ಮಂಗಳೂರಿನ ಹಲವಾರು ಅಂಗನವಾಡಿಗಳಿಗೆ ಕೊಳೆತ ಮೊಟ್ಟೆ ಪೂರೈಕೆ ಆಗುತ್ತಿರುವುದು ಕಂಡು ಬಂದಿದೆ ಎಂದು ಶಾಸಕ ಡಾ. ವೈ. ಭರತ್ ಶೆಟ್ಟಿ ಆರೋಪಿಸಿದ್ದಾರೆ.
ಇತ್ತೀಚೆಗೆ ಅಂಗನವಾಡಿಗೆ ಕೊಳೆತ ಮೊಟ್ಟೆಗಳು ಪೂರೈಕೆಯಾಗುತ್ತಿರವ ಬಗ್ಗೆ ಸಾಕಷ್ಟು ಆಕ್ರೋಶ ವ್ಯಕ್ತವಾಗಿತ್ತು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಂಗನವಾಡಿಗಳಿಗೆ ಮೊಟ್ಟೆ ಪೂರೈಕೆ ಮಾಡುವ ಗುತ್ತಿಗೆದಾರನನ್ನು ಬ್ಲಾಕ್ ಲಿಸ್ಟ್ ಗೆ ಹಾಕುತ್ತೇನೆಂದು ಗುಡುಗಿದ್ದರು. ಆದರೆ ಇನ್ನೂ ಈ ಸಮಸ್ಯೆ ಪರಿಹಾರವಾದಂತಿಲ್ಲ. ಇದೀಗ ಮತ್ತೆ ಮತ್ತೆ ಮಂಗಳೂರಿನ ಹಲವೆಡೆ ಮತ್ತೆ ಕೊಳೆತ ಮೊಟ್ಟೆ ಪೂರೈಕೆ ಆಗುತ್ತಿರುವುದು ಕಂಡು ಬಂದಿದೆ. ಕಾಟಿಪಳ್ಳದ ಆಸುಪಾಸಿನಲ್ಲಿ ಗರ್ಭಿಣಿಯರಿಗೆ ವಿತರಿಸಲಾಗುವ ಮೊಟ್ಟೆಗಳು ಅಂಗನವಾಡಿಗಳಿಗೆ ಪೂರೈಕೆಯಾಗಿದ್ದು,ಹಾಳಾದ ಸ್ಥಿತಿಯಲ್ಲಿ ದೊರೆತಿದೆ.
ಆಕಾಶಭವನದಲ್ಲಿ ಗರ್ಭಿಣಿ ಮಹಿಳೆ, ಮಗು ಮೊಟ್ಟೆ ತಿಂದು ಈ ಹಿಂದೆ ಅಸ್ವಸ್ಥರಾಗಿದ್ದರು. ಕಳೆದ ತಿಂಗಳು ಮಂಗಳೂರಿನ ಹಲವೆಡೆ ಅಂಗನವಾಡಿಗಳಿಗೆ ಕೊಳೆತ ಮೊಟ್ಟೆ ಪೂರೈಕೆಯಾಗಿದೆ. ಈ ಬಾರಿಯೂ ಕೆಲವು ಕಡೆಗಳಿಗೆ ಕೊಳೆತ ಮೊಟ್ಟೆ ಪೂರೈಕೆ ಆಗಿರುವ ಮಾಹಿತಿ ಲಭ್ಯವಾಗಿದೆ. ಮತ್ತೆ ಅಂಗನವಾಡಿಗಳಿಗೆ ಗುತ್ತಿಗೆದಾರರು ಕೊಳೆತ ಮೊಟ್ಟೆ ಪೂರೈಸಿರುವ ಬಗ್ಗೆ ಆಕ್ರೋಶ ಕೇಳಿ ಬರುತ್ತಿದೆ.
