಈಡೇರಿಲ್ಲ ಭರವಸೆ, ಪರಿಹಾರ ನೀಡುವಲ್ಲಿ ವಿಫಲತೆ

ದಕ್ಷಿಣ ಕನ್ನಡ : ಮಂಗಳೂರಿನಲ್ಲಿ 2019ರ ಆಗಸ್ಟ್ 6ರಂದು ದೇಶ ಕಂಡು ಕೇಳದೆ ಭೀಕರ ತ್ಯಾಜ್ಯ ದುರಂತದಲ್ಲಿ ಸರ್ವಸ್ವವನ್ನು ಕಳೆದುಕೊಂಡ ಸಂತ್ರಸ್ತರಿಗೆ ಪೂರ್ಣ ಪ್ರಮಾಣದ ಪರಿಹಾರ ಇನ್ನೂ ಕೂಡ ಮರೀಚಿಕೆಯಾಗಿ ಉಳಿದಿದೆ.


ಘಟನೆ ಸಂಭವಿಸಿ 48 ತಿಂಗಳುಗಳ ಕಳೆದಿದ್ದು ಅಂದು ಜನಪ್ರತಿನಿಧಿಗಳು ಅಧಿಕಾರಿಗಳು ಬಂದು ಮೂರು ತಿಂಗಳ ಒಳಗಾಗಿ ಪೂರ್ಣಕಾಲಿಕ ಪರಿಹಾರ ನೀಡುವ ಭರವಸೆಯನ್ನು ನೀಡಿದ್ದರು ಆದರೆ ಅದು ಇಂದಿಗೂ ಈಡೇರದೆ ಇರುವುದು ವಿಪರ್ಯಾಸ.
ಅಂದು ಭರವಸೆ ನೀಡಿದ ಜನಪ್ರತಿನಿಧಿಗಳು ಕೈ ಚೆಲ್ಲಿ ಕುಳಿತಿದ್ದಾರೆ ಅಥವಾ ಪ್ರಕರಣವನ್ನು ಮರೆತಿದ್ದಾರೆ ಅಂದು ಅಧಿಕಾರದಲ್ಲಿದ್ದ ಅಧಿಕಾರಿಗಳು ಬೇರೆಡೆ ವರ್ಗಾವಣೆ ಹೊಂದಿದ್ದಾರೆ ಅಥವಾ ನಿವೃತ್ತರಾಗಿರಬಹುದು ಅಥವಾ ಕೆಲಸ ತೊರೆದಿರುವ ಸಾಧ್ಯತೆಯೂ ಇದೆ.
ಆದರೆ ಅಂದಿನ ಭರವಸೆಯನ್ನ ನಂಬಿದ ಸಂತ್ರಸ್ತರು ತನ್ನ ಸರ್ವಸ್ವನ್ನು ಕಳಕೊಂಡು ಸಂತ್ರಸ್ತರು ಮಂಕಾಗಿದ್ದಾರೆ ಕೆಲವರು ಇಹಲೋಕವನ್ನು ತ್ಯಜಿಸಿದ್ದಾರೆ ಇನ್ನು ಕೆಲವರು ಮಾನಸಿಕ ಖಿನ್ನತೆ ಒಳಗಾಗಿದ್ದಾರೆ.