ಇದರ ಬಗ್ಗೆ ಮಾಧ್ಯಮದವರ ಜತೆ ಮಾತನಾಡಿದ ಭರತ್ ಶೆಟ್ಟಿ ಅವರು ಗರ್ಭಿಣಿಯರಿಗೆ ವಿತರಿಸಲಾಗುವ ಮೊಟ್ಟೆಗಳು ಅಂಗನವಾಡಿಗಳಿಗೆ ಪೂರೈಕೆಯಾಗಿದ್ದು, ಕೊಳೆತ ಸ್ಥಿತಿಯಲ್ಲಿ ದೊರೆತಿವೆ. ಕೆಲವು ದಿನಗಳ ಹಿಂದೆ ಓರ್ವ ಮಹಿಳೆ ಮತ್ತು ಮಗು ಮೊಟ್ಟೆ ತಿಂದು ಹಿಂದೆ ಅಸ್ವಸ್ಥರಾದ ಬಗ್ಗೆ ಗಮನಕ್ಕೆ ಬಂದಿದೆ. ಈ ಬಗ್ಗೆ ಸರಕಾರ ಕೂಡಲೇ ಕ್ರಮ ಕೈಗೊಳ್ಳ ಬೇಕು. ಕೊಳೆತ ಮೊಟ್ಟೆ ಪೂರೈಕೆಯನ್ನು ಕೂಡಲೇ ತಡೆಯ ಬೇಕು ಎಂದು ಒತ್ತಾಯಿಸಿದ್ದಾರೆ.
ಬಿಸಿಯೂಟದ ಸಿಬ್ಬಂದಿಯೊಬ್ಬರ ಕೈ ವಿದ್ಯುತ್ ಚಾಲಿತ ತುರಿಮಣೆಯಲ್ಲಿ ಸಿಲುಕಿಕೊಂಡ ಸಂದರ್ಭದಲ್ಲಿ ಸಮಯಪ್ರಜ್ಞೆ ಮೆರೆದ ನರಿಕೊಂಬು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ…
ನಗರದ ಕೆಪಿಟಿ ಸಿಗ್ನಲ್ ಸಮೀಪ ರಸ್ತೆಯ ಮಧ್ಯಭಾಗದಲ್ಲೇ ಭಾರೀ ಗುಂಡಿಯೊಂದು ನಿರ್ಮಾಣವಾಗಿದ್ದು, ವಾಹನ ಸವಾರರಿಗೆ ಅಪಾಯ ಎದುರಾಗಿದೆ. ಈ ಮಾರ್ಗದಲ್ಲಿ…
ಆಟಿ ಅಮಾವಾಸ್ಯೆಯ ಪವಿತ್ರ ದಿನದಂದು ಬಂಟ್ವಾಳ ತಾಲೂಕಿನ ಐತಿಹಾಸಿಕ ಹಾಗೂ ಪೌರಾಣಿಕ ಪ್ರಸಿದ್ಧಿಯ ನರಹರಿ ಪರ್ವತ ಶ್ರೀ ಸದಾಶಿವ ದೇವಸ್ಥಾನದಲ್ಲಿ…
ತುಳುಕೂಟ ಬಂಟ್ವಾಳ ಹಾಗೂ ಶ್ರೀ ರಕ್ತೇಶ್ವರಿ ದೇವಿ ದೇವಸ್ಥಾನ, ಬಿ.ಸಿ.ರೋಡು ಇದರ ಆಡಳಿತ ಮಂಡಳಿಯ ಆಶ್ರಯದಲ್ಲಿ ವರ್ಷಂಪ್ರತಿ ನಡೆಯುವ ಆಟಿ…
ಲೋಕಾಯುಕ್ತದಲ್ಲಿ ದಾಖಲಾಗಿರುವ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಮೇಲಾಧಿಕಾರಿಗಳ ನಿರ್ದೇಶನದ ಮೇರೆಗೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ತಾಲೂಕು ಕಚೇರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು…
ಆಟಿ ಅಮಾವಾಸ್ಯೆಯ ಪ್ರಯುಕ್ತ ತಾಲೂಕಿನ ಪ್ರಸಿದ್ಧ ಕಾರಿಂಜ ಶ್ರೀ ಕಾರಿಂಜೇಶ್ವರ ದೇವಸ್ಥಾನದಲ್ಲಿ ಬುಧವಾರ ಶ್ರದ್ಧಾಭಕ್ತಿ ಹಾಗೂ ಸಂಭ್ರಮದಿಂದ ವಿವಿಧ ಧಾರ್ಮಿಕ…