ಅಂದು ಆಡಳಿತದಲ್ಲಿದ್ದ ಜನಪ್ರತಿನಿಧಿಗಳು ಇಂದು ಪ್ರತಿಪಕ್ಷದಲ್ಲಿ ಕುಳಿತಿದ್ದಾರೆ, ಅಂದು ಪ್ರತಿಪಕ್ಷದಲ್ಲಿ ಇದ್ದವರು ಇಂದು ಆಡಳಿತ ನಡೆಸುತ್ತಿದ್ದಾರೆ. ಆದರೂ ಸಂತ್ರಸ್ತರ ಸಮಸ್ಯೆ ಬಗೆ ಹರಿದಿಲ್ಲ. ಅಂದು ಮಂದಾರ ತ್ಯಾಜ್ಯ ದುರಂತ ಸ್ಥಳಕ್ಕೆ ಭೇಟಿ ನೀಡಿದ್ದ ಮತ್ತು ಸಂತ್ರಸ್ತರಿಗೆ ಪರಿಹಾರಕ್ಕೆ ಒತ್ತಾಯಿಸಿದ್ದ ಸಿದ್ದರಾಮಯ್ಯ ಅವರು ಇಂದು ರಾಜ್ಯದ ಮುಖ್ಯಮಂತ್ರಿ ಆಗಿದ್ದಾರೆ, ಮಾನ್ಯ ಉಚ್ಚ ನ್ಯಾಯಾಲಯದ ಆದೇಶದಂತೆ ಸಂತ್ರಸ್ತರಿಗೆ ಮಧ್ಯಂತರ ಪರಿಹಾರ ಮತ್ತು ಕೃಷಿ ಪರಿಹಾರ ದೊರಕಿರುತ್ತದೆ. ಪೂರ್ಣ ಪ್ರಮಾಣದ ಪರಿಹಾರಕ್ಕಾಗಿ ಸಂತ್ರಸ್ತರು ಕಾಯುತ್ತಿದ್ದಾರೆ.

ಧಾರ್ಮಿಕ ನಂಬಿಕೆಗಳು ತ್ಯಾಜ್ಯದ ಒಳಗೆ ಹುದುಗಿ ಹೋಗಿವೆ, ದೈವಸ್ಥಾನ ನಾಗಬನ ಕಣ್ಮರೆಯಾಗಿದೆ, ಅದು ಮರು ಸ್ಥಾಪಿಸಿಕೊಡುತ್ತೇವೆ ಎಂದು ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಭರವಸೆ ನೀಡಿದ್ದರು, ಅದಕ್ಕೆ ಸಂಬಂಧಪಟ್ಟವರು ಪರಿಹಾರವನ್ನು ಪಡೆದುಕೊಂಡಿಲ್ಲ, ಈಗ ಎಷ್ಟು ಬಾರಿ ಕಚೇರಿಗೆ ಅಲೆದಾಡಿದರು, ಮನವಿ ನೀಡಿದ್ರು ಸ್ಪಂದಿಸುತ್ತಿಲ್ಲ.
ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಸಂಪರ್ಕಕ್ಕಾಗಿ ಅಲೆದು ಅಲೆದು ಆರೋಗ್ಯವೇ ಹಾಳಾಗಿದ್ದೇ ವಿನಹ ಯಾವುದೇ ಪ್ರಯೋಜನವಾಗಿಲ್ಲ ಎನ್ನುತ್ತಾರೆ ಸಂತ್ರಸ್ತ ಡಾಕ್ಟರ್ ಮಂದಾರ ರಾಜೇಶ್ ಭಟ್.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಬಂಟ್ವಾಳ: ಬಿಸಿಯೂಟ ಸಿಬ್ಬಂದಿಯ ಕೈ ತುರಿಮಣೆಯಲ್ಲಿ ಸಿಲುಕಿ ಅವಘಡ; ಸಮಯಪ್ರಜ್ಞೆ ಮೆರೆದ 5ನೇ ತರಗತಿ ಬಾಲಕ

ಬಿಸಿಯೂಟದ ಸಿಬ್ಬಂದಿಯೊಬ್ಬರ ಕೈ ವಿದ್ಯುತ್ ಚಾಲಿತ ತುರಿಮಣೆಯಲ್ಲಿ ಸಿಲುಕಿಕೊಂಡ ಸಂದರ್ಭದಲ್ಲಿ ಸಮಯಪ್ರಜ್ಞೆ ಮೆರೆದ ನರಿಕೊಂಬು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ…

4 hours ago

ಮಂಗಳೂರು: ಕೆಪಿಟಿ ಸಿಗ್ನಲ್ ಬಳಿ ಭಾರೀ ಗುಂಡಿ; ಅಪಾಯದಂಚಿನಲ್ಲಿ ವಾಹನ ಸವಾರರು

ನಗರದ ಕೆಪಿಟಿ ಸಿಗ್ನಲ್ ಸಮೀಪ ರಸ್ತೆಯ ಮಧ್ಯಭಾಗದಲ್ಲೇ ಭಾರೀ ಗುಂಡಿಯೊಂದು ನಿರ್ಮಾಣವಾಗಿದ್ದು, ವಾಹನ ಸವಾರರಿಗೆ ಅಪಾಯ ಎದುರಾಗಿದೆ. ಈ ಮಾರ್ಗದಲ್ಲಿ…

4 hours ago

ಬಂಟ್ವಾಳ: ನರಹರಿ ಪರ್ವತ ಶ್ರೀ ಸದಾಶಿವ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ ವಿಶೇಷ ತೀರ್ಥಸ್ನಾನ

ಆಟಿ ಅಮಾವಾಸ್ಯೆಯ ಪವಿತ್ರ ದಿನದಂದು ಬಂಟ್ವಾಳ ತಾಲೂಕಿನ ಐತಿಹಾಸಿಕ ಹಾಗೂ ಪೌರಾಣಿಕ ಪ್ರಸಿದ್ಧಿಯ ನರಹರಿ ಪರ್ವತ ಶ್ರೀ ಸದಾಶಿವ ದೇವಸ್ಥಾನದಲ್ಲಿ…

4 hours ago

ಬಂಟ್ವಾಳ: ಬಿ.ಸಿ.ರೋಡಿನಲ್ಲಿ ಸಾರ್ವಜನಿಕ ಪಾಲೆದ ಕೆತ್ತೆ ಕಷಾಯ ವಿತರಣೆ

ತುಳುಕೂಟ ಬಂಟ್ವಾಳ ಹಾಗೂ ಶ್ರೀ ರಕ್ತೇಶ್ವರಿ ದೇವಿ ದೇವಸ್ಥಾನ, ಬಿ.ಸಿ.ರೋಡು ಇದರ ಆಡಳಿತ ಮಂಡಳಿಯ ಆಶ್ರಯದಲ್ಲಿ ವರ್ಷಂಪ್ರತಿ ನಡೆಯುವ ಆಟಿ…

5 hours ago

ಬಂಟ್ವಾಳ: ದಕ್ಷಿಣ ಕನ್ನಡದ ತಾಲೂಕು ಕಚೇರಿಗಳಲ್ಲಿ ಲೋಕಾಯುಕ್ತ ಅಧಿಕಾರಿಗಳ ಪರಿಶೀಲನೆ

ಲೋಕಾಯುಕ್ತದಲ್ಲಿ ದಾಖಲಾಗಿರುವ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಮೇಲಾಧಿಕಾರಿಗಳ ನಿರ್ದೇಶನದ ಮೇರೆಗೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ತಾಲೂಕು ಕಚೇರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು…

5 hours ago

ಬಂಟ್ವಾಳ: ಕಾರಿಂಜ ಶ್ರೀ ಕಾರಿಂಜೇಶ್ವರ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ ಸಂಭ್ರಮ

ಆಟಿ ಅಮಾವಾಸ್ಯೆಯ ಪ್ರಯುಕ್ತ ತಾಲೂಕಿನ ಪ್ರಸಿದ್ಧ ಕಾರಿಂಜ ಶ್ರೀ ಕಾರಿಂಜೇಶ್ವರ ದೇವಸ್ಥಾನದಲ್ಲಿ ಬುಧವಾರ ಶ್ರದ್ಧಾಭಕ್ತಿ ಹಾಗೂ ಸಂಭ್ರಮದಿಂದ ವಿವಿಧ ಧಾರ್ಮಿಕ…

9 hours ago